AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಸಹವಾಸ ಮಾಡಿದವರಿಗೆ ಸೋಲು ಖಚಿತ; ಟಾಲಿವುಡ್​ನಲ್ಲಿದೆ ದೊಡ್ಡ ಮೂಢನಂಬಿಕೆ

ಒಂದಲ್ಲ ಎರಡಲ್ಲ, ಅನೇಕ ಬಾರಿ ಈ ನಂಬಿಕೆ ನಿಜವಾಗಿದೆ. ಹಾಗಂತ ಒಂದು ಸಿನಿಮಾದ ಸೋಲನ್ನು ಸಂಬಂಧವೇ ಇಲ್ಲದ ರಾಜಮೌಳಿ ತಲೆಗೆ ಕಟ್ಟಿದರೆ ಅದಕ್ಕೆ ಮೂಢನಂಬಿಕೆ ಎನ್ನದೇ ಬೇರೆ ದಾರಿಯಿಲ್ಲ.

ರಾಜಮೌಳಿ ಸಹವಾಸ ಮಾಡಿದವರಿಗೆ ಸೋಲು ಖಚಿತ; ಟಾಲಿವುಡ್​ನಲ್ಲಿದೆ ದೊಡ್ಡ ಮೂಢನಂಬಿಕೆ
ರಾಜಮೌಳಿ ಸಹವಾಸ ಮಾಡಿದವರಿಗೆ ಸೋಲು ಖಚಿತ; ಟಾಲಿವುಡ್​ನಲ್ಲಿದೆ ದೊಡ್ಡ ಮೂಢನಂಬಿಕೆ
TV9 Web
| Edited By: |

Updated on: Jul 09, 2021 | 11:40 AM

Share

ನಿರ್ದೇಶಕ ರಾಜಮೌಳಿ ಅವರ ಹವಾ ಏನೆಂಬುದು ಎಲ್ಲರಿಗೂ ಗೊತ್ತು. ಭಾರತೀಯ ಚಿತ್ರರಂಗವೇ ನಿಬ್ಬೆರಗಾಗುವಂತಹ ಸೂಪರ್​ ಹಿಟ್​ ಸಿನಿಮಾಗಳನ್ನು ಅವರು ನೀಡಿದ್ದಾರೆ. ‘ಬಾಹುಬಲಿ’ ಮಾಡಿದ ಸಾಧನೆಯನ್ನು ಹೊಸದಾಗಿ ಹೇಳಬೇಕಾದ್ದಿಲ್ಲ. ಹಾಗಾಗಿ ಅವರ ಜೊತೆ ಕೆಲಸ ಮಾಡಬೇಕು ಎಂದು ಅನೇಕ ಕಲಾವಿದರು ತುದಿಗಾಲಿನಲ್ಲಿ ನಿಂತು ಕಾಯುತ್ತಾರೆ. ಆದರೆ ರಾಜಮೌಳಿ ಜೊತೆ ಸಿನಿಮಾ ಮಾಡಿ ಒಮ್ಮೆ ಗೆಲ್ಲುವ ಸ್ಟಾರ್​ಗಳು, ಮುಂದಿನ ಸಿನಿಮಾದಲ್ಲಿ ಬೇರೆ ನಿರ್ದೇಶಕರ ಜೊತೆ ಕೆಲಸ ಮಾಡಿದರೆ ಹೀನಾಯವಾಗಿ ಸೋಲುತ್ತಾರೆ ಎಂಬ ನಂಬಿಕೆ ಟಾಲಿವುಡ್​ನಲ್ಲಿದೆ. ಅದು ಪದೇಪದೇ ಸಾಬೀತಾಗಿದೆ ಕೂಡ.

2001ರಲ್ಲಿ ರಾಜಮೌಳಿ ನಿರ್ದೇಶಿಸಿದ ‘ಸ್ಟೂಡೆಂಟ್​ ನಂಬರ್​ 1’ ಚಿತ್ರಕ್ಕೆ ಜ್ಯೂ. ಎನ್​ಟಿಆರ್​ ಹೀರೋ ಆಗಿದ್ದರು. ಆ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​​ಗೆ ದೊಡ್ಡ ಗೆಲುವು ಸಿಕ್ಕಿತು. ಆದರೆ ನಂತರ ಅವರು ನಟಿಸಿದ ‘ಸುಬ್ಬ’ ಸಿನಿಮಾ ಫ್ಲಾಪ್​ ಆಯಿತು. ಬಳಿಕ ರಾಜಮೌಳಿ ಮತ್ತು ಜ್ಯೂ. ಎನ್​ಟಿಆರ್ ಜೊತೆಯಾಗಿ ‘ಸಿಂಹಾದ್ರಿ’ ಸಿನಿಮಾ ಮಾಡಿ ಯಶಸ್ಸು ಕಂಡರು. ಆ ಬಳಿಕ ಜ್ಯೂ. ಎನ್​ಟಿಆರ್ ನಟಿಸಿದ ‘ಆಂಧ್ರಾವಾಲ’ ಸೋತು ಸುಣ್ಣವಾಯಿತು.

