AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೆಷ್ಟು ದಿನ ಪ್ರಸಾರ ಆಗಲಿದೆ ‘ಜೊತೆ ಜೊತೆಯಲಿ‘ ಹೊಸ ಸಂಚಿಕೆಗಳು? ಇಲ್ಲಿದೆ ಉತ್ತರ

ಮೇ 24ರವರೆಗೆ ಯಾರೊಬ್ಬರೂ ಧಾರಾವಾಹಿ/ ರಿಯಾಲಿಟಿ ಶೋ ಶೂಟಿಂಗ್​​ ಮಾಡುವಂತಿಲ್ಲ ಎಂದು ಟೆಲಿವಿಷನ್​ ಅಸೋಸಿಯೇಷನ್​ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಇನ್ನೆಷ್ಟು ದಿನ ಪ್ರಸಾರ ಆಗಲಿದೆ ‘ಜೊತೆ ಜೊತೆಯಲಿ‘ ಹೊಸ ಸಂಚಿಕೆಗಳು? ಇಲ್ಲಿದೆ ಉತ್ತರ
ಮೇಘಾ ಶೆಟ್ಟಿ ಮತ್ತು ಅನಿರುದ್ಧ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: May 16, 2021 | 4:05 PM

Share

ಕೊರೊನಾ ಅಲೆಯಿಂದಾಗಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಸಿನಿಮಾ, ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳ ಶೂಟಿಂಗ್​ ನಿಲ್ಲಿಸಲಾಗಿದೆ. ಇದರ ಪರಿಣಾಮವಾಗಿ ಬಹುತೇಕ ಧಾರಾವಾಹಿಗಳು ತಾತ್ಕಾಲಿಕವಾಗಿ ನಿಲ್ಲಲಿವೆ. ಮತ್ತೆ ಶೂಟಿಂಗ್​ಗೆ​ ಅವಕಾಶ ಕೊಟ್ಟ ನಂತರವೇ ಧಾರಾವಾಹಿಗಳ ಪ್ರಸಾರ ಮತ್ತೆ ಆರಂಭವಾಗಲಿದೆ. ಹಾಗಾದರೆ, ಕನ್ನಡದ ಜನಪ್ರಿಯ ಧಾರಾವಾಹಿ ‘ಜೊತೆ ಜೊತೆಯಲಿ’ ಹೊಸ ಸಂಚಿಕೆಗಳ ಪ್ರಸಾರ ಯಾವಾಗ ಅಂತ್ಯವಾಗಲಿದೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಮೇ 24ರವರೆಗೆ ಯಾರೊಬ್ಬರೂ ಧಾರಾವಾಹಿ/ ರಿಯಾಲಿಟಿ ಶೋ ಶೂಟಿಂಗ್​​ ಮಾಡುವಂತಿಲ್ಲ ಎಂದು ಟೆಲಿವಿಷನ್​ ಅಸೋಸಿಯೇಷನ್​ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಒಂದೊಮ್ಮೆ ಈ ಆದೇಶ ಮೀರಿದರೆ ಶಿಕ್ಷೆ ನೀಡುವ ಎಚ್ಚರಿಕೆ ಕೂಡ ನೀಡಲಾಗಿದೆ. ಹೀಗಾಗಿ, ಬಿಗ್​ ಬಾಸ್​ ರಿಯಾಲಿಟಿ ಶೋ ಅರ್ಧಕ್ಕೆ ನಿಂತಿದೆ. ಧಾರಾವಾಹಿಗಳ ಚಿತ್ರೀಕರಣ ಕೂಡ ಸ್ಥಗಿತಗೊಂಡಿದೆ. ಇದಕ್ಕೆ ಜೊತೆಜೊತೆಯಲಿ ಧಾರಾವಾಹಿ ಕೂಡ ಹೊರತಾಗಿಲ್ಲ.

