AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್, ರಣಬೀರ್ ನಟನೆಯ ‘ರಾಮಾಯಣ’ದ ಜತೆ ಸ್ಪರ್ಧೆ; ರಾಮನ ಬಗ್ಗೆ ಹೊಸ ಸಿನಿಮಾ

ರಾಮಾಯಣ ಆಧರಿಸಿ ಚಿತ್ರರಂಗದಲ್ಲಿ ಈಗಾಗಲೇ ಹಲವು ಸಿನಿಮಾಗಳು ಬಂದಿವೆ. ಹಿಂದಿಯಲ್ಲಿ ‘ರಾಮಾಯಣ’ದ ಶೂಟಿಂಗ್ ಶುರುವಾಗಿದೆ. ಈ ಚಿತ್ರದಲ್ಲಿ ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಮೊದಲಾದವರು ನಟಿಸಿದ್ದಾರೆ. ರಾಮ ನವಮಿ ಸಂದರ್ಭದಲ್ಲಿ ತೆಲುಗು ‘ರಾಮಾಯಣ’ದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ.  

ಯಶ್, ರಣಬೀರ್ ನಟನೆಯ ‘ರಾಮಾಯಣ’ದ ಜತೆ ಸ್ಪರ್ಧೆ; ರಾಮನ ಬಗ್ಗೆ ಹೊಸ ಸಿನಿಮಾ
ರಾಮಾಯಣ
ರಾಜೇಶ್ ದುಗ್ಗುಮನೆ
|

Updated on: Apr 18, 2024 | 6:59 AM

Share

ಏಪ್ರಿಲ್ 17ರಂದು ಎಲ್ಲ ಕಡೆಗಳಲ್ಲಿ ರಾಮ ನವಮಿಯನ್ನು ಆಚರಿಸಲಾಗಿದೆ. ರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ಈ ಹಬ್ಬದ ಅದ್ದೂರಿತನ ಜೋರಾಗಿತ್ತು. ಈ ಮಧ್ಯೆ ರಾಮಾಯಣದ ಬಗ್ಗೆ ಹೊಸ ಸಿನಿಮಾ ಘೋಷಣೆ ಮಾಡಲಾಗಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಜರ್ನಿ ಟು ಅಯೋಧ್ಯ’ (Journey To Ayodhya) ಎಂದು ಶೀರ್ಷಿಕೆ ಇಡಲಾಗಿದೆ. ಮುಂದಿನ ದಿನಗಳಲ್ಲಿ ಸಿನಿಮಾದ ಟೈಟಲ್ ಘೋಷಣೆ ಆಗಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಚಿತ್ರರಂಗದಲ್ಲಿ ಈಗಾಗಲೇ ರಾಮಾಯಣ ಆಧರಿಸಿ ಹಲವು ಸೀರಿಸ್ ಹಾಗೂ ಸಿನಿಮಾಗಳು ಬಂದಿವೆ. ಹಿಂದಿಯಲ್ಲಿ ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ದ ಶೂಟಿಂಗ್ ಶುರುವಾಗಿದೆ. ಈ ಸಿನಿಮಾ ಸೆಟ್​ನ ಫೋಟೋಗಳು ಲೀಕ್ ಆಗಿದ್ದವು. ಈಗ ರಾಮ ನವಮಿ ಸಂದರ್ಭದಲ್ಲಿ ತೆಲುಗು ‘ರಾಮಾಯಣ’ದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ.

‘ಚಿತ್ರಾಲಯಂ ಸ್ಟುಡಿಯೋಸ್’ ಬ್ಯಾನರ್ ಅಡಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ವಿಎನ್​ ಆದಿತ್ಯ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಪೋಸ್ಟರ್​ನಲ್ಲಿ ವ್ಯಕ್ತಿಯೋರ್ವ ರಸ್ತೆಯಲ್ಲಿ ನಡೆದು ಸಾಗುತ್ತಿರುವುದಿದೆ. ಅಯೋಧ್ಯೆ 1177 ಕಿ.ಮೀ ಎಂದು ಬರೆದಿದೆ. ಹೀಗಾಗಿ ದಕ್ಷಿಣದಿಂದ ಅಯೋಧ್ಯೆಗೆ ಹೋಗುವ ಕಥೆ ಇದಿರಬಹುದು ಎಂದು ಊಹಸಿಲಾಗಿದೆ. ಪೋಸ್ಟರ್​ನಲ್ಲಿ ಇರುವುದು ರಾಮನೇ ಹೌದೋ ಅಲ್ಲವೋ ಎಂಬುದು ಸ್ಪಷ್ಟವಾಗಿಲ್ಲ. ಸಿನಿಮಾದ ಪಾತ್ರವರ್ಗದ ಬಗ್ಗೆಯೂ ತಂಡ ಗುಟ್ಟುಬಿಟ್ಟುಕೊಟ್ಟಿಲ್ಲ. ಸದ್ಯ ಸಿನಿಮಾ ಕೆಲಸಗಳು ಪ್ರೀ ಪ್ರೊಡಕ್ಷನ್ ಹಂತದಲ್ಲಿ ಇವೆ.

ಇದನ್ನೂ ಓದಿ: ಬಾಲಿವುಡ್​ನ ‘ರಾಮಾಯಣ’ ಚಿತ್ರಕ್ಕೆ ನಿರ್ಮಾಪಕನಾದ ಯಶ್; ಏನಿದು ಸಮಾಚಾರ?

ರಾಮಾಯಣ ಸಿನಿಮಾ ಮಾಡುವಾಗ ಸಾಕಷ್ಟು ಎಚ್ಚರಿಕೆ ಬೇಕು. ಕಥೆ ಹೇಳಿರುವ ಅನುಭವ ಬೇಕು. ಆದರೆ, ವಿಎನ್​ ಆದಿತ್ಯ ನಿರ್ದೇಶನಕ್ಕೆ ಹೊಸಬರು. ಅವರು ಯಾವ ರೀತಿಯಲ್ಲಿ ಸಿನಿಮಾ ಮಾಡುತ್ತಾರೆ ಎನ್ನುವ ಕುತೂಹಲ ಮೂಡಿದೆ. ಅಂದಹಾಗೆ ಇದು ಪ್ಯಾನ್ ಇಂಡಿಯಾ ಸಿನಿಮಾ ಎಂದು ತಂಡ ಹೇಳಿಕೊಂಡಿದೆ. ಸದ್ಯ ಚಿತ್ರಾಲಯಂ ಸ್ಟುಡಿಯೋದವರು ‘ವಿಶ್ವಂ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಗೋಪಿ ಚಂದ್ ಅವರು ಈ ಚಿತ್ರಕ್ಕೆ ಹೀರೋ. ವ್ಯತ್ಲಾ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?