AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಕ್ಯೂರಿಟಿ ಒದ್ದು ಓಡಿಸ್ತಾರೆ: ಫ್ಯಾನ್ಸ್ ಮೇಲೆ ಗರಂ ಆದ ಜೂನಿಯರ್ ಎನ್​ಟಿಆರ್

ಲಂಡನ್​ನಲ್ಲಿ ಅಭಿಮಾನಿಗಳು ನಡೆದುಕೊಂಡ ರೀತಿಗೆ ನಟ ಜೂನಿಯರ್ ಎನ್​ಟಿಆರ್​ ಅವರು ಗರಂ ಆಗಿದ್ದಾರೆ. ಮಿತಿ ಮೀರಿ ನಡೆದುಕೊಂಡ ಅಭಿಮಾನಿಗಳ ಮೇಲೆ ಅವರು ಕೂಡಾಗಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಅಭಿಮಾನಿಗಳು ಹೀಗೆ ಮಾಡಿದ್ದರಿಂದ ವಿದೇಶದಲ್ಲಿ ಮುಜುಗರ ಅನುಭವಿಸುವಂತಾಗಿದೆ. ಆ ಬಗ್ಗೆ ಇಲ್ಲಿದೆ ವಿವರ..

ಸೆಕ್ಯೂರಿಟಿ ಒದ್ದು ಓಡಿಸ್ತಾರೆ: ಫ್ಯಾನ್ಸ್ ಮೇಲೆ ಗರಂ ಆದ ಜೂನಿಯರ್ ಎನ್​ಟಿಆರ್
Jr NTR
ಮದನ್​ ಕುಮಾರ್​
|

Updated on: May 12, 2025 | 5:21 PM

Share

ಟಾಲಿವುಡ್​ ನಟ ಜೂನಿಯರ್ ಎನ್​ಟಿಆರ್ (Jr NTR) ಅವರ ಯಾವಾಗಲೂ ಕೂಲ್ ಆಗಿ ಇರುತ್ತಾರೆ. ಆದರೆ ಅವರು ತಾಳ್ಮೆ ಕಳೆದುಕೊಳ್ಳುವಂತಹ ಘಟನೆ ಲಂಡನ್​ನಲ್ಲಿ ನಡೆದಿದೆ. ಅಭಿಮಾನಿಗಳು ಅತಿ ಉತ್ಸಾಹದಲ್ಲಿ ಗದ್ದಲ ಮಾಡಿದಾಗ ಜೂನಿಯರ್ ಎನ್​ಟಿಆರ್​ ಕೋಪಗೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಇತ್ತೀಚೆಗೆ ರಾಮ್ ಚರಣ್ ಅವರ ಅಭಿಮಾನಿಗಳು ಕೂಡ ಲಂಡನ್​ನಲ್ಲಿ ಮಿತಿ ಮೀರಿ ನಡೆದುಕೊಂಡಿದ್ದರು. ಈಗ ಜೂನಿಯರ್ ಎನ್​ಟಿಆರ್ ಅವರ ಫ್ಯಾನ್ಸ್ (Jr NTR Fans) ಕೂಡ ಕಿರಿಕಿರಿ ಉಂಟುಮಾಡಿದ್ದಾರೆ. ಇಂಥ ಘಟನೆಗಳಿಂದ ವಿದೇಶದಲ್ಲಿ ಭಾರತದ ನಟರು ಮುಜುಗರಕ್ಕೆ ಒಳಗಾಗುವಂತಾಗಿದೆ.

ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜೂನಿಯರ್ ಎನ್​ಟಿಆರ್​ ಅವರು ಲಂಡನ್​​ಗೆ ತೆರಳಿದ್ದಾರೆ. ಅಲ್ಲಿ ‘ಆರ್​ಆರ್​ಆರ್​’ ಸಿನಿಮಾದ ವಿಶೇಷ ಪ್ರದರ್ಶನ ಮಾಡಲಾಗಿದೆ. ಲಂಡನ್​ನ ರಾಯಲ್ ಆಲ್ಬರ್ಟ್​ ಹಾಲ್​ನಲ್ಲಿ ಪ್ರದರ್ಶನ ನಡೆದಿದೆ. ಈ ಶೋಗೆ ಆಗಮಿಸಿದ ಜೂನಿಯರ್ ಎನ್​ಟಿಆರ್ ಅವರನ್ನು ನೋಡಿ ಅಭಿಮಾನಿಗಳು ಕಿರುಚಾಡಿದ್ದಾರೆ. ಇದರಿಂದ ಕಾರ್ಯಕ್ರಮಕ್ಕೆ ತೊಂದರೆ ಆಗಿದೆ.

