AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್​’ ರೆಸ್ಟೋರೆಂಟ್ ಆರಂಭಿಸಲಿದ್ದಾರೆ ರಾಮ್​ ಚರಣ್​-ಜ್ಯೂ.ಎನ್​ಟಿಆರ್​? ಕೇಳಿಬಂತು ಹೊಸ ಗುಸುಗುಸು

‘ಆರ್​ಆರ್​ಆರ್’ ಹೆಸರಲ್ಲಿ ಹೋಟೆಲ್ ಉದ್ಯಮ ಆರಂಭಿಸುವಂತೆ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್​ಗೆ ಕೆಲ ಖ್ಯಾತ ನಿರ್ಮಾಪಕರು ಕಿವಿಮಾತು ಹೇಳಿದ್ದಾರೆ ಎನ್ನಲಾಗುತ್ತಿದೆ.

‘ಆರ್​ಆರ್​ಆರ್​’ ರೆಸ್ಟೋರೆಂಟ್ ಆರಂಭಿಸಲಿದ್ದಾರೆ ರಾಮ್​ ಚರಣ್​-ಜ್ಯೂ.ಎನ್​ಟಿಆರ್​? ಕೇಳಿಬಂತು ಹೊಸ ಗುಸುಗುಸು
ಜ್ಯೂ.ಎನ್​ಟಿಆರ್​-ರಾಮ್ ಚರಣ್
TV9 Web
| Edited By: |

Updated on: Jun 24, 2022 | 6:35 AM

Share

‘ಆರ್​ಆರ್​ಆರ್​’ ಸಿನಿಮಾ (RRR Movie) ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡಿದ ಚಿತ್ರ. ಸಾವಿರಾರು ಕೋಟಿ ರೂಪಾಯಿ ಗಳಿಸಿದ ಈ ಸಿನಿಮಾದಿಂದ ಚಿತ್ರತಂಡಕ್ಕೆ ಒಳ್ಳೆಯ ಕಮಾಯಿ ಆಗಿದೆ. ‘ಆರ್​ಆರ್​ಆರ್​ 2’ ಬರುವ ಬಗ್ಗೆಯೂ ಕೆಲವು ಕಡೆಗಳಲ್ಲಿ ವದಂತಿಗಳು ಹುಟ್ಟಿಕೊಂಡಿದ್ದವು. ಆದರೆ, ಈ ಬಗ್ಗೆ ಯಾವುದೇ ಅಪ್​​ಡೇಟ್​ ಸಿಕ್ಕಿಲ್ಲ. ಈಗ ಟಾಲಿವುಡ್​ ಅಂಗಳದಲ್ಲಿ ಹೊಸ ಗುಸುಗುಸು ಕೇಳಿ ಬಂದಿದೆ. ‘ಆರ್​ಆರ್​ಆರ್​’ ಹೆಸರಲ್ಲಿ ರಾಮ್​ ಚರಣ್ (Ram Charan) ಹಾಗೂ ಜ್ಯೂ.ಎನ್​ಟಿಆರ್ ಹೊಸ ರೆಸ್ಟೋರೆಂಟ್ ಉದ್ಯಮ ಆರಂಭಿಸಿಲಿದ್ದಾರೆ ಎನ್ನಲಾಗುತ್ತಿದೆ.

ರಾಮ್​ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಫ್ಯಾನ್ಸ್ ಮಧ್ಯೆ ಎಷ್ಟೇ ವೈರತ್ವ ಬೆಳೆದಿರಬಹುದು. ಆದರೆ, ಇಬ್ಬರು ಹೀರೋಗಳ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ‘ಆರ್​ಆರ್​ಆರ್​’ ಸಂದರ್ಭದಲ್ಲಿ ಈ ಗೆಳೆತನ ಮತ್ತಷ್ಟು ಗಟ್ಟಿ ಆಗಿದೆ. ತೆರೆಮೇಲೆ ಇಬ್ಬರೂ ಸಖತ್ ಆಗಿ ಮಿಂಚಿದ್ದಾರೆ. ಹೀಗಿರುವಾಗಲೇ ಹೊಸ ವದಂತಿ ಎಲ್ಲೆಡೆ ಹರಿದಾಡುತ್ತಿದೆ.

