AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ನೀಲ್-ಜೂನಿಯರ್ ಎನ್​ಟಿಆರ್​ ಸಿನಿಮಾ ಶೂಟಿಂಗ್ ಯಾವಾಗ? ಇಲ್ಲಿದೆ ಅಪ್​ಡೇಟ್

‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್ ನೀಲ್ ಅವರು ಪ್ರಭಾಸ್ ಜೊತೆ ‘ಸಲಾರ್’ ಸಿನಿಮಾ ಮಾಡಿ ಗೆಲುವು ಕಂಡರು. ಈಗ ಅವರು ಜೂನಿಯರ್​ ಎನ್​ಟಿಆರ್​ ಜೊತೆ ಸಿನಿಮಾ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಯಾವಾಗ ಶುರು ಆಗಲಿದೆ ಎಂಬ ಕುರಿತು ಒಂದು ಹೊಸ ನ್ಯೂಸ್ ಕೇಳಿಬಂದಿದೆ.

ಪ್ರಶಾಂತ್ ನೀಲ್-ಜೂನಿಯರ್ ಎನ್​ಟಿಆರ್​ ಸಿನಿಮಾ ಶೂಟಿಂಗ್ ಯಾವಾಗ? ಇಲ್ಲಿದೆ ಅಪ್​ಡೇಟ್
Prashanth Neel, Jr Ntr
Follow us
ಮದನ್​ ಕುಮಾರ್​
|

Updated on: Feb 19, 2025 | 4:57 PM

ಕನ್ನಡ ಚಿತ್ರರಂಗದ ಸ್ಟಾರ್​ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಟಾಲಿವುಡ್​ನಲ್ಲೂ ಸಖತ್ ಬೇಡಿಕೆ ಇದೆ. ‘ಕೆಜಿಎಫ್​: ಚಾಪ್ಟರ್​ 1’ ಮತ್ತು ‘ಕೆಜಿಎಫ್: ಚಾಪ್ಟರ್​ 2’ ಸಿನಿಮಾಗಳು ಸೂಪರ್​ ಹಿಟ್ ಆದ ನಂತರ ಅವರ ಜೊತೆ ಸಿನಿಮಾ ಮಾಡಲು ಸ್ಟಾರ್​ ಹೀರೋಗಳು ಆಸಕ್ತಿ ತೋರಿಸಿದರು. ಜೂನಿಯರ್​ ಎನ್​ಟಿಆರ್​ ಜೊತೆ ಪ್ರಶಾಂತ್ ನೀಲ್ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಹೊರಬಿದ್ದಾಗ ಅಭಿಮಾನಿಗಳಿಗೆ ಸಖತ್ ಖುಷಿ ಆಗಿತ್ತು. ಆದರೆ ಆ ಸಿನಿಮಾ ಸೆಟ್ಟೇರಲು ಬಹಳ ಸಮಯ ಹಿಡಿಯಿತು. ಈಗ ಆ ಚಿತ್ರದ ಶೂಟಿಂಗ್​ ಆರಂಭಕ್ಕೆ ಮುಹೂರ್ತ ಕೂಡಿಬಂದಿದೆ.

ವರದಿಗಳ ಪ್ರಕಾರ, ಜೂನಿಯರ್​ ಎನ್​ಟಿಆರ್​ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್​ನ ಸಿನಿಮಾಗೆ ಫೆಬ್ರವರಿ 20ರಿಂದ ಚಿತ್ರೀಕರಣ ಆರಂಭ ಆಗಲಿದೆ. ಇದು ಅದ್ದೂರಿ ಆ್ಯಕ್ಷನ್​ ಸಿನಿಮಾ ಆಗಿರಲಿದೆ. ಮೊದಲ ಹಂತದಲ್ಲಿ ಕೇವಲ 10 ದಿನಗಳ ಕಾಲ ಚಿತ್ರೀಕರಣ ಮಾಡಲಾಗುವುದು. ಹಾಗಾಗಿ ಈ ಹಂತದಲ್ಲಿ ಜೂನಿಯರ್​ ಎನ್​ಟಿಆರ್​ ಅವರು ಶೂಟಿಂಗ್​ ಸೆಟ್​ಗೆ ಬರುವುದಿಲ್ಲ. ಮಾರ್ಚ್​ನಲ್ಲಿ 2ನೇ ಹಂತದ ಶೂಟಿಂಗ್ ನಡೆಯಲಿದ್ದು, ಆಗ ಅವರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಏನು ಎಂಬುದು ಬಹಿರಂಗ ಆಗಿಲ್ಲ. ಜೂನಿಯರ್ ಎನ್​ಟಿಆರ್​ ಅವರಿಗೆ ರುಕ್ಮಿಣಿ ವಸಂತ್ ನಾಯಕಿ ಆಗಲಿದ್ದಾರೆ ಎಂದು ಕೂಡ ವರದಿ ಆಗಿದೆ. ಘಟಾನುಘಟಿಗಳ ಸಿನಿಮಾ ಆದ್ದರಿಂದ ನಿರೀಕ್ಷೆ ಜೋರಾಗಿದೆ. ಸಿನಿಮಾ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಜೂನಿಯರ್​ ಎನ್​ಟಿಆರ್​ ಅಭಿಮಾನಿಗಳು ಕಾದಿದ್ದಾರೆ. ಶೂಟಿಂಗ್ ಆರಂಭ ಆಗುತ್ತಿದೆ ಎಂಬ ಸುದ್ದಿ ಜೇಳಿ ಅಭಿಮಾನಿಗಳಿಗೆ ಖುಷಿ ಆಗಿದೆ.

ಇದನ್ನೂ ಓದಿ: ‘ವಾರ್ 2’ ಚಿತ್ರದ ಬಗ್ಗೆ ಜೂನಿಯರ್​ ಎನ್​ಟಿಆರ್ ಅಭಿಮಾನಿಗಳ ಅಸಮಾಧಾನ

‘ದೇವರ’ ಸಿನಿಮಾದ ಬಳಿಕ ಜೂನಿಯರ್​ ಎನ್​ಟಿಆರ್​ ಅವರು ‘ವಾರ್​ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ ಮೂಲಕ ಅವರು ಬಾಲಿವುಡ್​ಗೆ ಕಾಲಿಟ್ಟಿದ್ದಾರೆ. ಹೃತಿಕ್ ರೋಷನ್​ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ‘ದೇವರ 2’ ಕೂಡ ಅವರ ಕೈಯಲ್ಲಿದೆ. ಆದರೆ ಆ ಸಿನಿಮಾದ ಶೂಟಿಂಗ್ ಆರಂಭಕ್ಕೆ ಇನ್ನೂ ಸಮಯ ಬೇಕಿದೆ. ಪ್ರಶಾಂತ್ ನೀಲ್ ಜೊತೆಗಿನ ಸಿನಿಮಾದ ಕೆಲಸಗಳು ಮುಗಿದ ನಂತರವೇ ‘ದೇವರ 2’ ಸೆಟ್ಟೇರಲಿದೆ ಎನ್ನಲಾಗಿದೆ. ಒಟ್ಟಿನಲ್ಲಿ ಜೂನಿಯರ್ ಎನ್​ಟಿಆರ್​ ಅವರು ಸಿಕ್ಕಾಪಟ್ಟೆ ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು