‘ಆರ್​ಆರ್​ಆರ್​’ ರೆಸ್ಟೋರೆಂಟ್ ಆರಂಭಿಸಲಿದ್ದಾರೆ ರಾಮ್​ ಚರಣ್​-ಜ್ಯೂ.ಎನ್​ಟಿಆರ್​? ಕೇಳಿಬಂತು ಹೊಸ ಗುಸುಗುಸು

‘ಆರ್​ಆರ್​ಆರ್’ ಹೆಸರಲ್ಲಿ ಹೋಟೆಲ್ ಉದ್ಯಮ ಆರಂಭಿಸುವಂತೆ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್​ಗೆ ಕೆಲ ಖ್ಯಾತ ನಿರ್ಮಾಪಕರು ಕಿವಿಮಾತು ಹೇಳಿದ್ದಾರೆ ಎನ್ನಲಾಗುತ್ತಿದೆ.

‘ಆರ್​ಆರ್​ಆರ್​’ ರೆಸ್ಟೋರೆಂಟ್ ಆರಂಭಿಸಲಿದ್ದಾರೆ ರಾಮ್​ ಚರಣ್​-ಜ್ಯೂ.ಎನ್​ಟಿಆರ್​? ಕೇಳಿಬಂತು ಹೊಸ ಗುಸುಗುಸು
ಜ್ಯೂ.ಎನ್​ಟಿಆರ್​-ರಾಮ್ ಚರಣ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jun 24, 2022 | 6:35 AM

‘ಆರ್​ಆರ್​ಆರ್​’ ಸಿನಿಮಾ (RRR Movie) ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡಿದ ಚಿತ್ರ. ಸಾವಿರಾರು ಕೋಟಿ ರೂಪಾಯಿ ಗಳಿಸಿದ ಈ ಸಿನಿಮಾದಿಂದ ಚಿತ್ರತಂಡಕ್ಕೆ ಒಳ್ಳೆಯ ಕಮಾಯಿ ಆಗಿದೆ. ‘ಆರ್​ಆರ್​ಆರ್​ 2’ ಬರುವ ಬಗ್ಗೆಯೂ ಕೆಲವು ಕಡೆಗಳಲ್ಲಿ ವದಂತಿಗಳು ಹುಟ್ಟಿಕೊಂಡಿದ್ದವು. ಆದರೆ, ಈ ಬಗ್ಗೆ ಯಾವುದೇ ಅಪ್​​ಡೇಟ್​ ಸಿಕ್ಕಿಲ್ಲ. ಈಗ ಟಾಲಿವುಡ್​ ಅಂಗಳದಲ್ಲಿ ಹೊಸ ಗುಸುಗುಸು ಕೇಳಿ ಬಂದಿದೆ. ‘ಆರ್​ಆರ್​ಆರ್​’ ಹೆಸರಲ್ಲಿ ರಾಮ್​ ಚರಣ್ (Ram Charan) ಹಾಗೂ ಜ್ಯೂ.ಎನ್​ಟಿಆರ್ ಹೊಸ ರೆಸ್ಟೋರೆಂಟ್ ಉದ್ಯಮ ಆರಂಭಿಸಿಲಿದ್ದಾರೆ ಎನ್ನಲಾಗುತ್ತಿದೆ.

ರಾಮ್​ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಫ್ಯಾನ್ಸ್ ಮಧ್ಯೆ ಎಷ್ಟೇ ವೈರತ್ವ ಬೆಳೆದಿರಬಹುದು. ಆದರೆ, ಇಬ್ಬರು ಹೀರೋಗಳ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ‘ಆರ್​ಆರ್​ಆರ್​’ ಸಂದರ್ಭದಲ್ಲಿ ಈ ಗೆಳೆತನ ಮತ್ತಷ್ಟು ಗಟ್ಟಿ ಆಗಿದೆ. ತೆರೆಮೇಲೆ ಇಬ್ಬರೂ ಸಖತ್ ಆಗಿ ಮಿಂಚಿದ್ದಾರೆ. ಹೀಗಿರುವಾಗಲೇ ಹೊಸ ವದಂತಿ ಎಲ್ಲೆಡೆ ಹರಿದಾಡುತ್ತಿದೆ.