ಜೊತೆ ಜೊತೆಯಲಿ ಧಾರಾವಾಹಿ ಇನ್ನೆಷ್ಟು ದಿನ ಪ್ರಸಾರವಾಗಲಿದೆ ಎನ್ನುವ ಬಗ್ಗೆ ನಟ ಅನಿರುದ್ಧ್​ ಮಾಹಿತಿ ನೀಡಿದ್ದಾರೆ. ‘ಈ ಲಾಕ್​ಡೌನ್​ ಮುಗಿಯುವವರೆಗೆ ಸಾಕಾಗುವಷ್ಟು ಸಂಚಿಕೆಗಳ ಬ್ಯಾಂಕಿಂಗ್ ನಮ್ಮಲ್ಲಿದೆ. ಲಾಕ್​ಡೌನ್​ ಮುಂದುವರಿದರೆ ಎಪಿಸೋಡ್​ಗಳ ಬ್ಯಾಂಕಿಂಗ್​ ಇಲ್ಲ. ನಂತರ ಏನು ಮಾಡೋದೋ ಗೊತ್ತಿಲ್ಲ. ವಾಹಿನಿಯವರು ನಂತರ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಗೊತ್ತಿಲ್ಲ. ಬಹುಶಃ ಮರುಪ್ರಸಾರ ಮಾಡಬಹುದು’ ಎಂದಿದ್ದಾರೆ ಅವರು.

‘ಧಾರಾವಾಹಿಗಳನ್ನು ಒಂದು ತಿಂಗಳಿಗೆ ಸಾಕಾಗುವಷ್ಟು ಬ್ಯಾಂಕಿಂಗ್​ ಇಡೋಕೆ ಸಾಧ್ಯವಿಲ್ಲ. ಒಂದು ದಿನದಲ್ಲಿ ಎಷ್ಟು ಕೆಲಸ ಮಾಡೋಕೆ ಸಾಧ್ಯವೋ ಅಷ್ಟು ಮಾಡಲು ಸಾಧ್ಯ. ಧಾರಾವಾಹಿಗೆ ಬರವಣಿಗೆ ಬೇಕು. ಅವರಿಗೂ ಪ್ರೆಷರ್​ ಆಗುತ್ತೆ. ಕೆಲವೊಮ್ಮೆ ಕೊನೆಯ ಸಮಯದಲ್ಲಿ ಡೈಲಾಗ್​ ಕಳಿಸುತ್ತಾರೆ. ಹೀಗಾಗಿ, ಇದರಲ್ಲಿ ಅರ್ಜನ್ಸಿ ಮಾಡೋಕೆ ಆಗಲ್ಲ. ನಾವು ಅರ್ಜೆಂಟ್​ ಮಾಡಿದರೆ ಕ್ವಾಲಿಟಿ ನಿರ್ವಹಣೆ ಮಾಡೋಕೆ ಆಗಲ್ಲ’ ಎಂದಿದ್ದಾರೆ ಅವರು.

ಕೊರೊನಾ ಮೊದಲನೇ ಅಲೆ ಕಾಣಿಸಿಕೊಂಡಾಗ ಲಾಕ್​ಡೌನ್​ ಘೋಷಣೆ ಮಾಡಲಾಗಿತ್ತು. ಆಗಲೂ ಧಾರಾವಾಹಿಗಳಿಗೆ ಇದೇ ತೊಂದರೆ ಉಂಟಾಗಿತ್ತು. ಕೆಲ ಧಾರಾವಾಹಿಗಳನ್ನು ಅರ್ಧಕ್ಕೆ ನಿಲ್ಲಿಸಲಾಯಿತು. ಇನ್ನೂ ಕೆಲ ಧಾರಾವಾಹಿ ತಂಡಗಳು, ಎಲ್ಲವೂ ಸಹಜ ಸ್ಥಿತಿಗೆ ಬಂದ ನಂತರದಲ್ಲಿ ಶೂಟಿಂಗ್​ ಆರಂಭಿಸಿದ್ದವು.

ಇದನ್ನೂ ಓದಿ: ಮನೆಯಲ್ಲಿದ್ದರೂ ಸುಮ್ಮನೆ ಕೂತಿಲ್ಲ ‘ಜೊತೆ ಜೊತೆಯಲಿ’ ಅನಿರುದ್ಧ್​​; ಸಂಕಷ್ಟದ ಸಮಯದಲ್ಲಿ ಅಳಿಲು ಸೇವೆ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!