‘ನಿಮಗಿಂತ ನನಗೆ ಹೆಚ್ಚು ನೋವಾಗಿದೆ’; ‘ದೇವರ’ ಈವೆಂಟ್ ಕ್ಯಾನ್ಸಲ್ ಬಗ್ಗೆ ಜೂ. ಎನ್​​ಟಿಆರ್ ವಿಷಾದ

‘ದೇವರ’ ಪ್ರೀ ರಿಲೀಸ್ ಇವೆಂಟ್​ನಲ್ಲಿ ಪ್ರತಿ ನಿಮಿಷವೂ ಜನ ದಟ್ಟಣೆ ಹೆಚ್ಚುತ್ತಲೇ ಹೋಯಿತು. ಕೆಲವರು ಅಲ್ಲಿದ್ದ ವಸ್ತುಗಳಿಗೆ ಹಾನಿ ಕೂಡ ಮಾಡಿದರು. ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ ಎಂಬುದನ್ನು ತಿಳಿದ ಬಳಿಕ ಕೆಲವು ಸೆಲೆಬ್ರಿಟಿಗಳು ಅಲ್ಲಿಂದ ಕಾಲ್ಕಿತ್ತರು.

‘ನಿಮಗಿಂತ ನನಗೆ ಹೆಚ್ಚು ನೋವಾಗಿದೆ’; ‘ದೇವರ’ ಈವೆಂಟ್ ಕ್ಯಾನ್ಸಲ್ ಬಗ್ಗೆ ಜೂ. ಎನ್​​ಟಿಆರ್ ವಿಷಾದ
ಜೂನಿಯರ್ ಎನ್​ಟಿಆರ್
Follow us
|

Updated on:Sep 23, 2024 | 11:41 AM

ಜೂನಿಯರ್​ ಎನ್​​ಟಿಆರ್ ಅವರ ‘ದೇವರ’ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ಸೆಪ್ಟೆಂಬರ್ 22ರಂದು ನಡೆಯಬೇಕಿತ್ತು. ಕೆಲವೇ ಸಾವಿರ ಜನರು ನಡೆಯುವ ಜಾಗದಲ್ಲಿ ದೊಡ್ಡ ಮಟ್ಟದಲ್ಲಿ ಜನರು ಸೇರಿದ್ದರಿಂದ ಅದನ್ನು ಕ್ಯಾನ್ಸಲ್ ಮಾಡಲಾಯಿತು. ಭಾರೀ ರಾದ್ದಾಂತ ನಡೆದಿದ್ದರಿಂದ ಬಂದ ಸೆಲೆಬ್ರಿಟಿಗಳು ತೊಂದರೆ ಅನುಭವಿಸಬೇಕಾಯಿತು. ಈ ಘಟನೆ ಬಗ್ಗೆ ಜೂನಿಯರ್ ಎನ್​ಟಿಆರ್ ಪ್ರತಿಕ್ರಿಯೆ ನೀಡಿದ್ದಾರೆ.

‘ದೇವರ ಈವೆಂಟ್ ಕ್ಯಾನ್ಸಲ್ ಆಗಿದೆ ಎಂದು ತಿಳಿದು ಬೇಸರ ಆಯಿತು. ಈ ಇವೆಂಟ್​ಗಾಗಿ ನಾನು ಕಾದಿದ್ದೆ. ನಾನು ನಿಮ್ಮೊಂದಿಗೆ ಸಮಯ ಕಳೆಯಲು ಮತ್ತು ದೇವರ ಬಗ್ಗೆ ಅನೇಕ ಆಸಕ್ತಿದಾಯಕ ವಿವರಗಳನ್ನು ಹಂಚಿಕೊಳ್ಳಲು ಕಾದಿದ್ದೆ. ಈ ಸಿನಿಮಾಗಾಗಿ ಹಾಕಿದ ಶ್ರಮದ ಬಗ್ಗೆ ತಿಳಿಸಲು ಕಾದಿದ್ದೆ. ಆದರೆ, ಭದ್ರತೆಯ ಕಾರಣದಿಂದ ಈ ಕಾರ್ಯಕ್ರಮ ನಡೆಯಲಿಲ್ಲ. ನಿಮಗಿಂತ ಹೆಚ್ಚು ನೋವು ನನಗೆ ಆಗಿದೆ. ಈ ಕಾರ್ಯಕ್ರಮ ಕ್ಯಾನ್ಸಲ್ ಮಾಡಿದ್ದಕ್ಕೆ ನಿರ್ಮಾಪಕರು ಹಾಗೂ ಸಂಘಟಕರನ್ನು ಬಯ್ಯೋದು ತಪ್ಪು’ ಎಂದಿದ್ದಾರೆ ಅವರು.

