AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮಗಿಂತ ನನಗೆ ಹೆಚ್ಚು ನೋವಾಗಿದೆ’; ‘ದೇವರ’ ಈವೆಂಟ್ ಕ್ಯಾನ್ಸಲ್ ಬಗ್ಗೆ ಜೂ. ಎನ್​​ಟಿಆರ್ ವಿಷಾದ

‘ದೇವರ’ ಪ್ರೀ ರಿಲೀಸ್ ಇವೆಂಟ್​ನಲ್ಲಿ ಪ್ರತಿ ನಿಮಿಷವೂ ಜನ ದಟ್ಟಣೆ ಹೆಚ್ಚುತ್ತಲೇ ಹೋಯಿತು. ಕೆಲವರು ಅಲ್ಲಿದ್ದ ವಸ್ತುಗಳಿಗೆ ಹಾನಿ ಕೂಡ ಮಾಡಿದರು. ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ ಎಂಬುದನ್ನು ತಿಳಿದ ಬಳಿಕ ಕೆಲವು ಸೆಲೆಬ್ರಿಟಿಗಳು ಅಲ್ಲಿಂದ ಕಾಲ್ಕಿತ್ತರು.

‘ನಿಮಗಿಂತ ನನಗೆ ಹೆಚ್ಚು ನೋವಾಗಿದೆ’; ‘ದೇವರ’ ಈವೆಂಟ್ ಕ್ಯಾನ್ಸಲ್ ಬಗ್ಗೆ ಜೂ. ಎನ್​​ಟಿಆರ್ ವಿಷಾದ
ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on:Sep 23, 2024 | 11:41 AM

Share

ಜೂನಿಯರ್​ ಎನ್​​ಟಿಆರ್ ಅವರ ‘ದೇವರ’ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ಸೆಪ್ಟೆಂಬರ್ 22ರಂದು ನಡೆಯಬೇಕಿತ್ತು. ಕೆಲವೇ ಸಾವಿರ ಜನರು ನಡೆಯುವ ಜಾಗದಲ್ಲಿ ದೊಡ್ಡ ಮಟ್ಟದಲ್ಲಿ ಜನರು ಸೇರಿದ್ದರಿಂದ ಅದನ್ನು ಕ್ಯಾನ್ಸಲ್ ಮಾಡಲಾಯಿತು. ಭಾರೀ ರಾದ್ದಾಂತ ನಡೆದಿದ್ದರಿಂದ ಬಂದ ಸೆಲೆಬ್ರಿಟಿಗಳು ತೊಂದರೆ ಅನುಭವಿಸಬೇಕಾಯಿತು. ಈ ಘಟನೆ ಬಗ್ಗೆ ಜೂನಿಯರ್ ಎನ್​ಟಿಆರ್ ಪ್ರತಿಕ್ರಿಯೆ ನೀಡಿದ್ದಾರೆ.

‘ದೇವರ ಈವೆಂಟ್ ಕ್ಯಾನ್ಸಲ್ ಆಗಿದೆ ಎಂದು ತಿಳಿದು ಬೇಸರ ಆಯಿತು. ಈ ಇವೆಂಟ್​ಗಾಗಿ ನಾನು ಕಾದಿದ್ದೆ. ನಾನು ನಿಮ್ಮೊಂದಿಗೆ ಸಮಯ ಕಳೆಯಲು ಮತ್ತು ದೇವರ ಬಗ್ಗೆ ಅನೇಕ ಆಸಕ್ತಿದಾಯಕ ವಿವರಗಳನ್ನು ಹಂಚಿಕೊಳ್ಳಲು ಕಾದಿದ್ದೆ. ಈ ಸಿನಿಮಾಗಾಗಿ ಹಾಕಿದ ಶ್ರಮದ ಬಗ್ಗೆ ತಿಳಿಸಲು ಕಾದಿದ್ದೆ. ಆದರೆ, ಭದ್ರತೆಯ ಕಾರಣದಿಂದ ಈ ಕಾರ್ಯಕ್ರಮ ನಡೆಯಲಿಲ್ಲ. ನಿಮಗಿಂತ ಹೆಚ್ಚು ನೋವು ನನಗೆ ಆಗಿದೆ. ಈ ಕಾರ್ಯಕ್ರಮ ಕ್ಯಾನ್ಸಲ್ ಮಾಡಿದ್ದಕ್ಕೆ ನಿರ್ಮಾಪಕರು ಹಾಗೂ ಸಂಘಟಕರನ್ನು ಬಯ್ಯೋದು ತಪ್ಪು’ ಎಂದಿದ್ದಾರೆ ಅವರು.

‘ದೇವರ’ ಈವೆಂಟ್​ಗೆ ಫ್ಯಾನ್ಸ್ ಕಾದಿದ್ದರು. ಕಳೆದ ಆರು ವರ್ಷಗಳಲ್ಲಿ ಜೂನಿಯರ್ ಎನ್​ಟಿಆರ್ ಸೋಲೋ ಹೀರೋ ಆಗಿ ನಟಿಸಿದ ಸಿನಿಮಾ ಇದು. ಈ ಸಿನಿಮಾ ಮಾಡುವಾಗ ಅವರಿಗೆ ಸಾಕಷ್ಟು ತೊಂದರೆಗಳು ಎದುರಾಗಿದ್ದವು. ಈಗ ಸಿನಿಮಾ ರಿಲೀಸ್ ಆಗುತ್ತಿದೆ ಎನ್ನುವಾಗ ಈ ರೀತಿ ಆಗಿದೆ.

ಇದನ್ನೂ ಓದಿ: ಇನ್ನೊಂದು ಟ್ರೇಲರ್​ ಬಿಡುಗಡೆ ಮಾಡಿದ ‘ದೇವರ’ ಚಿತ್ರತಂಡ; ಜನರಿಗೆ ಇಷ್ಟ ಆಯ್ತಾ?

‘ದೇವರ’ ಚಿತ್ರದ ಪ್ರೀ-ರಿಲೀಸ್​ ಕಾರ್ಯಕ್ರಮವನ್ನು ಕೆಲವೇ ಸಾವಿರ ಜನರು ಸೇರಬಹುದಾದ ಸ್ಥಳದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದು ಚಿತ್ರತಂಡದವರು ಮಾಡಿದ ಮೊದಲ ತಪ್ಪು. ಇವೆಂಟ್​ ನಡೆಯಬೇಕಿದ್ದ ಸ್ಥಳದಲ್ಲಿ ಅಂದಾಜು 15ರಿಂದ 20 ಸಾವಿರ ಜನರು ನೆರೆದಿದ್ದರು. ಎಲ್ಲರಿಗೂ ಜಾಗ ಸಿಗದ ಕಾರಣ ವಿಐಪಿ ಅತಿಥಿಗಳಿಗೆ ಮೀಸಲಾಗಿದ್ದ ಕುರ್ಚಿಗಳತ್ತ ಕೆಲವರು ನುಗ್ಗಿದರು. ಇದರಿಂದ ತೊಂದರೆ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:33 am, Mon, 23 September 24

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು