AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕಿಯಾದ ಸಿನಿಮಾ ಪತ್ರಕರ್ತೆ ನೀರೂ ಶರ್ಮಾ; ಗಮನ ಸೆಳೆದ ‘ಬಾಂದ್ರಾ ಬಾಯ್’

ಹಿರಿಯ ಸಿನಿಮಾ ಪತ್ರಕರ್ತೆ ನೀರೂ ಶರ್ಮಾ ಅವರು ‘ಬಾಂದ್ರಾ ಬಾಯ್’ ಕಿರುಚಿತ್ರಕ್ಕೆ ನಿರ್ದೇಶನ ಮಾಡಿ ಗಮನ ಸೆಳೆದಿದ್ದಾರೆ. ಯಾವುದೇ ವಿಷಯದ ಸಂಪೂರ್ಣ ಸತ್ಯ ತಿಳಿಯುವ ಮುನ್ನವೇ ಸಾರ್ವಜನಿಕರು ಹೇಗೆ ತೀರ್ಪು ನೀಡಿಬಿಡುತ್ತಾರೆ ಎಂಬ ಪ್ರಚಲಿತ ವಿದ್ಯಮಾನವನ್ನು ಈ ಕಿರುಚಿತ್ರದಲ್ಲಿ ತೋರಿಸಲಾಗಿದೆ. ಚಿತ್ರೋತ್ಸವಗಳಲ್ಲಿ ‘ಬಾಂದ್ರಾ ಬಾಯ್’ ಗಮನ ಸೆಳೆಯುತ್ತಿದೆ.

ನಿರ್ದೇಶಕಿಯಾದ ಸಿನಿಮಾ ಪತ್ರಕರ್ತೆ ನೀರೂ ಶರ್ಮಾ; ಗಮನ ಸೆಳೆದ ‘ಬಾಂದ್ರಾ ಬಾಯ್’
Neeru Sharma, Bandra Boy Poster
ಮದನ್​ ಕುಮಾರ್​
|

Updated on:Jul 02, 2026 | 9:47 PM

Share

ಮುಖ್ಯಾಂಶಗಳು

  • 2 ದಶಕಗಳ ಪತ್ರಿಕೋದ್ಯಮದ ಅನುಭವದ ಬಳಿಕ ನೀರೂ ಶರ್ಮಾ ಸಿನಿ ಪ್ರಯತ್ನ.
  • ‘ಬಾಂದ್ರಾ ಬಾಯ್’ ಕಿರುಚಿತ್ರದಲ್ಲಿದೆ ಸೋಷಿಯಲ್ ಮೀಡಿಯಾ ಯುಗದ ಕಥೆ.
  • ಅಂತಾರಾಷ್ಟ್ರೀಯ ಚಿತ್ರೋತ್ಸವಗಳ ಸ್ಪರ್ಧೆಯಲ್ಲಿ ‘ಬಾಂದ್ರಾ ಬಾಯ್’ ಸದ್ದು.

ಸಿನಿಮಾ ಪತ್ರಕರ್ತೆಯಾಗಿ ದಶಕಗಳ ಕಾಲ ಗುರುತಿಸಿಕೊಂಡಿದ್ದ ನೀರೂ ಶರ್ಮಾ (Neeru Sharma), ಇದೀಗ ನಿರ್ದೇಶಕಿಯಾಗಿ ಚಿತ್ರರಂಗಕ್ಕೆ ಭರ್ಜರಿ ಪಾದಾರ್ಪಣೆ ಮಾಡಿದ್ದಾರೆ. ಅವರು ನಿರ್ದೇಶಿಸಿರುವ ಚೊಚ್ಚಲ ಶಾರ್ಟ್ ಫಿಲ್ಮ್ ‘ಬಾಂದ್ರಾ ಬಾಯ್’ (Bandra Boy) ಸದ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಖತ್ ಸದ್ದು ಮಾಡುತ್ತಿದೆ. ಪ್ರಸಿದ್ಧ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳ (Film Festivals) ಸ್ಪರ್ಧಾತ್ಮಕ ವಿಭಾಗಕ್ಕೆ ಆಯ್ಕೆಯಾಗಿದೆ.

