AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಕ್ಯೂರಿಟಿ ಒದ್ದು ಓಡಿಸ್ತಾರೆ: ಫ್ಯಾನ್ಸ್ ಮೇಲೆ ಗರಂ ಆದ ಜೂನಿಯರ್ ಎನ್​ಟಿಆರ್

ಲಂಡನ್​ನಲ್ಲಿ ಅಭಿಮಾನಿಗಳು ನಡೆದುಕೊಂಡ ರೀತಿಗೆ ನಟ ಜೂನಿಯರ್ ಎನ್​ಟಿಆರ್​ ಅವರು ಗರಂ ಆಗಿದ್ದಾರೆ. ಮಿತಿ ಮೀರಿ ನಡೆದುಕೊಂಡ ಅಭಿಮಾನಿಗಳ ಮೇಲೆ ಅವರು ಕೂಡಾಗಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಅಭಿಮಾನಿಗಳು ಹೀಗೆ ಮಾಡಿದ್ದರಿಂದ ವಿದೇಶದಲ್ಲಿ ಮುಜುಗರ ಅನುಭವಿಸುವಂತಾಗಿದೆ. ಆ ಬಗ್ಗೆ ಇಲ್ಲಿದೆ ವಿವರ..

ಸೆಕ್ಯೂರಿಟಿ ಒದ್ದು ಓಡಿಸ್ತಾರೆ: ಫ್ಯಾನ್ಸ್ ಮೇಲೆ ಗರಂ ಆದ ಜೂನಿಯರ್ ಎನ್​ಟಿಆರ್
Jr NTR
ಮದನ್​ ಕುಮಾರ್​
|

Updated on: May 12, 2025 | 5:21 PM

Share

ಟಾಲಿವುಡ್​ ನಟ ಜೂನಿಯರ್ ಎನ್​ಟಿಆರ್ (Jr NTR) ಅವರ ಯಾವಾಗಲೂ ಕೂಲ್ ಆಗಿ ಇರುತ್ತಾರೆ. ಆದರೆ ಅವರು ತಾಳ್ಮೆ ಕಳೆದುಕೊಳ್ಳುವಂತಹ ಘಟನೆ ಲಂಡನ್​ನಲ್ಲಿ ನಡೆದಿದೆ. ಅಭಿಮಾನಿಗಳು ಅತಿ ಉತ್ಸಾಹದಲ್ಲಿ ಗದ್ದಲ ಮಾಡಿದಾಗ ಜೂನಿಯರ್ ಎನ್​ಟಿಆರ್​ ಕೋಪಗೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಇತ್ತೀಚೆಗೆ ರಾಮ್ ಚರಣ್ ಅವರ ಅಭಿಮಾನಿಗಳು ಕೂಡ ಲಂಡನ್​ನಲ್ಲಿ ಮಿತಿ ಮೀರಿ ನಡೆದುಕೊಂಡಿದ್ದರು. ಈಗ ಜೂನಿಯರ್ ಎನ್​ಟಿಆರ್ ಅವರ ಫ್ಯಾನ್ಸ್ (Jr NTR Fans) ಕೂಡ ಕಿರಿಕಿರಿ ಉಂಟುಮಾಡಿದ್ದಾರೆ. ಇಂಥ ಘಟನೆಗಳಿಂದ ವಿದೇಶದಲ್ಲಿ ಭಾರತದ ನಟರು ಮುಜುಗರಕ್ಕೆ ಒಳಗಾಗುವಂತಾಗಿದೆ.

ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜೂನಿಯರ್ ಎನ್​ಟಿಆರ್​ ಅವರು ಲಂಡನ್​​ಗೆ ತೆರಳಿದ್ದಾರೆ. ಅಲ್ಲಿ ‘ಆರ್​ಆರ್​ಆರ್​’ ಸಿನಿಮಾದ ವಿಶೇಷ ಪ್ರದರ್ಶನ ಮಾಡಲಾಗಿದೆ. ಲಂಡನ್​ನ ರಾಯಲ್ ಆಲ್ಬರ್ಟ್​ ಹಾಲ್​ನಲ್ಲಿ ಪ್ರದರ್ಶನ ನಡೆದಿದೆ. ಈ ಶೋಗೆ ಆಗಮಿಸಿದ ಜೂನಿಯರ್ ಎನ್​ಟಿಆರ್ ಅವರನ್ನು ನೋಡಿ ಅಭಿಮಾನಿಗಳು ಕಿರುಚಾಡಿದ್ದಾರೆ. ಇದರಿಂದ ಕಾರ್ಯಕ್ರಮಕ್ಕೆ ತೊಂದರೆ ಆಗಿದೆ.