ಇದನ್ನೂ ಓದಿ
Image
ರಾಮ್ ಚರಣ್​ಗೆ ಪತ್ನಿ ಉಪಾಸನಾ ಕೊಡುವ ದುಬಾರಿ ಗಿಫ್ಟ್​ಗಳೇನು?
Image
ಗೆದ್ದಿದ್ದು ಕಡಿಮೆ ಸಿನಿಮಾ ಆದರೂ ರಾಮ್ ಚರಣ್ ಆಸ್ತಿ 1,300 ಕೋಟಿ ರೂಪಾಯಿ
Image
ರಾಮ್ ಚರಣ್ ಮನೆಯಲ್ಲಿ ಇದೆ ಬರೋಬ್ಬರಿ 15 ಕುದುರೆ; ಕಾರಣ ಏನು?
Image
ಪೌರಾಣಿಕ ಪಾತ್ರದಲ್ಲಿ ಮಿಂಚಲಿದ್ದಾರೆ ರಾಮ್ ಚರಣ್

ಜೂನಿಯರ್​ ಎನ್​ಟಿಆರ್​ ಅವರು ನಡೆದು ಬರುವಾಗ ಫೋಟೋ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಇದರಿಂದಾಗಿ ಅಲ್ಲಿ ಗದ್ದಲ ಸೃಷ್ಟಿ ಆಯಿತು. ಇಂಥ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗುವ ಸಂಭವ ಕೂಡ ಇರುತ್ತದೆ. ಹಾಗಾಗಿ ಜೂನಿಯರ್ ಎನ್​ಟಿಆರ್​ ಅವರು ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದರು. ಆದರೂ ಅವರ ಮಾತನ್ನು ಕೇಳುವ ಸ್ಥಿತಿಯಲ್ಲಿ ಅಭಿಮಾನಿಗಳು ಇರಲಿಲ್ಲ.

ಅಭಿಮಾನಿಗಳ ವರ್ತನೆಯಿಂದ ಜೂನಿಯರ್ ಎನ್​ಟಿಆರ್ ಅವರು ಕೋಪಗೊಂಡರು. ‘ನಾನು ನಿಮಗೆ ಸೆಲ್ಫಿ ನೀಡುತ್ತೇನೆ. ಆದರೆ ನೀವು ಕಾಯಬೇಕು. ನೀವು ಈ ರೀತಿ ನಡೆದುಕೊಂಡರೆ ಸೆಕ್ಯೂರಿಟಿಯವರು ನಿಮ್ಮನ್ನು ಒದ್ದು ಓಡಿಸುತ್ತಾರೆ’ ಎಂದು ಜೂನಿಯರ್ ಎನ್​ಟಿಆರ್​ ಹೇಳಿದರು. ಹಾಗಿದ್ದರೂ ಫ್ಯಾನ್ಸ್ ವರ್ತನೆಯಲ್ಲಿ ಬದಲಾವಣೆ ಆಗಲಿಲ್ಲ. ಅದರಿಂದ ಕೋಪಗೊಂಡ ಜೂನಿಯರ್​ ಎನ್​ಟಿಆರ್ ಅವರು ಅಲ್ಲಿಂದ ಹೊರಟುಹೋದರು.

ಇದನ್ನೂ ಓದಿ: ಜೂ ಎನ್​ಟಿಆರ್ ಧರ್ಮದ ಬಗ್ಗೆ ಚರ್ಚೆ, ಮೊಹಮ್ಮದ್ ಶರೀಫ್ ಖಾನ್ ಯಾರು?

ರಾಮ್ ಚರಣ್ ಅವರು ಲಂಡನ್​ನ ಮೇಡಂ ಟುಸಾಡ್ಸ್​ ಮ್ಯೂಸಿಯಂಗೆ ತೆರಳಿದ್ದಾಗಲೂ ಇದೇ ರೀತಿ ಆಗಿತ್ತು. ರಾಮ್ ಚರಣ್ ಅವರನ್ನು ನೋಡಲು ಬಂದಿದ್ದ ಅಭಿಮಾನಿಗಳು ಜೋರಾಗಿ ಕಿರುಚಾಡಿದರು. ಇದರಿಂದ ಮೂಸಿಯಂ ಸಿಬ್ಬಂದಿಗೆ ಕಿರಿಕಿರಿ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