‘ಆರ್​ಆರ್​ಆರ್’ ಹೆಸರಲ್ಲಿ ಹೋಟೆಲ್ ಉದ್ಯಮ ಆರಂಭಿಸುವಂತೆ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್​ಗೆ ಕೆಲ ಖ್ಯಾತ ನಿರ್ಮಾಪಕರು ಕಿವಿಮಾತು ಹೇಳಿದ್ದಾರೆ ಎನ್ನಲಾಗುತ್ತಿದೆ. ಜತೆಗೆ ರಾಜಮೌಳಿ ಅವರನ್ನು ಪಾರ್ಟ್ನರ್ ಆಗಿ ಸೇರಿಸಿಕೊಳ್ಳುವಂತೆ ಸೂಚಿಸಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ
Image
RRR OTT Release: ‘ಆರ್​ಆರ್​ಆರ್​’ ಚಿತ್ರ ಒಟಿಟಿಯಲ್ಲಿ ಪ್ರಸಾರ ಆಗೋದು ಯಾವಾಗ? ಆ ದಿನಾಂಕಕ್ಕಾಗಿ ಕಾದಿರುವ ಫ್ಯಾನ್ಸ್​
Image
RRR 2: ಆರ್​ಆರ್​ಆರ್​ ಸೀಕ್ವೆಲ್​ ಮಾಡಲು ಉತ್ಸಾಹ ತೋರಿದ ರಾಜಮೌಳಿ, ರಾಮ್​ ಚರಣ್​, ಜ್ಯೂ. ಎನ್​ಟಿಆರ್​
Image
‘RRR’ ಯಶಸ್ಸು; ಚಿತ್ರತಂಡಕ್ಕೆ 18 ಲಕ್ಷ ಮೌಲ್ಯದ ಚಿನ್ನದ ನಾಣ್ಯ ಉಡುಗೊರೆ ನೀಡಿದ ನಟ ರಾಮ್ ಚರಣ್
Image
RRR Twitter Review: ನಿದ್ದೆ ಬಿಟ್ಟು ‘ಆರ್​ಆರ್​ಆರ್​’ ಸಿನಿಮಾ ನೋಡಿ ಬಂದ ಪ್ರೇಕ್ಷಕರು ಏನಂದ್ರು?

ಇಬ್ಬರೂ ಹೀರೋಗಳು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ, ಸದ್ಯಕ್ಕಂತೂ ಈ ಆಲೋಚನೆಗೆ ಅವರು ಸೊಪ್ಪು ಹಾಕುವುದು ಅನುಮಾನವೇ. ಇನ್ನು, ‘ಆರ್​ಆರ್​ಆರ್’ ಟೈಟಲ್ ಹಕ್ಕು ನಿರ್ಮಾಪಕ ಡಿವಿವಿ ದಾನಯ್ಯ ಅವರ ಬಳಿ ಇದೆ. ಈ ಹೆಸರಲ್ಲಿ ಉದ್ಯಮ ಆರಂಭಿಸಬೇಕಾದರೆ ಅವರ ಪಾರ್ಟ್ನರ್​ಶಿಪ್ ಕೂಡ ಇರಬೇಕಾಗುತ್ತದೆ ಅಥವಾ ಅವರಿಂದ ಟೈಟಲ್​ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ.

ಸದ್ಯ, ಟಾಲಿವುಡ್ ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿ ಜೋರಾಗಿ ಹರಿದಾಡುತ್ತಿದೆ. ಆದರೆ, ಯಾರೊಬ್ಬರೂ ಈ ಕುರಿತು ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿಲ್ಲ. ಒಂದೊಮ್ಮೆ ಈ ಹೆಸರಲ್ಲಿ ಸ್ಟಾರ್​ಗಳು ರೆಸ್ಟೋರೆಂಟ್ ಆರಂಭಿಸಿದರೆ ಒಳ್ಳೆಯ ಬಿಸ್ನೆಸ್ ಆಗುವುದು ಖಚಿತ ಎನ್ನಲಾಗುತ್ತಿದೆ.

ಸಾವಿರಾರು ಕೋಟಿ ಕಲೆಕ್ಷನ್ ಮಾಡಿರುವ ‘ಆರ್​ಆರ್​ಆರ್’ ಸಿನಿಮಾ ಸದ್ಯ, ಒಟಿಟಿಯಲ್ಲಿ ಧೂಳೆಬ್ಬಿಸುತ್ತಿದೆ. ಮೇ ತಿಂಗಳಲ್ಲಿ ಸಿನಿಮಾ ಒಟಿಟಿಗೆ ಬಂತು. ನಿರ್ದೇಶಕ ರಾಜಮೌಳಿ ಮುಂದಿನ ಸಿನಿಮಾ ಯಾವುದು ಎಂಬುದು ಇನ್ನಷ್ಟೇ ಘೋಷಣೆ ಆಗಬೇಕಿದೆ.

ಇದನ್ನೂ ಓದಿ: RRR ಯಶಸ್ಸು; ಚಿತ್ರತಂಡಕ್ಕೆ 18 ಲಕ್ಷ ಮೌಲ್ಯದ ಚಿನ್ನದ ನಾಣ್ಯ ಉಡುಗೊರೆ ನೀಡಿದ ನಟ ರಾಮ್ ಚರಣ್

ಅಬ್ಬಬ್ಬಾ ಸೆಟ್​ನಲ್ಲೇ ಶೂಟ್ ಆದ ದೃಶ್ಯಕ್ಕೆ ಇಷ್ಟೊಂದು ಗ್ರಾಫಿಕ್ಸ್​; ಇಲ್ಲಿದೆ ‘ಆರ್​ಆರ್​ಆರ್’ ಸಿನಿಮಾದ ಅಸಲಿ ವಿಡಿಯೋ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