ಯಶ್, ರಣಬೀರ್ ನಟನೆಯ ‘ರಾಮಾಯಣ’ದ ಜತೆ ಸ್ಪರ್ಧೆ; ರಾಮನ ಬಗ್ಗೆ ಹೊಸ ಸಿನಿಮಾ

ರಾಮಾಯಣ ಆಧರಿಸಿ ಚಿತ್ರರಂಗದಲ್ಲಿ ಈಗಾಗಲೇ ಹಲವು ಸಿನಿಮಾಗಳು ಬಂದಿವೆ. ಹಿಂದಿಯಲ್ಲಿ ‘ರಾಮಾಯಣ’ದ ಶೂಟಿಂಗ್ ಶುರುವಾಗಿದೆ. ಈ ಚಿತ್ರದಲ್ಲಿ ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಮೊದಲಾದವರು ನಟಿಸಿದ್ದಾರೆ. ರಾಮ ನವಮಿ ಸಂದರ್ಭದಲ್ಲಿ ತೆಲುಗು ‘ರಾಮಾಯಣ’ದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ.  

ಯಶ್, ರಣಬೀರ್ ನಟನೆಯ ‘ರಾಮಾಯಣ’ದ ಜತೆ ಸ್ಪರ್ಧೆ; ರಾಮನ ಬಗ್ಗೆ ಹೊಸ ಸಿನಿಮಾ
ರಾಮಾಯಣ

Updated on: Apr 18, 2024 | 6:59 AM

ಏಪ್ರಿಲ್ 17ರಂದು ಎಲ್ಲ ಕಡೆಗಳಲ್ಲಿ ರಾಮ ನವಮಿಯನ್ನು ಆಚರಿಸಲಾಗಿದೆ. ರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ಈ ಹಬ್ಬದ ಅದ್ದೂರಿತನ ಜೋರಾಗಿತ್ತು. ಈ ಮಧ್ಯೆ ರಾಮಾಯಣದ ಬಗ್ಗೆ ಹೊಸ ಸಿನಿಮಾ ಘೋಷಣೆ ಮಾಡಲಾಗಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಜರ್ನಿ ಟು ಅಯೋಧ್ಯ’ (Journey To Ayodhya) ಎಂದು ಶೀರ್ಷಿಕೆ ಇಡಲಾಗಿದೆ. ಮುಂದಿನ ದಿನಗಳಲ್ಲಿ ಸಿನಿಮಾದ ಟೈಟಲ್ ಘೋಷಣೆ ಆಗಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಚಿತ್ರರಂಗದಲ್ಲಿ ಈಗಾಗಲೇ ರಾಮಾಯಣ ಆಧರಿಸಿ ಹಲವು ಸೀರಿಸ್ ಹಾಗೂ ಸಿನಿಮಾಗಳು ಬಂದಿವೆ. ಹಿಂದಿಯಲ್ಲಿ ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ದ ಶೂಟಿಂಗ್ ಶುರುವಾಗಿದೆ. ಈ ಸಿನಿಮಾ ಸೆಟ್​ನ ಫೋಟೋಗಳು ಲೀಕ್ ಆಗಿದ್ದವು. ಈಗ ರಾಮ ನವಮಿ ಸಂದರ್ಭದಲ್ಲಿ ತೆಲುಗು ‘ರಾಮಾಯಣ’ದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ.

‘ಚಿತ್ರಾಲಯಂ ಸ್ಟುಡಿಯೋಸ್’ ಬ್ಯಾನರ್ ಅಡಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ವಿಎನ್​ ಆದಿತ್ಯ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಪೋಸ್ಟರ್​ನಲ್ಲಿ ವ್ಯಕ್ತಿಯೋರ್ವ ರಸ್ತೆಯಲ್ಲಿ ನಡೆದು ಸಾಗುತ್ತಿರುವುದಿದೆ. ಅಯೋಧ್ಯೆ 1177 ಕಿ.ಮೀ ಎಂದು ಬರೆದಿದೆ. ಹೀಗಾಗಿ ದಕ್ಷಿಣದಿಂದ ಅಯೋಧ್ಯೆಗೆ ಹೋಗುವ ಕಥೆ ಇದಿರಬಹುದು ಎಂದು ಊಹಸಿಲಾಗಿದೆ. ಪೋಸ್ಟರ್​ನಲ್ಲಿ ಇರುವುದು ರಾಮನೇ ಹೌದೋ ಅಲ್ಲವೋ ಎಂಬುದು ಸ್ಪಷ್ಟವಾಗಿಲ್ಲ. ಸಿನಿಮಾದ ಪಾತ್ರವರ್ಗದ ಬಗ್ಗೆಯೂ ತಂಡ ಗುಟ್ಟುಬಿಟ್ಟುಕೊಟ್ಟಿಲ್ಲ. ಸದ್ಯ ಸಿನಿಮಾ ಕೆಲಸಗಳು ಪ್ರೀ ಪ್ರೊಡಕ್ಷನ್ ಹಂತದಲ್ಲಿ ಇವೆ.

ಇದನ್ನೂ ಓದಿ: ಬಾಲಿವುಡ್​ನ ‘ರಾಮಾಯಣ’ ಚಿತ್ರಕ್ಕೆ ನಿರ್ಮಾಪಕನಾದ ಯಶ್; ಏನಿದು ಸಮಾಚಾರ?

ರಾಮಾಯಣ ಸಿನಿಮಾ ಮಾಡುವಾಗ ಸಾಕಷ್ಟು ಎಚ್ಚರಿಕೆ ಬೇಕು. ಕಥೆ ಹೇಳಿರುವ ಅನುಭವ ಬೇಕು. ಆದರೆ, ವಿಎನ್​ ಆದಿತ್ಯ ನಿರ್ದೇಶನಕ್ಕೆ ಹೊಸಬರು. ಅವರು ಯಾವ ರೀತಿಯಲ್ಲಿ ಸಿನಿಮಾ ಮಾಡುತ್ತಾರೆ ಎನ್ನುವ ಕುತೂಹಲ ಮೂಡಿದೆ. ಅಂದಹಾಗೆ ಇದು ಪ್ಯಾನ್ ಇಂಡಿಯಾ ಸಿನಿಮಾ ಎಂದು ತಂಡ ಹೇಳಿಕೊಂಡಿದೆ. ಸದ್ಯ ಚಿತ್ರಾಲಯಂ ಸ್ಟುಡಿಯೋದವರು ‘ವಿಶ್ವಂ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಗೋಪಿ ಚಂದ್ ಅವರು ಈ ಚಿತ್ರಕ್ಕೆ ಹೀರೋ. ವ್ಯತ್ಲಾ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us