ಭಾರತೀಯ ಚಿತ್ರರಂಗ ಹಾಗೂ ಟೆಲಿವಿಷನ್ ಜಗತ್ತನ್ನು ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲ ಅತ್ಯಂತ ಹತ್ತಿರದಿಂದ ನೋಡಿ, ವರದಿ ಮಾಡಿದ್ದ ಹಿರಿಯ ಪತ್ರಕರ್ತೆ ನೀರೂ ಶರ್ಮಾ, ಬಳಿಕ ಸ್ಕ್ರೀನ್‌ಪ್ಲೇ ಬರವಣಿಗೆ ಕಡೆಗೆ ಮುಖ ಮಾಡಿದ್ದಾರೆ. ಚಿತ್ರರಂಗದ ಖ್ಯಾತ ನಿರ್ದೇಶಕ ಸುಭಾಷ್ ಘಾಯ್ ಅವರ ‘ವಿಸ್ಲಿಂಗ್ ವುಡ್ಸ್ ಇಂಟರ್ನ್ಯಾಷನಲ್’ ಸಂಸ್ಥೆಯಲ್ಲಿ ಸಿನಿಮಾ ನಿರ್ದೇಶನ ಕೋರ್ಸ್ ಮುಗಿಸಿರುವ ಅವರು, ಅಂತಾರಾಷ್ಟ್ರೀಯ ಮಟ್ಟದ ತರಬೇತಿ ಪಡೆದಿದ್ದಾರೆ.

ನಿರ್ದೇಶನದ ಜೊತೆಗೆ 2015ರಿಂದಲೇ ಚಿತ್ರಕಥೆ ಬರೆಯುವುದರಲ್ಲೂ ತೊಡಗಿಸಿಕೊಂಡಿರುವ ನೀರೂ ಶರ್ಮಾ ಅವರು, ಬಾಲಿವುಡ್‌ನ ಹಿರಿಯ ನಟ ಬೊಮನ್ ಇರಾನಿ ಹಾಗೂ ಪ್ರಖ್ಯಾತ ಚಿತ್ರಕಥೆಗಾರರಾದ ಅಂಜುಮ್ ರಾಜಬಲಿ ಮತ್ತು ಮಯೂರ್ ಪುರಿ ಅವರ ಮಾರ್ಗದರ್ಶನದಲ್ಲಿ ಸ್ಕ್ರಿಪ್ಟ್ ರೈಟಿಂಗ್ ಡಿಪ್ಲೊಮಾ ಪೂರೈಸಿದ್ದಾರೆ. ಆ ಅನುಭವದಲ್ಲಿ ನಿರ್ದೇಶನ ಮಾಡಿದ್ದಾರೆ.

ಸೋಷಿಯಲ್ ಮೀಡಿಯಾ ಯುಗದ ಕಥೆ ಹೇಳುವ ‘ಬಾಂದ್ರಾ ಬಾಯ್’:

ನೀರೂ ಶರ್ಮಾ ನಿರ್ದೇಶನದ ಚೊಚ್ಚಲ ಚಿತ್ರ ‘ಬಾಂದ್ರಾ ಬಾಯ್’ ಒಂದು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರವನ್ನು ಹೊಂದಿದೆ. ಇಂದಿನ ಸೋಷಿಯಲ್ ಮೀಡಿಯಾ ಯುಗದಲ್ಲಿ ಮಾಧ್ಯಮಗಳ ಸುಳ್ಳು ಸುದ್ದಿಗಳು, ಸಾರ್ವಜನಿಕರ ತಪ್ಪು ಗ್ರಹಿಕೆಗಳು ಮತ್ತು ಸಮಾಜದ ಪೂರ್ವಾಗ್ರಹ ಪೀಡಿತ ನಿರ್ಧಾರಗಳು ಒಬ್ಬ ವ್ಯಕ್ತಿಯ ಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತವೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ.

