AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮಗಿಂತ ನನಗೆ ಹೆಚ್ಚು ನೋವಾಗಿದೆ’; ‘ದೇವರ’ ಈವೆಂಟ್ ಕ್ಯಾನ್ಸಲ್ ಬಗ್ಗೆ ಜೂ. ಎನ್​​ಟಿಆರ್ ವಿಷಾದ

‘ದೇವರ’ ಪ್ರೀ ರಿಲೀಸ್ ಇವೆಂಟ್​ನಲ್ಲಿ ಪ್ರತಿ ನಿಮಿಷವೂ ಜನ ದಟ್ಟಣೆ ಹೆಚ್ಚುತ್ತಲೇ ಹೋಯಿತು. ಕೆಲವರು ಅಲ್ಲಿದ್ದ ವಸ್ತುಗಳಿಗೆ ಹಾನಿ ಕೂಡ ಮಾಡಿದರು. ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ ಎಂಬುದನ್ನು ತಿಳಿದ ಬಳಿಕ ಕೆಲವು ಸೆಲೆಬ್ರಿಟಿಗಳು ಅಲ್ಲಿಂದ ಕಾಲ್ಕಿತ್ತರು.

‘ನಿಮಗಿಂತ ನನಗೆ ಹೆಚ್ಚು ನೋವಾಗಿದೆ’; ‘ದೇವರ’ ಈವೆಂಟ್ ಕ್ಯಾನ್ಸಲ್ ಬಗ್ಗೆ ಜೂ. ಎನ್​​ಟಿಆರ್ ವಿಷಾದ
ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on:Sep 23, 2024 | 11:41 AM

Share

ಜೂನಿಯರ್​ ಎನ್​​ಟಿಆರ್ ಅವರ ‘ದೇವರ’ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ಸೆಪ್ಟೆಂಬರ್ 22ರಂದು ನಡೆಯಬೇಕಿತ್ತು. ಕೆಲವೇ ಸಾವಿರ ಜನರು ನಡೆಯುವ ಜಾಗದಲ್ಲಿ ದೊಡ್ಡ ಮಟ್ಟದಲ್ಲಿ ಜನರು ಸೇರಿದ್ದರಿಂದ ಅದನ್ನು ಕ್ಯಾನ್ಸಲ್ ಮಾಡಲಾಯಿತು. ಭಾರೀ ರಾದ್ದಾಂತ ನಡೆದಿದ್ದರಿಂದ ಬಂದ ಸೆಲೆಬ್ರಿಟಿಗಳು ತೊಂದರೆ ಅನುಭವಿಸಬೇಕಾಯಿತು. ಈ ಘಟನೆ ಬಗ್ಗೆ ಜೂನಿಯರ್ ಎನ್​ಟಿಆರ್ ಪ್ರತಿಕ್ರಿಯೆ ನೀಡಿದ್ದಾರೆ.

‘ದೇವರ ಈವೆಂಟ್ ಕ್ಯಾನ್ಸಲ್ ಆಗಿದೆ ಎಂದು ತಿಳಿದು ಬೇಸರ ಆಯಿತು. ಈ ಇವೆಂಟ್​ಗಾಗಿ ನಾನು ಕಾದಿದ್ದೆ. ನಾನು ನಿಮ್ಮೊಂದಿಗೆ ಸಮಯ ಕಳೆಯಲು ಮತ್ತು ದೇವರ ಬಗ್ಗೆ ಅನೇಕ ಆಸಕ್ತಿದಾಯಕ ವಿವರಗಳನ್ನು ಹಂಚಿಕೊಳ್ಳಲು ಕಾದಿದ್ದೆ. ಈ ಸಿನಿಮಾಗಾಗಿ ಹಾಕಿದ ಶ್ರಮದ ಬಗ್ಗೆ ತಿಳಿಸಲು ಕಾದಿದ್ದೆ. ಆದರೆ, ಭದ್ರತೆಯ ಕಾರಣದಿಂದ ಈ ಕಾರ್ಯಕ್ರಮ ನಡೆಯಲಿಲ್ಲ. ನಿಮಗಿಂತ ಹೆಚ್ಚು ನೋವು ನನಗೆ ಆಗಿದೆ. ಈ ಕಾರ್ಯಕ್ರಮ ಕ್ಯಾನ್ಸಲ್ ಮಾಡಿದ್ದಕ್ಕೆ ನಿರ್ಮಾಪಕರು ಹಾಗೂ ಸಂಘಟಕರನ್ನು ಬಯ್ಯೋದು ತಪ್ಪು’ ಎಂದಿದ್ದಾರೆ ಅವರು.

‘ದೇವರ’ ಈವೆಂಟ್​ಗೆ ಫ್ಯಾನ್ಸ್ ಕಾದಿದ್ದರು. ಕಳೆದ ಆರು ವರ್ಷಗಳಲ್ಲಿ ಜೂನಿಯರ್ ಎನ್​ಟಿಆರ್ ಸೋಲೋ ಹೀರೋ ಆಗಿ ನಟಿಸಿದ ಸಿನಿಮಾ ಇದು. ಈ ಸಿನಿಮಾ ಮಾಡುವಾಗ ಅವರಿಗೆ ಸಾಕಷ್ಟು ತೊಂದರೆಗಳು ಎದುರಾಗಿದ್ದವು. ಈಗ ಸಿನಿಮಾ ರಿಲೀಸ್ ಆಗುತ್ತಿದೆ ಎನ್ನುವಾಗ ಈ ರೀತಿ ಆಗಿದೆ.

ಇದನ್ನೂ ಓದಿ: ಇನ್ನೊಂದು ಟ್ರೇಲರ್​ ಬಿಡುಗಡೆ ಮಾಡಿದ ‘ದೇವರ’ ಚಿತ್ರತಂಡ; ಜನರಿಗೆ ಇಷ್ಟ ಆಯ್ತಾ?

‘ದೇವರ’ ಚಿತ್ರದ ಪ್ರೀ-ರಿಲೀಸ್​ ಕಾರ್ಯಕ್ರಮವನ್ನು ಕೆಲವೇ ಸಾವಿರ ಜನರು ಸೇರಬಹುದಾದ ಸ್ಥಳದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದು ಚಿತ್ರತಂಡದವರು ಮಾಡಿದ ಮೊದಲ ತಪ್ಪು. ಇವೆಂಟ್​ ನಡೆಯಬೇಕಿದ್ದ ಸ್ಥಳದಲ್ಲಿ ಅಂದಾಜು 15ರಿಂದ 20 ಸಾವಿರ ಜನರು ನೆರೆದಿದ್ದರು. ಎಲ್ಲರಿಗೂ ಜಾಗ ಸಿಗದ ಕಾರಣ ವಿಐಪಿ ಅತಿಥಿಗಳಿಗೆ ಮೀಸಲಾಗಿದ್ದ ಕುರ್ಚಿಗಳತ್ತ ಕೆಲವರು ನುಗ್ಗಿದರು. ಇದರಿಂದ ತೊಂದರೆ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:33 am, Mon, 23 September 24

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