AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಜ್ಯೂ.ಎನ್​ಟಿಆರ್ ಜತೆ ಮತ್ತೆ ತೆರೆ ಹಂಚಿಕೊಳ್ಳಲಿದ್ದಾರಾ ಆಲಿಯಾ ಭಟ್?

Jr NTR | Koratala Siva: ಜ್ಯೂ.ಎನ್​ಟಿಆರ್ ಹಾಗೂ ಕೊರಟಾಲ ಶಿವ ಕಾಂಬಿನೇಷನ್​ನಲ್ಲಿ ಹೊಸ ಚಿತ್ರ ಸೆಟ್ಟೇರಲಿದೆ. ಇದಕ್ಕೆ ಆಲಿಯಾ ಭಟ್ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಿಂದ ಜೋರಾಗಿ ಕೇಳಿಬಂದಿದೆ.

Alia Bhatt: ಜ್ಯೂ.ಎನ್​ಟಿಆರ್ ಜತೆ ಮತ್ತೆ ತೆರೆ ಹಂಚಿಕೊಳ್ಳಲಿದ್ದಾರಾ ಆಲಿಯಾ ಭಟ್?
ಆಲಿಯಾ ಭಟ್, ಜ್ಯೂ.ಎನ್​ಟಿಆರ್
TV9 Web
| Edited By: |

Updated on:Feb 04, 2022 | 2:29 PM

Share

ಜ್ಯೂ.ಎನ್​ಟಿಆರ್ ‘ಆರ್​​ಆರ್​ಆರ್​’ (RRR) ಚಿತ್ರದಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಅವರ ಬೇಡಿಕೆಯೂ ಹೆಚ್ಚಿದೆ. ಅಲ್ಲದೇ ಅವರ ಮುಂದಿನ ಚಿತ್ರಗಳ ಕುರಿತು ನಿರೀಕ್ಷೆಯೂ ಜೋರಿದೆ. ಖ್ಯಾತ ನಿರ್ದೇಶಕ ಕೊರಟಾಲ ಶಿವ (Koratala Siva) ಅವರೊಂದಿಗೆ ಜ್ಯೂ.ಎನ್​ಟಿಆರ್ (Jr NTR) ಮುಂದಿನ ಚಿತ್ರಕ್ಕೆ ಸೈನ್ ಮಾಡಿದ್ದು ಬಹುತೇಕ ಅಂತಿಮವಾಗಿದೆ. ಅಲ್ಲದೇ ಆ ಚಿತ್ರಕ್ಕೆ ಸದ್ಯ ‘ಎನ್​ಟಿಆರ್ 30’ ಅಥವಾ ‘ಎನ್​ಟಿಆರ್- ಕೊರಟಾಲ 2’ ಎಂದೂ ಕರೆಯಲಾಗುತ್ತಿದೆ. ಸೂಪರ್ ಹಿಟ್ ಚಿತ್ರ ‘ಜನತಾ ಗ್ಯಾರೇಜ್’ ನಂತರ ಈ ಜೋಡಿ ಮತ್ತೆ ಒಂದಾಗುತ್ತರಿಉವ ಚಿತ್ರ ಇದಾಗಿದ್ದರಿಂದ, ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸದ್ಯ ಕೇಳಿಬರುತ್ತಿರುವ ಗುಸುಗುಸುಗಳ ಪ್ರಕಾರ ಈ ಚಿತ್ರದಲ್ಲಿ ಜ್ಯೂ.ಎನ್​ಟಿಆರ್ ಜತೆ ಬಾಲಿವುಡ್ ಬೆಡಗಿ ಆಲಿಯಾ ಭಟ್ ಬಣ್ಣಹಚ್ಚಲಿದ್ದಾರಂತೆ!

