AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಸಹವಾಸ ಮಾಡಿದವರಿಗೆ ಸೋಲು ಖಚಿತ; ಟಾಲಿವುಡ್​ನಲ್ಲಿದೆ ದೊಡ್ಡ ಮೂಢನಂಬಿಕೆ

ಒಂದಲ್ಲ ಎರಡಲ್ಲ, ಅನೇಕ ಬಾರಿ ಈ ನಂಬಿಕೆ ನಿಜವಾಗಿದೆ. ಹಾಗಂತ ಒಂದು ಸಿನಿಮಾದ ಸೋಲನ್ನು ಸಂಬಂಧವೇ ಇಲ್ಲದ ರಾಜಮೌಳಿ ತಲೆಗೆ ಕಟ್ಟಿದರೆ ಅದಕ್ಕೆ ಮೂಢನಂಬಿಕೆ ಎನ್ನದೇ ಬೇರೆ ದಾರಿಯಿಲ್ಲ.

ರಾಜಮೌಳಿ ಸಹವಾಸ ಮಾಡಿದವರಿಗೆ ಸೋಲು ಖಚಿತ; ಟಾಲಿವುಡ್​ನಲ್ಲಿದೆ ದೊಡ್ಡ ಮೂಢನಂಬಿಕೆ
ರಾಜಮೌಳಿ ಸಹವಾಸ ಮಾಡಿದವರಿಗೆ ಸೋಲು ಖಚಿತ; ಟಾಲಿವುಡ್​ನಲ್ಲಿದೆ ದೊಡ್ಡ ಮೂಢನಂಬಿಕೆ
TV9 Web
| Edited By: |

Updated on: Jul 09, 2021 | 11:40 AM

Share

ನಿರ್ದೇಶಕ ರಾಜಮೌಳಿ ಅವರ ಹವಾ ಏನೆಂಬುದು ಎಲ್ಲರಿಗೂ ಗೊತ್ತು. ಭಾರತೀಯ ಚಿತ್ರರಂಗವೇ ನಿಬ್ಬೆರಗಾಗುವಂತಹ ಸೂಪರ್​ ಹಿಟ್​ ಸಿನಿಮಾಗಳನ್ನು ಅವರು ನೀಡಿದ್ದಾರೆ. ‘ಬಾಹುಬಲಿ’ ಮಾಡಿದ ಸಾಧನೆಯನ್ನು ಹೊಸದಾಗಿ ಹೇಳಬೇಕಾದ್ದಿಲ್ಲ. ಹಾಗಾಗಿ ಅವರ ಜೊತೆ ಕೆಲಸ ಮಾಡಬೇಕು ಎಂದು ಅನೇಕ ಕಲಾವಿದರು ತುದಿಗಾಲಿನಲ್ಲಿ ನಿಂತು ಕಾಯುತ್ತಾರೆ. ಆದರೆ ರಾಜಮೌಳಿ ಜೊತೆ ಸಿನಿಮಾ ಮಾಡಿ ಒಮ್ಮೆ ಗೆಲ್ಲುವ ಸ್ಟಾರ್​ಗಳು, ಮುಂದಿನ ಸಿನಿಮಾದಲ್ಲಿ ಬೇರೆ ನಿರ್ದೇಶಕರ ಜೊತೆ ಕೆಲಸ ಮಾಡಿದರೆ ಹೀನಾಯವಾಗಿ ಸೋಲುತ್ತಾರೆ ಎಂಬ ನಂಬಿಕೆ ಟಾಲಿವುಡ್​ನಲ್ಲಿದೆ. ಅದು ಪದೇಪದೇ ಸಾಬೀತಾಗಿದೆ ಕೂಡ.

2001ರಲ್ಲಿ ರಾಜಮೌಳಿ ನಿರ್ದೇಶಿಸಿದ ‘ಸ್ಟೂಡೆಂಟ್​ ನಂಬರ್​ 1’ ಚಿತ್ರಕ್ಕೆ ಜ್ಯೂ. ಎನ್​ಟಿಆರ್​ ಹೀರೋ ಆಗಿದ್ದರು. ಆ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​​ಗೆ ದೊಡ್ಡ ಗೆಲುವು ಸಿಕ್ಕಿತು. ಆದರೆ ನಂತರ ಅವರು ನಟಿಸಿದ ‘ಸುಬ್ಬ’ ಸಿನಿಮಾ ಫ್ಲಾಪ್​ ಆಯಿತು. ಬಳಿಕ ರಾಜಮೌಳಿ ಮತ್ತು ಜ್ಯೂ. ಎನ್​ಟಿಆರ್ ಜೊತೆಯಾಗಿ ‘ಸಿಂಹಾದ್ರಿ’ ಸಿನಿಮಾ ಮಾಡಿ ಯಶಸ್ಸು ಕಂಡರು. ಆ ಬಳಿಕ ಜ್ಯೂ. ಎನ್​ಟಿಆರ್ ನಟಿಸಿದ ‘ಆಂಧ್ರಾವಾಲ’ ಸೋತು ಸುಣ್ಣವಾಯಿತು.

