AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್, ರಣಬೀರ್ ನಟನೆಯ ‘ರಾಮಾಯಣ’ದ ಜತೆ ಸ್ಪರ್ಧೆ; ರಾಮನ ಬಗ್ಗೆ ಹೊಸ ಸಿನಿಮಾ

ರಾಮಾಯಣ ಆಧರಿಸಿ ಚಿತ್ರರಂಗದಲ್ಲಿ ಈಗಾಗಲೇ ಹಲವು ಸಿನಿಮಾಗಳು ಬಂದಿವೆ. ಹಿಂದಿಯಲ್ಲಿ ‘ರಾಮಾಯಣ’ದ ಶೂಟಿಂಗ್ ಶುರುವಾಗಿದೆ. ಈ ಚಿತ್ರದಲ್ಲಿ ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಮೊದಲಾದವರು ನಟಿಸಿದ್ದಾರೆ. ರಾಮ ನವಮಿ ಸಂದರ್ಭದಲ್ಲಿ ತೆಲುಗು ‘ರಾಮಾಯಣ’ದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ.  

ಯಶ್, ರಣಬೀರ್ ನಟನೆಯ ‘ರಾಮಾಯಣ’ದ ಜತೆ ಸ್ಪರ್ಧೆ; ರಾಮನ ಬಗ್ಗೆ ಹೊಸ ಸಿನಿಮಾ
ರಾಮಾಯಣ
ರಾಜೇಶ್ ದುಗ್ಗುಮನೆ
|

Updated on: Apr 18, 2024 | 6:59 AM

Share

ಏಪ್ರಿಲ್ 17ರಂದು ಎಲ್ಲ ಕಡೆಗಳಲ್ಲಿ ರಾಮ ನವಮಿಯನ್ನು ಆಚರಿಸಲಾಗಿದೆ. ರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ಈ ಹಬ್ಬದ ಅದ್ದೂರಿತನ ಜೋರಾಗಿತ್ತು. ಈ ಮಧ್ಯೆ ರಾಮಾಯಣದ ಬಗ್ಗೆ ಹೊಸ ಸಿನಿಮಾ ಘೋಷಣೆ ಮಾಡಲಾಗಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಜರ್ನಿ ಟು ಅಯೋಧ್ಯ’ (Journey To Ayodhya) ಎಂದು ಶೀರ್ಷಿಕೆ ಇಡಲಾಗಿದೆ. ಮುಂದಿನ ದಿನಗಳಲ್ಲಿ ಸಿನಿಮಾದ ಟೈಟಲ್ ಘೋಷಣೆ ಆಗಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಚಿತ್ರರಂಗದಲ್ಲಿ ಈಗಾಗಲೇ ರಾಮಾಯಣ ಆಧರಿಸಿ ಹಲವು ಸೀರಿಸ್ ಹಾಗೂ ಸಿನಿಮಾಗಳು ಬಂದಿವೆ. ಹಿಂದಿಯಲ್ಲಿ ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ದ ಶೂಟಿಂಗ್ ಶುರುವಾಗಿದೆ. ಈ ಸಿನಿಮಾ ಸೆಟ್​ನ ಫೋಟೋಗಳು ಲೀಕ್ ಆಗಿದ್ದವು. ಈಗ ರಾಮ ನವಮಿ ಸಂದರ್ಭದಲ್ಲಿ ತೆಲುಗು ‘ರಾಮಾಯಣ’ದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ.

‘ಚಿತ್ರಾಲಯಂ ಸ್ಟುಡಿಯೋಸ್’ ಬ್ಯಾನರ್ ಅಡಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ವಿಎನ್​ ಆದಿತ್ಯ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಪೋಸ್ಟರ್​ನಲ್ಲಿ ವ್ಯಕ್ತಿಯೋರ್ವ ರಸ್ತೆಯಲ್ಲಿ ನಡೆದು ಸಾಗುತ್ತಿರುವುದಿದೆ. ಅಯೋಧ್ಯೆ 1177 ಕಿ.ಮೀ ಎಂದು ಬರೆದಿದೆ. ಹೀಗಾಗಿ ದಕ್ಷಿಣದಿಂದ ಅಯೋಧ್ಯೆಗೆ ಹೋಗುವ ಕಥೆ ಇದಿರಬಹುದು ಎಂದು ಊಹಸಿಲಾಗಿದೆ. ಪೋಸ್ಟರ್​ನಲ್ಲಿ ಇರುವುದು ರಾಮನೇ ಹೌದೋ ಅಲ್ಲವೋ ಎಂಬುದು ಸ್ಪಷ್ಟವಾಗಿಲ್ಲ. ಸಿನಿಮಾದ ಪಾತ್ರವರ್ಗದ ಬಗ್ಗೆಯೂ ತಂಡ ಗುಟ್ಟುಬಿಟ್ಟುಕೊಟ್ಟಿಲ್ಲ. ಸದ್ಯ ಸಿನಿಮಾ ಕೆಲಸಗಳು ಪ್ರೀ ಪ್ರೊಡಕ್ಷನ್ ಹಂತದಲ್ಲಿ ಇವೆ.

ಇದನ್ನೂ ಓದಿ: ಬಾಲಿವುಡ್​ನ ‘ರಾಮಾಯಣ’ ಚಿತ್ರಕ್ಕೆ ನಿರ್ಮಾಪಕನಾದ ಯಶ್; ಏನಿದು ಸಮಾಚಾರ?

ರಾಮಾಯಣ ಸಿನಿಮಾ ಮಾಡುವಾಗ ಸಾಕಷ್ಟು ಎಚ್ಚರಿಕೆ ಬೇಕು. ಕಥೆ ಹೇಳಿರುವ ಅನುಭವ ಬೇಕು. ಆದರೆ, ವಿಎನ್​ ಆದಿತ್ಯ ನಿರ್ದೇಶನಕ್ಕೆ ಹೊಸಬರು. ಅವರು ಯಾವ ರೀತಿಯಲ್ಲಿ ಸಿನಿಮಾ ಮಾಡುತ್ತಾರೆ ಎನ್ನುವ ಕುತೂಹಲ ಮೂಡಿದೆ. ಅಂದಹಾಗೆ ಇದು ಪ್ಯಾನ್ ಇಂಡಿಯಾ ಸಿನಿಮಾ ಎಂದು ತಂಡ ಹೇಳಿಕೊಂಡಿದೆ. ಸದ್ಯ ಚಿತ್ರಾಲಯಂ ಸ್ಟುಡಿಯೋದವರು ‘ವಿಶ್ವಂ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಗೋಪಿ ಚಂದ್ ಅವರು ಈ ಚಿತ್ರಕ್ಕೆ ಹೀರೋ. ವ್ಯತ್ಲಾ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು