AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಸಹವಾಸ ಮಾಡಿದವರಿಗೆ ಸೋಲು ಖಚಿತ; ಟಾಲಿವುಡ್​ನಲ್ಲಿದೆ ದೊಡ್ಡ ಮೂಢನಂಬಿಕೆ

ಒಂದಲ್ಲ ಎರಡಲ್ಲ, ಅನೇಕ ಬಾರಿ ಈ ನಂಬಿಕೆ ನಿಜವಾಗಿದೆ. ಹಾಗಂತ ಒಂದು ಸಿನಿಮಾದ ಸೋಲನ್ನು ಸಂಬಂಧವೇ ಇಲ್ಲದ ರಾಜಮೌಳಿ ತಲೆಗೆ ಕಟ್ಟಿದರೆ ಅದಕ್ಕೆ ಮೂಢನಂಬಿಕೆ ಎನ್ನದೇ ಬೇರೆ ದಾರಿಯಿಲ್ಲ.

ರಾಜಮೌಳಿ ಸಹವಾಸ ಮಾಡಿದವರಿಗೆ ಸೋಲು ಖಚಿತ; ಟಾಲಿವುಡ್​ನಲ್ಲಿದೆ ದೊಡ್ಡ ಮೂಢನಂಬಿಕೆ
ರಾಜಮೌಳಿ ಸಹವಾಸ ಮಾಡಿದವರಿಗೆ ಸೋಲು ಖಚಿತ; ಟಾಲಿವುಡ್​ನಲ್ಲಿದೆ ದೊಡ್ಡ ಮೂಢನಂಬಿಕೆ
TV9 Web
| Edited By: |

Updated on: Jul 09, 2021 | 11:40 AM

Share

ನಿರ್ದೇಶಕ ರಾಜಮೌಳಿ ಅವರ ಹವಾ ಏನೆಂಬುದು ಎಲ್ಲರಿಗೂ ಗೊತ್ತು. ಭಾರತೀಯ ಚಿತ್ರರಂಗವೇ ನಿಬ್ಬೆರಗಾಗುವಂತಹ ಸೂಪರ್​ ಹಿಟ್​ ಸಿನಿಮಾಗಳನ್ನು ಅವರು ನೀಡಿದ್ದಾರೆ. ‘ಬಾಹುಬಲಿ’ ಮಾಡಿದ ಸಾಧನೆಯನ್ನು ಹೊಸದಾಗಿ ಹೇಳಬೇಕಾದ್ದಿಲ್ಲ. ಹಾಗಾಗಿ ಅವರ ಜೊತೆ ಕೆಲಸ ಮಾಡಬೇಕು ಎಂದು ಅನೇಕ ಕಲಾವಿದರು ತುದಿಗಾಲಿನಲ್ಲಿ ನಿಂತು ಕಾಯುತ್ತಾರೆ. ಆದರೆ ರಾಜಮೌಳಿ ಜೊತೆ ಸಿನಿಮಾ ಮಾಡಿ ಒಮ್ಮೆ ಗೆಲ್ಲುವ ಸ್ಟಾರ್​ಗಳು, ಮುಂದಿನ ಸಿನಿಮಾದಲ್ಲಿ ಬೇರೆ ನಿರ್ದೇಶಕರ ಜೊತೆ ಕೆಲಸ ಮಾಡಿದರೆ ಹೀನಾಯವಾಗಿ ಸೋಲುತ್ತಾರೆ ಎಂಬ ನಂಬಿಕೆ ಟಾಲಿವುಡ್​ನಲ್ಲಿದೆ. ಅದು ಪದೇಪದೇ ಸಾಬೀತಾಗಿದೆ ಕೂಡ.

2001ರಲ್ಲಿ ರಾಜಮೌಳಿ ನಿರ್ದೇಶಿಸಿದ ‘ಸ್ಟೂಡೆಂಟ್​ ನಂಬರ್​ 1’ ಚಿತ್ರಕ್ಕೆ ಜ್ಯೂ. ಎನ್​ಟಿಆರ್​ ಹೀರೋ ಆಗಿದ್ದರು. ಆ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​​ಗೆ ದೊಡ್ಡ ಗೆಲುವು ಸಿಕ್ಕಿತು. ಆದರೆ ನಂತರ ಅವರು ನಟಿಸಿದ ‘ಸುಬ್ಬ’ ಸಿನಿಮಾ ಫ್ಲಾಪ್​ ಆಯಿತು. ಬಳಿಕ ರಾಜಮೌಳಿ ಮತ್ತು ಜ್ಯೂ. ಎನ್​ಟಿಆರ್ ಜೊತೆಯಾಗಿ ‘ಸಿಂಹಾದ್ರಿ’ ಸಿನಿಮಾ ಮಾಡಿ ಯಶಸ್ಸು ಕಂಡರು. ಆ ಬಳಿಕ ಜ್ಯೂ. ಎನ್​ಟಿಆರ್ ನಟಿಸಿದ ‘ಆಂಧ್ರಾವಾಲ’ ಸೋತು ಸುಣ್ಣವಾಯಿತು.

ರಾಜಮೌಳಿ ಜೊತೆ ‘ಮಗಧೀರ’ ಚಿತ್ರ ಮಾಡಿ ಗೆದ್ದಿದ್ದ ರಾಮ್​ ಚರಣ್​ ಅವರು ನಂತರ ‘ಆರಂಜ್’​ ಸಿನಿಮಾದಲ್ಲಿ ಹೀನಾಯವಾಗಿ ಸೋಲು ಅನುಭವಿಸಿದರು. ಪ್ರಭಾಸ್​ ವಿಚಾರದಲ್ಲೂ ಈ ನಂಬಿಕೆ ನಿಜವಾಗಿದೆ. ರಾಜಮೌಳಿ ನಿರ್ದೇಶಿಸಿದ ‘ಚತ್ರಪತಿ’ ಸಿನಿಮಾದಲ್ಲಿ ಪ್ರಭಾಸ್​ಗೆ ಗೆಲುವು ಸಿಕ್ಕಿತ್ತು. ನಂತರ ಮಾಡಿದ ‘ಪೌರ್ಣಮಿ’ ಚಿತ್ರದಲ್ಲಿ ಅವರು ಸೋಲು ಕಂಡರು. ‘ಬಾಹುಬಲಿ’ ಬಳಿಕ ಪ್ರಭಾಸ್​ ನಟಿಸಿದ ‘ಸಾಹೋ’ ಚಿತ್ರ ಫ್ಲಾಪ್ ಆಯಿತು.

ಈ ಇತಿಹಾಸ ಗಮನಿಸಿದ ಬಳಿಕ ರಾಮ್​ ಚರಣ್​ ಮತ್ತು ಜ್ಯೂ ಎನ್​ಟಿಆರ್​ ಫ್ಯಾನ್ಸ್​ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈಗ ರಾಜಮೌಳಿ ಜೊತೆ ಈ ಸ್ಟಾರ್​ ನಟರಿಬ್ಬರು ‘ಆರ್​ಆರ್​ಆರ್​’ ಸಿನಿಮಾ ಮಾಡುತ್ತಿದ್ದಾರೆ. ಆ ಸಿನಿಮಾ ಖಂಡಿತವಾಗಿ ಗೆಲ್ಲಲಿದೆ ಎಂಬುದರಲ್ಲಿ ಯಾವುದೇ ಅನುಮಾನ ಬೇಡ. ಆದರೆ ಆ ಬಳಿಕ ರಾಮ್​ ಚರಣ್​ ನಟಿಸಲಿರುವ 15ನೇ ಸಿನಿಮಾ ಹಾಗೂ ಜ್ಯೂ. ಎನ್​ಟಿಆರ್​ ನಟಿಸಲಿರುವ 30ನೇ ಚಿತ್ರ ಫ್ಲಾಪ್​ ಆಗಲಿದೆ ಎಂಬ ಭಯ ಈಗಲೇ ಕಾಡಲು ಆರಂಭಿಸಿದೆ.

ಒಂದಲ್ಲ ಎರಡಲ್ಲ, ಅನೇಕ ಬಾರಿ ಈ ನಂಬಿಕೆ ನಿಜವಾಗಿದೆ. ಹಾಗಂತ ಒಂದು ಸಿನಿಮಾದ ಸೋಲನ್ನು ಸಂಬಂಧವೇ ಇಲ್ಲದ ರಾಜಮೌಳಿ ತಲೆಗೆ ಕಟ್ಟಿದರೆ ಅದಕ್ಕೆ ಮೂಢನಂಬಿಕೆ ಎನ್ನಲೇಬೇಕು.

ಇದನ್ನೂ ಓದಿ:

ರಾಜಮೌಳಿ ವಿರುದ್ಧ ಸಿಡಿದೆದ್ದ ಶ್ವಾನಪ್ರಿಯರು; ಅಸಲಿಗೆ ಇಲ್ಲಿ ತಪ್ಪು ಯಾರದ್ದು?

‘ಅವರನ್ನು ನೆಲದಲ್ಲಿ ಕೂರಿಸಿದ್ರು, ಬೀದಿ ನಾಯಿ ತೋರಿಸಿದ್ರು’; ನಿರ್ದೇಶಕ ರಾಜಮೌಳಿ ತೀವ್ರ ಬೇಸರ

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