ರಾಜಮೌಳಿ ಜೊತೆ ‘ಮಗಧೀರ’ ಚಿತ್ರ ಮಾಡಿ ಗೆದ್ದಿದ್ದ ರಾಮ್​ ಚರಣ್​ ಅವರು ನಂತರ ‘ಆರಂಜ್’​ ಸಿನಿಮಾದಲ್ಲಿ ಹೀನಾಯವಾಗಿ ಸೋಲು ಅನುಭವಿಸಿದರು. ಪ್ರಭಾಸ್​ ವಿಚಾರದಲ್ಲೂ ಈ ನಂಬಿಕೆ ನಿಜವಾಗಿದೆ. ರಾಜಮೌಳಿ ನಿರ್ದೇಶಿಸಿದ ‘ಚತ್ರಪತಿ’ ಸಿನಿಮಾದಲ್ಲಿ ಪ್ರಭಾಸ್​ಗೆ ಗೆಲುವು ಸಿಕ್ಕಿತ್ತು. ನಂತರ ಮಾಡಿದ ‘ಪೌರ್ಣಮಿ’ ಚಿತ್ರದಲ್ಲಿ ಅವರು ಸೋಲು ಕಂಡರು. ‘ಬಾಹುಬಲಿ’ ಬಳಿಕ ಪ್ರಭಾಸ್​ ನಟಿಸಿದ ‘ಸಾಹೋ’ ಚಿತ್ರ ಫ್ಲಾಪ್ ಆಯಿತು.

ಈ ಇತಿಹಾಸ ಗಮನಿಸಿದ ಬಳಿಕ ರಾಮ್​ ಚರಣ್​ ಮತ್ತು ಜ್ಯೂ ಎನ್​ಟಿಆರ್​ ಫ್ಯಾನ್ಸ್​ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈಗ ರಾಜಮೌಳಿ ಜೊತೆ ಈ ಸ್ಟಾರ್​ ನಟರಿಬ್ಬರು ‘ಆರ್​ಆರ್​ಆರ್​’ ಸಿನಿಮಾ ಮಾಡುತ್ತಿದ್ದಾರೆ. ಆ ಸಿನಿಮಾ ಖಂಡಿತವಾಗಿ ಗೆಲ್ಲಲಿದೆ ಎಂಬುದರಲ್ಲಿ ಯಾವುದೇ ಅನುಮಾನ ಬೇಡ. ಆದರೆ ಆ ಬಳಿಕ ರಾಮ್​ ಚರಣ್​ ನಟಿಸಲಿರುವ 15ನೇ ಸಿನಿಮಾ ಹಾಗೂ ಜ್ಯೂ. ಎನ್​ಟಿಆರ್​ ನಟಿಸಲಿರುವ 30ನೇ ಚಿತ್ರ ಫ್ಲಾಪ್​ ಆಗಲಿದೆ ಎಂಬ ಭಯ ಈಗಲೇ ಕಾಡಲು ಆರಂಭಿಸಿದೆ.

ಒಂದಲ್ಲ ಎರಡಲ್ಲ, ಅನೇಕ ಬಾರಿ ಈ ನಂಬಿಕೆ ನಿಜವಾಗಿದೆ. ಹಾಗಂತ ಒಂದು ಸಿನಿಮಾದ ಸೋಲನ್ನು ಸಂಬಂಧವೇ ಇಲ್ಲದ ರಾಜಮೌಳಿ ತಲೆಗೆ ಕಟ್ಟಿದರೆ ಅದಕ್ಕೆ ಮೂಢನಂಬಿಕೆ ಎನ್ನಲೇಬೇಕು.

ಇದನ್ನೂ ಓದಿ:

ರಾಜಮೌಳಿ ವಿರುದ್ಧ ಸಿಡಿದೆದ್ದ ಶ್ವಾನಪ್ರಿಯರು; ಅಸಲಿಗೆ ಇಲ್ಲಿ ತಪ್ಪು ಯಾರದ್ದು?

‘ಅವರನ್ನು ನೆಲದಲ್ಲಿ ಕೂರಿಸಿದ್ರು, ಬೀದಿ ನಾಯಿ ತೋರಿಸಿದ್ರು’; ನಿರ್ದೇಶಕ ರಾಜಮೌಳಿ ತೀವ್ರ ಬೇಸರ

Follow Us
Web contact
Web contact

TV9 Kannada

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್