‘ಬಾಂದ್ರಾ ಬಾಯ್’ ಚಿತ್ರದ ಪಾತ್ರವರ್ಗದಲ್ಲಿ ಯಾರೆಲ್ಲ ಇದ್ದಾರೆ?

ಈ ಥ್ರಿಲ್ಲರ್ ಶಾರ್ಟ್ ಫಿಲ್ಮ್‌ನಲ್ಲಿ ಅಹ್ವಾನ್ ಕುಮಾರ್ ಮುಖ್ಯ ಪಾತ್ರದಲ್ಲಿ ನಟಿಸಿದ್ದರೆ, ಗುಜರಾತಿ ಮತ್ತು ಮರಾಠಿ ಚಿತ್ರರಂಗದ ಖ್ಯಾತ ನಟ ಧರ್ಮೇಂದ್ರ ಗೋಹಿಲ್ ಪ್ರಮುಖ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಇವರ ಜೊತೆಗೆ ವಿಸ್ಲಿಂಗ್ ವುಡ್ಸ್ ಸಂಸ್ಥೆಯ ಲೋಚನ್ ಬರ್ಸಾಗ್ಡೆ, ರಂಗಭೂಮಿ ಕಲಾವಿದ ಯಶ್ ಪೆಡ್ನೇಕರ್ ಹಾಗೂ ಕಿರುತೆರೆಯ ಜನಪ್ರಿಯ ನಟರಾದ ಪವನ್ ತಿವಾರಿ ಮತ್ತು ಶ್ಯಾಮ್ ಥೋಮ್ರೆ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಇದನ್ನೂ ಓದಿ: ‘ಕುಣಿ’ ಕಿರುಚಿತ್ರಕ್ಕೆ ಫಿದಾ ಆದ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು

ವರದಿಗಾರ್ತಿಯಿಂದ ಕಥೆಗಾರ್ತಿಯಾಗಿ ಹೊಸ ಪಯಣ:

ಪತ್ರಿಕೋದ್ಯಮದಿಂದ ಚಿತ್ರರಂಗಕ್ಕೆ ಬಂದು ಯಶಸ್ವಿಯಾಗುವವರ ಸಂಖ್ಯೆ ತುಂಬಾ ಅಪರೂಪ. ಇಷ್ಟು ವರ್ಷಗಳ ಕಾಲ ಸಿನಿಮಾಗಳು, ಸೆಲೆಬ್ರಿಟಿಗಳು ಮತ್ತು ಬಾಕ್ಸ್ ಆಫೀಸ್ ವ್ಯವಹಾರದ ಬಗ್ಗೆ ವರದಿ ಮಾಡುತ್ತಿದ್ದ ನೀರೂ ಶರ್ಮಾ, ಈಗ ತಾವೇ ಕ್ಯಾಮೆರಾ ಹಿಂದೆ ನಿಂತು ಸ್ವಂತ ಕಥೆಗಳಿಗೆ ಜೀವ ನೀಡುತ್ತಿರುವುದು ವಿಶೇಷವಾಗಿದೆ. ಈಗಾಗಲೇ ಸಿನಿಮಾ ಪ್ರೇಮಿಗಳಲ್ಲಿ ಭಾರಿ ಕುತೂಹಲ ಮೂಡಿಸಿರುವ ‘ಬಾಂದ್ರಾ ಬಾಯ್’ ಮುಂಬರುವ ತಿಂಗಳುಗಳಲ್ಲಿ ಜಾಗತಿಕ ವೇದಿಕೆಯಲ್ಲಿ ಪ್ರದರ್ಶನಗೊಳ್ಳಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:47 pm, Thu, 2 July 26

Follow Us
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?