ರಾಜಮೌಳಿ ಜೊತೆ ‘ಮಗಧೀರ’ ಚಿತ್ರ ಮಾಡಿ ಗೆದ್ದಿದ್ದ ರಾಮ್​ ಚರಣ್​ ಅವರು ನಂತರ ‘ಆರಂಜ್’​ ಸಿನಿಮಾದಲ್ಲಿ ಹೀನಾಯವಾಗಿ ಸೋಲು ಅನುಭವಿಸಿದರು. ಪ್ರಭಾಸ್​ ವಿಚಾರದಲ್ಲೂ ಈ ನಂಬಿಕೆ ನಿಜವಾಗಿದೆ. ರಾಜಮೌಳಿ ನಿರ್ದೇಶಿಸಿದ ‘ಚತ್ರಪತಿ’ ಸಿನಿಮಾದಲ್ಲಿ ಪ್ರಭಾಸ್​ಗೆ ಗೆಲುವು ಸಿಕ್ಕಿತ್ತು. ನಂತರ ಮಾಡಿದ ‘ಪೌರ್ಣಮಿ’ ಚಿತ್ರದಲ್ಲಿ ಅವರು ಸೋಲು ಕಂಡರು. ‘ಬಾಹುಬಲಿ’ ಬಳಿಕ ಪ್ರಭಾಸ್​ ನಟಿಸಿದ ‘ಸಾಹೋ’ ಚಿತ್ರ ಫ್ಲಾಪ್ ಆಯಿತು.

ಈ ಇತಿಹಾಸ ಗಮನಿಸಿದ ಬಳಿಕ ರಾಮ್​ ಚರಣ್​ ಮತ್ತು ಜ್ಯೂ ಎನ್​ಟಿಆರ್​ ಫ್ಯಾನ್ಸ್​ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈಗ ರಾಜಮೌಳಿ ಜೊತೆ ಈ ಸ್ಟಾರ್​ ನಟರಿಬ್ಬರು ‘ಆರ್​ಆರ್​ಆರ್​’ ಸಿನಿಮಾ ಮಾಡುತ್ತಿದ್ದಾರೆ. ಆ ಸಿನಿಮಾ ಖಂಡಿತವಾಗಿ ಗೆಲ್ಲಲಿದೆ ಎಂಬುದರಲ್ಲಿ ಯಾವುದೇ ಅನುಮಾನ ಬೇಡ. ಆದರೆ ಆ ಬಳಿಕ ರಾಮ್​ ಚರಣ್​ ನಟಿಸಲಿರುವ 15ನೇ ಸಿನಿಮಾ ಹಾಗೂ ಜ್ಯೂ. ಎನ್​ಟಿಆರ್​ ನಟಿಸಲಿರುವ 30ನೇ ಚಿತ್ರ ಫ್ಲಾಪ್​ ಆಗಲಿದೆ ಎಂಬ ಭಯ ಈಗಲೇ ಕಾಡಲು ಆರಂಭಿಸಿದೆ.

ಒಂದಲ್ಲ ಎರಡಲ್ಲ, ಅನೇಕ ಬಾರಿ ಈ ನಂಬಿಕೆ ನಿಜವಾಗಿದೆ. ಹಾಗಂತ ಒಂದು ಸಿನಿಮಾದ ಸೋಲನ್ನು ಸಂಬಂಧವೇ ಇಲ್ಲದ ರಾಜಮೌಳಿ ತಲೆಗೆ ಕಟ್ಟಿದರೆ ಅದಕ್ಕೆ ಮೂಢನಂಬಿಕೆ ಎನ್ನಲೇಬೇಕು.

ಇದನ್ನೂ ಓದಿ:

ರಾಜಮೌಳಿ ವಿರುದ್ಧ ಸಿಡಿದೆದ್ದ ಶ್ವಾನಪ್ರಿಯರು; ಅಸಲಿಗೆ ಇಲ್ಲಿ ತಪ್ಪು ಯಾರದ್ದು?

‘ಅವರನ್ನು ನೆಲದಲ್ಲಿ ಕೂರಿಸಿದ್ರು, ಬೀದಿ ನಾಯಿ ತೋರಿಸಿದ್ರು’; ನಿರ್ದೇಶಕ ರಾಜಮೌಳಿ ತೀವ್ರ ಬೇಸರ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