AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್, ರಣಬೀರ್ ನಟನೆಯ ‘ರಾಮಾಯಣ’ದ ಜತೆ ಸ್ಪರ್ಧೆ; ರಾಮನ ಬಗ್ಗೆ ಹೊಸ ಸಿನಿಮಾ

ರಾಮಾಯಣ ಆಧರಿಸಿ ಚಿತ್ರರಂಗದಲ್ಲಿ ಈಗಾಗಲೇ ಹಲವು ಸಿನಿಮಾಗಳು ಬಂದಿವೆ. ಹಿಂದಿಯಲ್ಲಿ ‘ರಾಮಾಯಣ’ದ ಶೂಟಿಂಗ್ ಶುರುವಾಗಿದೆ. ಈ ಚಿತ್ರದಲ್ಲಿ ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಮೊದಲಾದವರು ನಟಿಸಿದ್ದಾರೆ. ರಾಮ ನವಮಿ ಸಂದರ್ಭದಲ್ಲಿ ತೆಲುಗು ‘ರಾಮಾಯಣ’ದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ.  

ಯಶ್, ರಣಬೀರ್ ನಟನೆಯ ‘ರಾಮಾಯಣ’ದ ಜತೆ ಸ್ಪರ್ಧೆ; ರಾಮನ ಬಗ್ಗೆ ಹೊಸ ಸಿನಿಮಾ
ರಾಮಾಯಣ
ರಾಜೇಶ್ ದುಗ್ಗುಮನೆ
|

Updated on: Apr 18, 2024 | 6:59 AM

Share

ಏಪ್ರಿಲ್ 17ರಂದು ಎಲ್ಲ ಕಡೆಗಳಲ್ಲಿ ರಾಮ ನವಮಿಯನ್ನು ಆಚರಿಸಲಾಗಿದೆ. ರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ಈ ಹಬ್ಬದ ಅದ್ದೂರಿತನ ಜೋರಾಗಿತ್ತು. ಈ ಮಧ್ಯೆ ರಾಮಾಯಣದ ಬಗ್ಗೆ ಹೊಸ ಸಿನಿಮಾ ಘೋಷಣೆ ಮಾಡಲಾಗಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಜರ್ನಿ ಟು ಅಯೋಧ್ಯ’ (Journey To Ayodhya) ಎಂದು ಶೀರ್ಷಿಕೆ ಇಡಲಾಗಿದೆ. ಮುಂದಿನ ದಿನಗಳಲ್ಲಿ ಸಿನಿಮಾದ ಟೈಟಲ್ ಘೋಷಣೆ ಆಗಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಚಿತ್ರರಂಗದಲ್ಲಿ ಈಗಾಗಲೇ ರಾಮಾಯಣ ಆಧರಿಸಿ ಹಲವು ಸೀರಿಸ್ ಹಾಗೂ ಸಿನಿಮಾಗಳು ಬಂದಿವೆ. ಹಿಂದಿಯಲ್ಲಿ ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ದ ಶೂಟಿಂಗ್ ಶುರುವಾಗಿದೆ. ಈ ಸಿನಿಮಾ ಸೆಟ್​ನ ಫೋಟೋಗಳು ಲೀಕ್ ಆಗಿದ್ದವು. ಈಗ ರಾಮ ನವಮಿ ಸಂದರ್ಭದಲ್ಲಿ ತೆಲುಗು ‘ರಾಮಾಯಣ’ದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ.

‘ಚಿತ್ರಾಲಯಂ ಸ್ಟುಡಿಯೋಸ್’ ಬ್ಯಾನರ್ ಅಡಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ವಿಎನ್​ ಆದಿತ್ಯ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಪೋಸ್ಟರ್​ನಲ್ಲಿ ವ್ಯಕ್ತಿಯೋರ್ವ ರಸ್ತೆಯಲ್ಲಿ ನಡೆದು ಸಾಗುತ್ತಿರುವುದಿದೆ. ಅಯೋಧ್ಯೆ 1177 ಕಿ.ಮೀ ಎಂದು ಬರೆದಿದೆ. ಹೀಗಾಗಿ ದಕ್ಷಿಣದಿಂದ ಅಯೋಧ್ಯೆಗೆ ಹೋಗುವ ಕಥೆ ಇದಿರಬಹುದು ಎಂದು ಊಹಸಿಲಾಗಿದೆ. ಪೋಸ್ಟರ್​ನಲ್ಲಿ ಇರುವುದು ರಾಮನೇ ಹೌದೋ ಅಲ್ಲವೋ ಎಂಬುದು ಸ್ಪಷ್ಟವಾಗಿಲ್ಲ. ಸಿನಿಮಾದ ಪಾತ್ರವರ್ಗದ ಬಗ್ಗೆಯೂ ತಂಡ ಗುಟ್ಟುಬಿಟ್ಟುಕೊಟ್ಟಿಲ್ಲ. ಸದ್ಯ ಸಿನಿಮಾ ಕೆಲಸಗಳು ಪ್ರೀ ಪ್ರೊಡಕ್ಷನ್ ಹಂತದಲ್ಲಿ ಇವೆ.

ಇದನ್ನೂ ಓದಿ: ಬಾಲಿವುಡ್​ನ ‘ರಾಮಾಯಣ’ ಚಿತ್ರಕ್ಕೆ ನಿರ್ಮಾಪಕನಾದ ಯಶ್; ಏನಿದು ಸಮಾಚಾರ?

ರಾಮಾಯಣ ಸಿನಿಮಾ ಮಾಡುವಾಗ ಸಾಕಷ್ಟು ಎಚ್ಚರಿಕೆ ಬೇಕು. ಕಥೆ ಹೇಳಿರುವ ಅನುಭವ ಬೇಕು. ಆದರೆ, ವಿಎನ್​ ಆದಿತ್ಯ ನಿರ್ದೇಶನಕ್ಕೆ ಹೊಸಬರು. ಅವರು ಯಾವ ರೀತಿಯಲ್ಲಿ ಸಿನಿಮಾ ಮಾಡುತ್ತಾರೆ ಎನ್ನುವ ಕುತೂಹಲ ಮೂಡಿದೆ. ಅಂದಹಾಗೆ ಇದು ಪ್ಯಾನ್ ಇಂಡಿಯಾ ಸಿನಿಮಾ ಎಂದು ತಂಡ ಹೇಳಿಕೊಂಡಿದೆ. ಸದ್ಯ ಚಿತ್ರಾಲಯಂ ಸ್ಟುಡಿಯೋದವರು ‘ವಿಶ್ವಂ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಗೋಪಿ ಚಂದ್ ಅವರು ಈ ಚಿತ್ರಕ್ಕೆ ಹೀರೋ. ವ್ಯತ್ಲಾ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