AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿದ್ದರೂ ಸುಮ್ಮನೆ ಕೂತಿಲ್ಲ ‘ಜೊತೆ ಜೊತೆಯಲಿ’ ಅನಿರುದ್ಧ್​​; ಸಂಕಷ್ಟದ ಸಮಯದಲ್ಲಿ ಅಳಿಲು ಸೇವೆ

ಕೊವಿಡ್​ ಮಿತಿಮೀರಿ ಹರಡುತ್ತಿರುವುದರಿಂದ ಶೂಟಿಂಗ್​ ನಿಲ್ಲಿಸಲಾಗಿದೆ. ಹೀಗಾಗಿ, ಅನಿರುದ್ಧ ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಟಿವಿ9 ಕನ್ನಡ ಡಿಜಿಟಲ್​ ಜತೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಮನೆಯಲ್ಲಿದ್ದರೂ ಸುಮ್ಮನೆ ಕೂತಿಲ್ಲ ‘ಜೊತೆ ಜೊತೆಯಲಿ’ ಅನಿರುದ್ಧ್​​; ಸಂಕಷ್ಟದ ಸಮಯದಲ್ಲಿ ಅಳಿಲು ಸೇವೆ
ಅನಿರುದ್ಧ್​
ರಾಜೇಶ್ ದುಗ್ಗುಮನೆ
|

Updated on:May 15, 2021 | 3:05 PM

Share

ಸಾಹಸ ಸಿಂಹ ವಿಷ್ಣುವರ್ಧನ್​ ಅಳಿಯ ಅನಿರುದ್ಧ ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡರು. ಕರ್ನಾಟಕದ ಮೂಲೆಮೂಲೆಯಲ್ಲೂ ಅನಿರುದ್ಧ ಅವರು ಆರ್ಯವರ್ಧನ್​ ಆಗಿ ಹೆಚ್ಚು ಪರಿಚಿತರಾಗಿದ್ದಾರೆ. ಕೊವಿಡ್​ ಮಿತಿಮೀರಿ ಹರಡುತ್ತಿರುವುದರಿಂದ ಶೂಟಿಂಗ್​ ನಿಲ್ಲಿಸಲಾಗಿದೆ. ಹೀಗಾಗಿ, ಅನಿರುದ್ಧ ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಟಿವಿ9 ಕನ್ನಡ ಡಿಜಿಟಲ್​ ಜತೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

 ಮಿಸ್​ ಮಾಡುತ್ತಿಲ್ಲ ವ್ಯಾಯಾಮ-ಧ್ಯಾನ

ಅನಿರುದ್ಧ ಶೂಟಿಂಗ್​ ಇದ್ದಾಗ ಒಂದಷ್ಟು ಕೆಲಸಗಳನ್ನು ತಪ್ಪದೇ ಮಾಡುತ್ತಿದ್ದರಂತೆ. ಈಗ ಲಾಕ್​ಡೌನ್​ನಲ್ಲೂ ಅದನ್ನು ಮುಂದುವರಿಸಿದ್ದಾರೆ. ‘ಬೆಳಗ್ಗೆ ಎದ್ದ ನಂತರ ವ್ಯಾಯಾಮ ಮತ್ತು ಧ್ಯಾನ ಮಾಡುತ್ತೇನೆ. ನಿತ್ಯ ಆರ್ಟಿಕಲ್​ ಬರೆಯುತ್ತೇನೆ. ಶೂಟಿಂಗ್​ ಟೈಮ್​ನಲ್ಲಿ ಒಮ್ಮೊಮ್ಮೆ ಸಮಯ ಸಿಗುವುದಿಲ್ಲ. ಆಗ ಬರೆಯೋಕೆ ಆಗುತ್ತಿರಲಿಲ್ಲ. ಈಗ ಸಮಯ ಸಿಕ್ಕಿದೆ, ಬರವಣಿಗೆ ಮುಂದುವರಿಸಿದ್ದೇನೆ’ ಎಂದು ಮಾಹಿತಿ ನೀಡಿದ್ದಾರೆ ಅನಿರುದ್ಧ್​.

 ಸಿನಿಮಾ ವೀಕ್ಷಣೆ ಮೂಲಕ ಕಲಿಕೆ

ಒಟಿಟಿ ಪ್ಲಾಟ್​ಫಾರ್ಮ್​​ಗಳಲ್ಲಿ ಸಾಕಷ್ಟು ಚಿತ್ರಗಳು ಲಭ್ಯವಿದೆ. ಲಾಕ್​ಡೌನ್​ ಸಂದರ್ಭದಲ್ಲಿ ಅದನ್ನು ಅನಿರುದ್ಧ ವೀಕ್ಷಣೆ ಮಾಡುತ್ತಿದ್ದಾರೆ. ‘ಒಟಿಟಿಯಲ್ಲಿ ಸಾಕಷ್ಟು ಸಿನಿಮಾಗಳಿವೆ. ನಿತ್ಯ ಸಿನಿಮಾ ನೋಡುತ್ತಿದ್ದೇನೆ. ನಟನೆಯಲ್ಲಿ ಇರುವವರಿಗೆ ಅದೂ ಒಂದು ಕಲಿಕೆ. ನಮಗೆ ಸಾಕಷ್ಟು ವಿಚಾರಗಳು ತಿಳಿಯುತ್ತವೆ’ ಎಂದು ಅನಿರುದ್ಧ್​ ಹೇಳಿದ್ದಾರೆ.

