ಜೂನಿಯರ್​ ಎನ್​ಟಿಆರ್​, ಪ್ರಶಾಂತ್​ ನೀಲ್​ ಜೋಡಿಯ ಸಿನಿಮಾ ಬಗ್ಗೆ ಸಿಕ್ತು ದೊಡ್ಡ ಅಪ್​ಡೇಟ್​

‘ದೇವರ’, ‘ವಾರ್ 2’ ಸಿನಿಮಾದ ಕೆಲಸಗಳಲ್ಲಿ ಜೂನಿಯರ್​ ಎನ್​ಟಿಆರ್​ ಅವರು ಬ್ಯುಸಿ ಆಗಿದ್ದಾರೆ. ಪ್ರಶಾಂತ್​ ನೀಲ್​ ಹಾಗೂ ಜೂನಿಯರ್​ ಎನ್​ಟಿಆರ್​ ಅವರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಹೊಸ ಸಿನಿಮಾ ಬಗ್ಗೆ ಸಖತ್​ ನಿರೀಕ್ಷೆ ಇದೆ. ಇಂದು (20) ಜೂ. ಎನ್​ಟಿರ್​ ಹುಟ್ಟುಹಬ್ಬದ ಪ್ರಯುಕ್ತ ಶೂಟಿಂಗ್​ ಬಗ್ಗೆ ಮಾಹಿತಿ ನೀಡಲಾಗಿದೆ.

ಜೂನಿಯರ್​ ಎನ್​ಟಿಆರ್​, ಪ್ರಶಾಂತ್​ ನೀಲ್​ ಜೋಡಿಯ ಸಿನಿಮಾ ಬಗ್ಗೆ ಸಿಕ್ತು ದೊಡ್ಡ ಅಪ್​ಡೇಟ್​
ಪ್ರಶಾಂತ್​ ನೀಲ್​, ಜೂನಿಯರ್​ ಎನ್​ಟಿಆರ್​
Follow us
|

Updated on: May 20, 2024 | 10:28 PM

ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಅವರು ಪರಭಾಷೆಯಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಅವರು ಟಾಲಿವುಡ್​ ಸ್ಟಾರ್​ ಹೀರೋ ಪ್ರಭಾಸ್​ ಜೊತೆ ‘ಸಲಾರ್​’ ಸಿನಿಮಾ ಮಾಡಿದರು. ಈಗ ಅದರ 2ನೇ ಪಾರ್ಟ್​ಗೆ ತಯಾರಿ ನಡೆದಿದೆ. ಅಲ್ಲದೇ, ಜೂನಿಯರ್​ ಎನ್​ಟಿಆರ್​ (Jr NTR) ಅವರ ಜೊತೆಗೂ ಪ್ರಶಾಂತ್​ ನೀಲ್​ ಅವರು ಒಂದು ಸಿನಿಮಾ ಮಾಡಲಿದ್ದಾರೆ. ಆ ಬಗ್ಗೆ ಇಂದು (ಮೇ 20) ಸೂಪರ್​ ಅಪ್​ಡೇಟ್​ ಸಿಕ್ಕಿದೆ. ಜೂನಿಯರ್​ ಎನ್​ಟಿಆರ್ ಅವರ ಬರ್ತ್​ಡೇ (Jr NTR Birthday) ಪ್ರಯುಕ್ತ ನಿರ್ಮಾಣ ಸಂಸ್ಥೆಯಿಂದ ಗುಡ್​ ನ್ಯೂಸ್​ ನೀಡಲಾಗಿದೆ. ಶೂಟಿಂಗ್​ ಆರಂಭದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ಜೂನಿಯರ್​ ಎನ್​ಟಿಆರ್​ ಮತ್ತು ಪ್ರಶಾಂತ್​ ನೀಲ್ ಅವರ ಕಾಂಬಿನೇಷನ್​ನ ಸಿನಿಮಾ ಅನೌನ್ಸ್​ ಆಗಿ ಬಹಳ ತಿಂಗಳು ಕಳೆದಿವೆ. ಆದರೆ ಯಾವಾಗ ಇದರ ಶೂಟಿಂಗ್​ ಆರಂಭ ಆಗಲಿದೆ ಎಂಬುದು ತಿಳಿದಿರಲಿಲ್ಲ. ಈಗ ನಿರ್ಮಾಣ ಸಂಸ್ಥೆಯಾದ ‘ಮೈತ್ರಿ ಮೂವೀ ಮೇಕರ್ಸ್​’ ಕಡೆಯಿಂದ ಅಪ್​ಡೇಟ್​ ನೀಡಲಾಗಿದೆ. ಆಗಸ್ಟ್​ ತಿಂಗಳಿಂದ ಈ ಸಿನಿಮಾದ ಚಿತ್ರೀಕರಣ ಶುರುವಾಗಲಿದೆ.

ಟಾಲಿವುಡ್​ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಮೈತ್ರಿ ಮೂವೀ ಮೇಕರ್ಸ್​’ ಸೋಶಿಯಲ್​ ಮೀಡಿಯಾ ಖಾತೆ ಮೂಲಕ ಜೂನಿಯರ್​ ಎನ್​ಟಿಆರ್​ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಲಾಗಿದೆ. ‘ಮ್ಯಾನ್​ ಆಫ್​ ಮಾಸಸ್​ ಜೂನಿಯರ್​ ಎನ್​ಟಿಆರ್​ ಅವರಿಗೆ ಹ್ಯಾಪಿ ಬರ್ತ್​ಡೇ. 2024ರ ಆಗಸ್ಟ್​ನಿಂದ ಶೂಟಿಂಗ್​ ಆರಂಭ ಆಗಲಿದೆ. ಪವರ್​ಹೌಸ್​ ಪ್ರಾಜೆಕ್ಟ್​ಗಾಗಿ ಸಿದ್ಧರಾಗಿ’ ಎಂದು ಪೋಸ್ಟ್​ ಮಾಡಲಾಗಿದೆ.

ಇದನ್ನೂ ಓದಿ: ಪ್ರಶಾಂತ್​ ನೀಲ್​, ಜೂ. ಎನ್​ಟಿಆರ್​ಗೆ ‘ಡ್ರ್ಯಾಗನ್​’ ಟೈಟಲ್​ ಕೊಟ್ಟಿದ್ದು ಕರಣ್​ ಜೋಹರ್​?

ಶೂಟಿಂಗ್​ ಶುರುವಾಗುವ ಸಮಯವನ್ನು ಹೊರತುಪಡಿಸಿ ಬೇರೆ ಯಾವುದೇ ಮಾಹಿತಿ ಸದ್ಯಕ್ಕೆ ಹೊರಬಿದ್ದಿಲ್ಲ. ಮೂಲಗಳ ಪ್ರಕಾರ ಈ ಸಿನಿಮಾಗೆ ‘ಡ್ರ್ಯಾಗನ್​’ ಎಂದು ಶೀರ್ಷಿಕೆ ಇಡಲಾಗಿದೆ. ತೆಲುಗು, ಕನ್ನಡ, ಮಲಯಾಳಂ, ತಮಿಳು, ಹಿಂದಿ ಮುಂತಾದ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ‘ಡ್ರ್ಯಾಗನ್​’ ಶೀರ್ಷಿಕೆಯನ್ನು ಹಿಂದಿಯಲ್ಲಿ ಕರಣ್​ ಜೋಹರ್​ ಅವರು ನೀಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