‘ಆರ್​ಆರ್​ಆರ್’ ಹೆಸರಲ್ಲಿ ಹೋಟೆಲ್ ಉದ್ಯಮ ಆರಂಭಿಸುವಂತೆ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್​ಗೆ ಕೆಲ ಖ್ಯಾತ ನಿರ್ಮಾಪಕರು ಕಿವಿಮಾತು ಹೇಳಿದ್ದಾರೆ ಎನ್ನಲಾಗುತ್ತಿದೆ. ಜತೆಗೆ ರಾಜಮೌಳಿ ಅವರನ್ನು ಪಾರ್ಟ್ನರ್ ಆಗಿ ಸೇರಿಸಿಕೊಳ್ಳುವಂತೆ ಸೂಚಿಸಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ
Image
RRR OTT Release: ‘ಆರ್​ಆರ್​ಆರ್​’ ಚಿತ್ರ ಒಟಿಟಿಯಲ್ಲಿ ಪ್ರಸಾರ ಆಗೋದು ಯಾವಾಗ? ಆ ದಿನಾಂಕಕ್ಕಾಗಿ ಕಾದಿರುವ ಫ್ಯಾನ್ಸ್​
Image
RRR 2: ಆರ್​ಆರ್​ಆರ್​ ಸೀಕ್ವೆಲ್​ ಮಾಡಲು ಉತ್ಸಾಹ ತೋರಿದ ರಾಜಮೌಳಿ, ರಾಮ್​ ಚರಣ್​, ಜ್ಯೂ. ಎನ್​ಟಿಆರ್​
Image
‘RRR’ ಯಶಸ್ಸು; ಚಿತ್ರತಂಡಕ್ಕೆ 18 ಲಕ್ಷ ಮೌಲ್ಯದ ಚಿನ್ನದ ನಾಣ್ಯ ಉಡುಗೊರೆ ನೀಡಿದ ನಟ ರಾಮ್ ಚರಣ್
Image
RRR Twitter Review: ನಿದ್ದೆ ಬಿಟ್ಟು ‘ಆರ್​ಆರ್​ಆರ್​’ ಸಿನಿಮಾ ನೋಡಿ ಬಂದ ಪ್ರೇಕ್ಷಕರು ಏನಂದ್ರು?

ಇಬ್ಬರೂ ಹೀರೋಗಳು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ, ಸದ್ಯಕ್ಕಂತೂ ಈ ಆಲೋಚನೆಗೆ ಅವರು ಸೊಪ್ಪು ಹಾಕುವುದು ಅನುಮಾನವೇ. ಇನ್ನು, ‘ಆರ್​ಆರ್​ಆರ್’ ಟೈಟಲ್ ಹಕ್ಕು ನಿರ್ಮಾಪಕ ಡಿವಿವಿ ದಾನಯ್ಯ ಅವರ ಬಳಿ ಇದೆ. ಈ ಹೆಸರಲ್ಲಿ ಉದ್ಯಮ ಆರಂಭಿಸಬೇಕಾದರೆ ಅವರ ಪಾರ್ಟ್ನರ್​ಶಿಪ್ ಕೂಡ ಇರಬೇಕಾಗುತ್ತದೆ ಅಥವಾ ಅವರಿಂದ ಟೈಟಲ್​ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ.

ಸದ್ಯ, ಟಾಲಿವುಡ್ ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿ ಜೋರಾಗಿ ಹರಿದಾಡುತ್ತಿದೆ. ಆದರೆ, ಯಾರೊಬ್ಬರೂ ಈ ಕುರಿತು ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿಲ್ಲ. ಒಂದೊಮ್ಮೆ ಈ ಹೆಸರಲ್ಲಿ ಸ್ಟಾರ್​ಗಳು ರೆಸ್ಟೋರೆಂಟ್ ಆರಂಭಿಸಿದರೆ ಒಳ್ಳೆಯ ಬಿಸ್ನೆಸ್ ಆಗುವುದು ಖಚಿತ ಎನ್ನಲಾಗುತ್ತಿದೆ.

ಸಾವಿರಾರು ಕೋಟಿ ಕಲೆಕ್ಷನ್ ಮಾಡಿರುವ ‘ಆರ್​ಆರ್​ಆರ್’ ಸಿನಿಮಾ ಸದ್ಯ, ಒಟಿಟಿಯಲ್ಲಿ ಧೂಳೆಬ್ಬಿಸುತ್ತಿದೆ. ಮೇ ತಿಂಗಳಲ್ಲಿ ಸಿನಿಮಾ ಒಟಿಟಿಗೆ ಬಂತು. ನಿರ್ದೇಶಕ ರಾಜಮೌಳಿ ಮುಂದಿನ ಸಿನಿಮಾ ಯಾವುದು ಎಂಬುದು ಇನ್ನಷ್ಟೇ ಘೋಷಣೆ ಆಗಬೇಕಿದೆ.

ಇದನ್ನೂ ಓದಿ: RRR ಯಶಸ್ಸು; ಚಿತ್ರತಂಡಕ್ಕೆ 18 ಲಕ್ಷ ಮೌಲ್ಯದ ಚಿನ್ನದ ನಾಣ್ಯ ಉಡುಗೊರೆ ನೀಡಿದ ನಟ ರಾಮ್ ಚರಣ್

ಅಬ್ಬಬ್ಬಾ ಸೆಟ್​ನಲ್ಲೇ ಶೂಟ್ ಆದ ದೃಶ್ಯಕ್ಕೆ ಇಷ್ಟೊಂದು ಗ್ರಾಫಿಕ್ಸ್​; ಇಲ್ಲಿದೆ ‘ಆರ್​ಆರ್​ಆರ್’ ಸಿನಿಮಾದ ಅಸಲಿ ವಿಡಿಯೋ

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್