ಇದನ್ನೂ ಓದಿ
Image
ರಾಮ್ ಚರಣ್​ಗೆ ಪತ್ನಿ ಉಪಾಸನಾ ಕೊಡುವ ದುಬಾರಿ ಗಿಫ್ಟ್​ಗಳೇನು?
Image
ಗೆದ್ದಿದ್ದು ಕಡಿಮೆ ಸಿನಿಮಾ ಆದರೂ ರಾಮ್ ಚರಣ್ ಆಸ್ತಿ 1,300 ಕೋಟಿ ರೂಪಾಯಿ
Image
ರಾಮ್ ಚರಣ್ ಮನೆಯಲ್ಲಿ ಇದೆ ಬರೋಬ್ಬರಿ 15 ಕುದುರೆ; ಕಾರಣ ಏನು?
Image
ಪೌರಾಣಿಕ ಪಾತ್ರದಲ್ಲಿ ಮಿಂಚಲಿದ್ದಾರೆ ರಾಮ್ ಚರಣ್

ಜೂನಿಯರ್​ ಎನ್​ಟಿಆರ್​ ಅವರು ನಡೆದು ಬರುವಾಗ ಫೋಟೋ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಇದರಿಂದಾಗಿ ಅಲ್ಲಿ ಗದ್ದಲ ಸೃಷ್ಟಿ ಆಯಿತು. ಇಂಥ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗುವ ಸಂಭವ ಕೂಡ ಇರುತ್ತದೆ. ಹಾಗಾಗಿ ಜೂನಿಯರ್ ಎನ್​ಟಿಆರ್​ ಅವರು ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದರು. ಆದರೂ ಅವರ ಮಾತನ್ನು ಕೇಳುವ ಸ್ಥಿತಿಯಲ್ಲಿ ಅಭಿಮಾನಿಗಳು ಇರಲಿಲ್ಲ.

ಅಭಿಮಾನಿಗಳ ವರ್ತನೆಯಿಂದ ಜೂನಿಯರ್ ಎನ್​ಟಿಆರ್ ಅವರು ಕೋಪಗೊಂಡರು. ‘ನಾನು ನಿಮಗೆ ಸೆಲ್ಫಿ ನೀಡುತ್ತೇನೆ. ಆದರೆ ನೀವು ಕಾಯಬೇಕು. ನೀವು ಈ ರೀತಿ ನಡೆದುಕೊಂಡರೆ ಸೆಕ್ಯೂರಿಟಿಯವರು ನಿಮ್ಮನ್ನು ಒದ್ದು ಓಡಿಸುತ್ತಾರೆ’ ಎಂದು ಜೂನಿಯರ್ ಎನ್​ಟಿಆರ್​ ಹೇಳಿದರು. ಹಾಗಿದ್ದರೂ ಫ್ಯಾನ್ಸ್ ವರ್ತನೆಯಲ್ಲಿ ಬದಲಾವಣೆ ಆಗಲಿಲ್ಲ. ಅದರಿಂದ ಕೋಪಗೊಂಡ ಜೂನಿಯರ್​ ಎನ್​ಟಿಆರ್ ಅವರು ಅಲ್ಲಿಂದ ಹೊರಟುಹೋದರು.

ಇದನ್ನೂ ಓದಿ: ಜೂ ಎನ್​ಟಿಆರ್ ಧರ್ಮದ ಬಗ್ಗೆ ಚರ್ಚೆ, ಮೊಹಮ್ಮದ್ ಶರೀಫ್ ಖಾನ್ ಯಾರು?

ರಾಮ್ ಚರಣ್ ಅವರು ಲಂಡನ್​ನ ಮೇಡಂ ಟುಸಾಡ್ಸ್​ ಮ್ಯೂಸಿಯಂಗೆ ತೆರಳಿದ್ದಾಗಲೂ ಇದೇ ರೀತಿ ಆಗಿತ್ತು. ರಾಮ್ ಚರಣ್ ಅವರನ್ನು ನೋಡಲು ಬಂದಿದ್ದ ಅಭಿಮಾನಿಗಳು ಜೋರಾಗಿ ಕಿರುಚಾಡಿದರು. ಇದರಿಂದ ಮೂಸಿಯಂ ಸಿಬ್ಬಂದಿಗೆ ಕಿರಿಕಿರಿ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!