‘ದೇವರ’ ಈವೆಂಟ್​ಗೆ ಫ್ಯಾನ್ಸ್ ಕಾದಿದ್ದರು. ಕಳೆದ ಆರು ವರ್ಷಗಳಲ್ಲಿ ಜೂನಿಯರ್ ಎನ್​ಟಿಆರ್ ಸೋಲೋ ಹೀರೋ ಆಗಿ ನಟಿಸಿದ ಸಿನಿಮಾ ಇದು. ಈ ಸಿನಿಮಾ ಮಾಡುವಾಗ ಅವರಿಗೆ ಸಾಕಷ್ಟು ತೊಂದರೆಗಳು ಎದುರಾಗಿದ್ದವು. ಈಗ ಸಿನಿಮಾ ರಿಲೀಸ್ ಆಗುತ್ತಿದೆ ಎನ್ನುವಾಗ ಈ ರೀತಿ ಆಗಿದೆ.

ಇದನ್ನೂ ಓದಿ: ಇನ್ನೊಂದು ಟ್ರೇಲರ್​ ಬಿಡುಗಡೆ ಮಾಡಿದ ‘ದೇವರ’ ಚಿತ್ರತಂಡ; ಜನರಿಗೆ ಇಷ್ಟ ಆಯ್ತಾ?

‘ದೇವರ’ ಚಿತ್ರದ ಪ್ರೀ-ರಿಲೀಸ್​ ಕಾರ್ಯಕ್ರಮವನ್ನು ಕೆಲವೇ ಸಾವಿರ ಜನರು ಸೇರಬಹುದಾದ ಸ್ಥಳದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದು ಚಿತ್ರತಂಡದವರು ಮಾಡಿದ ಮೊದಲ ತಪ್ಪು. ಇವೆಂಟ್​ ನಡೆಯಬೇಕಿದ್ದ ಸ್ಥಳದಲ್ಲಿ ಅಂದಾಜು 15ರಿಂದ 20 ಸಾವಿರ ಜನರು ನೆರೆದಿದ್ದರು. ಎಲ್ಲರಿಗೂ ಜಾಗ ಸಿಗದ ಕಾರಣ ವಿಐಪಿ ಅತಿಥಿಗಳಿಗೆ ಮೀಸಲಾಗಿದ್ದ ಕುರ್ಚಿಗಳತ್ತ ಕೆಲವರು ನುಗ್ಗಿದರು. ಇದರಿಂದ ತೊಂದರೆ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:33 am, Mon, 23 September 24

ಅಜ್ಜಿ ಜೊತೆ ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿದ ಆದ್ಯವೀರ ಒಡೆಯರ್‌
ಅಜ್ಜಿ ಜೊತೆ ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿದ ಆದ್ಯವೀರ ಒಡೆಯರ್‌
ನ್ಯೂಯಾರ್ಕ್​ನಲ್ಲಿ ಟೆಕ್ ಕಂಪನಿಗಳ ಸಿಇಒಗಳ ಜತೆ ಪ್ರಧಾನಿ ಮೋದಿ ಸಭೆ
ನ್ಯೂಯಾರ್ಕ್​ನಲ್ಲಿ ಟೆಕ್ ಕಂಪನಿಗಳ ಸಿಇಒಗಳ ಜತೆ ಪ್ರಧಾನಿ ಮೋದಿ ಸಭೆ
ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ
ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