‘ಆರ್​ಆರ್​​ಆರ್​’ ಚಿತ್ರದಲ್ಲಿ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಜತೆ ಆಲಿಯಾ ಈಗಾಗಲೇ ತೆರೆ ಹಂಚಿಕೊಂಡಿದ್ದಾರೆ. ಮುಂದಿನ ಚಿತ್ರಕ್ಕೆ ಸಿಕ್ಕಾಪಟ್ಟೆ ಸಂಭಾವನೆಯ ಬೇಡಿಕೆಯನ್ನೂ ಆಲಿಯಾ ಮುಂದಿಟ್ಟಿದ್ದಾರೆ ಎಂದು ವರದಿಯಾಗಿದೆ. ಮತ್ತೊಂದು ಅಚ್ಚರಿಯ ವಿಚಾರವೆಂದರೆ ಆಲಿಯಾ ಹೊರತಾಗಿ ಸಮಂತಾ ಕೂಡ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದೂ ಹೇಳಲಾಗಿದೆ.

ಸದ್ಯ ಪ್ರಿ-ಪ್ರೊಡಕ್ಷನ್ ಕೆಲಸಗಳಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ವಿದ್ಯಾರ್ಥಿ ಸಂಘಟನೆಯ ನಾಯಕನ ಪಾತ್ರದಲ್ಲಿ ಜ್ಯೂ.ಎನ್​ಟಿಆರ್ ಕಾಣಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಅವರು 6-7 ಕೆಜಿ ತೂಕವನ್ನೂ ಇಳಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಚಿತ್ರವನ್ನು ನಂದಮೂರಿ ಕಲ್ಯಾಣ್ ರಾಮ್ ಮತ್ತು ಸುಧಾಕರ್ ಮಿಕ್ಕಿಲಿನೇನಿ ಜಂಟಿಯಾಗಿ ನಿರ್ಮಾಣ ಮಾಡಲಿದ್ದಾರೆ. ಅನಿರುದ್ಧ್ ರವಿಚಂದ್ರನ್ ಸಂಗೀತ ನೀಡಲಿದ್ದಾರೆ. ಆದರೆ ಚಿತ್ರದಲ್ಲಿ ಆಳಿಯಾ ಕಾಣಿಸಿಕೊಳ್ಳುತ್ತಿರುವ ಕುರಿತು ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಸದ್ಯದಲ್ಲೇ ಚಿತ್ರತಂಡ ಹಾಗೂ ಆಲಿಯಾ ಪ್ರವೇಶದ ಕುರಿತು ಮಾಹಿತಿ ಅಧಿಕೃತವಾಗಿ ಘೋಷಣೆಯಾಗುವ ನಿರೀಕ್ಷೆ ಇದೆ.

ಚಿತ್ರಗಳ ವಿಷಯಕ್ಕೆ ಬಂದರೆ ರಾಜಮೌಳಿ ನಿರ್ದೇಶನದ ‘ಆರ್​​ಆರ್​​ಆರ್​’ ಚಿತ್ರದ ಬಿಡುಗಡೆಗೆ ಆಲಿಯಾ ಹಾಗೂ ಜ್ಯೂ.ಎನ್​ಟಿಆರ್ ಕಾಯುತ್ತಿದ್ದಾರೆ. ವಾಸ್ತವದಲ್ಲಿ ಜನವರಿ 7ರಂದು ತೆರೆಕಾಣಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಚಿತ್ರದ ಬಿಡುಗಡೆ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ:

Rashmika Mandanna: ‘ಈ ಲುಕ್ ಹೇಗಿದೆ?’; ಹೊಸ ಪೋಟೋಗಳನ್ನು ಹಂಚಿಕೊಂಡು ರಶ್ಮಿಕಾ ಪ್ರಶ್ನೆ

Keerthy Suresh: ಕೀರ್ತಿ ಸುರೇಶ್​ಗೆ ಕೊವಿಡ್ ಪಾಸಿಟಿವ್; ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡ ನಟಿ

Published On - 8:45 pm, Tue, 11 January 22

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?