ಅನಿರುದ್ಧ್​ ಅಳಿಲು ಸೇವೆ

ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಸಹಾಯಕ್ಕೆ ನಿಂತಿದ್ದಾರೆ. ಅನಿರುದ್ಧ್​ ಕೂಡ ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ‘ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ನಾನು ಅಳಿಲು ಸೇವೆ ಮಾಡುತ್ತಾ ಇದ್ದೇನೆ. ಕೆಲವರಿಗೆ ಬೆಡ್​ ಸಿಗಲ್ಲ. ಕೆಲವರಿಗೆ ರೆಮಿಡಿಸಿವರ್​ ಇಂಜೆಕ್ಷನ್​ ಸಿಗಲ್ಲ. ನನಗೆ ಪರಿಚಯ ಇದ್ದವರಿಗೆ ಕರೆ ಮಾಡುತ್ತೇನೆ. ಅವರು ಮತ್ಯಾರಿಗೋ ಕರೆ ಮಾಡ್ತಾರೆ. ಇದು ಒಂದು ರೀತಿಯಲ್ಲಿ ಚೈನ್​ ಲಿಂಕ್​. ಒಟ್ಟಿನಲ್ಲಿ ಸಂಕಷ್ಟದಲ್ಲಿರುವವರಿಗೆ ಸಹಾಯವಾಗುತ್ತದೆ’ ಎಂದು ಸಂತಸ ವ್ಯಕ್ತಪಡಿಸುತ್ತಾರೆ ಅವರು.

ಇದು ಒಂದು ಸಂಘರ್ಷ

‘ಈಗ ನಡೆಯುತ್ತಿರುವುದು ಇದು ತುಂಬಾ ದೊಡ್ಡ ಸಂಘರ್ಷ. ಆರೋಗ್ಯದ ಜತೆಗೆ ಜೀವನವನ್ನೂ ನೋಡಿಕೊಂಡು ಹೋಗಬೇಕು. ನಿತ್ಯದ ಹೊಟ್ಟೆಪಾಡು ನೋಡಿಕೊಳ್ಳಲೇಬೇಕು. ಈ ಸಂಘರ್ಷದಲ್ಲಿ ಒಂದು ಸಕಾರಾತ್ಮಕತೆ ಇದೆ. ಎಲ್ಲರೂ ಪಾಸಿಟಿವ್​ ಆಗಿ ಥಿಂಕ್​ ಮಾಡುತ್ತಿದ್ದಾರೆ. ಕಾಳ ಸಂತೆಯಲ್ಲಿ ತೊಡಗಿಕೊಂಡವರು ಬೆರಳೆಣಿಕೆ ಇರಬಹುದು. ಅದನ್ನು ಬಿಟ್ಟು ಉಳಿದವರು ಸ್ವಾರ್ಥ ಇಲ್ಲದೆ ಸೇವೆ ಮಾಡುತ್ತಿದ್ದಾರೆ. ನಾನು ಅನ್ನೋದು ಬಿಟ್ಟು ನಾವು ಅನ್ನೋದು ಬಂದಿದೆ. ಎಲ್ಲರೂ ಒಂದು ಕುಟುಂಬ ಎನ್ನುವ ಫೀಲ್​ ಬಂದಿದೆ’ ಎನ್ನುತ್ತಾರೆ ಅನಿರುದ್ಧ್​.

 ಮಗನಿಗೂ ಕೊರೊನಾ

ಅನಿರುದ್ಧ್​ ಮಗನಿಗೂ ಕೊರೊನಾ ಸೋಂಕು ತಗುಲಿದೆ. ‘ನನ್ನ ಮಗನಿಗೂ ಕೊವಿಡ್​ ಪಾಸಿಟಿವ್​. ದೇವರ ದಯೆ ಇಂದ ತುಂಬಾ ಮೈಲ್ಡ್ ಆಗಿದೆ​. ಅವನು ಐಸೋಲೆಷನ್​​ನಲ್ಲಿ​ ಇದಾನೆ. ಶನಿವಾರ (ಮೇ 15) ಐಸೋಲೇಷನ್​ ಕಂಪ್ಲೀಟ್​ ಆಗುತ್ತದೆ. ಚಿಕ್ಕ ಹುಡುಗನಾದ್ದರಿಂದ ಒಂದೇ ರೂಂನಲ್ಲಿ ಕೂತಿರೋದು ಕಷ್ಟ. ವಿಡಿಯೋ ಕಾಲ್​ ಮಾಡ್ತೀವಿ, ಆದರೆ ಅದು ಸಾಕಾಗಲ್ಲ. ನನ್ನ ತಂದೆ-ತಾಯಿ ಮನೆಯಲ್ಲೇ ಇದಾರೆ. ಅವರಿಗೆ ಇಮ್ಯುನಿಟಿ ಸಿಸ್ಟಮ್ ಅಷ್ಟಾಗಿ ಸದೃಢವಾಗಿರಲ್ಲ. ಹೀಗಾಗಿ, ಬಂದು ನಮ್ಮ ಜತೆ ಕುಳಿತುಕೋ ಎಂದು ಹೇಳೋಕೂ ಸಾಧ್ಯವಾಗುತ್ತಿಲ್ಲ’ ಎಂದು ಅನಿರುದ್ಧ ಬೇಸರ ಹೊರ ಹಾಕಿದರು.

ಇದನ್ನೂ ಓದಿ: ನಾವು ತುಂಬಾ ಕೆಟ್ಟ ಪರಿಸ್ಥಿತಿಯಲ್ಲಿದ್ದೇವೆ; ಕೊವಿಡ್​ನಿಂದ ಆಪ್ತನನ್ನು ಕಳೆದುಕೊಂಡು ಭಾವುಕರಾದ ನಟ ಅನಿರುದ್ಧ್​​

Published On - 2:55 pm, Sat, 15 May 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