AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jr NTR Birthday: ಜ್ಯೂ.ಎನ್​ಟಿಆರ್​ ಜನ್ಮದಿನ; ಈ ನಟನ ಬಗ್ಗೆ ನಿಮಗೆ ಗೊತ್ತಿರದ ಐದು ಅಪರೂಪದ ವಿಚಾರಗಳು

ಜ್ಯೂ.ಎನ್​ಟಿಆರ್ ಹಾಗೂ ಕೊರಟಾಲ ಶಿವ ಮುಂದಿನ ಚಿತ್ರಕ್ಕಾಗಿ ಒಂದಾಗಿದ್ದಾರೆ. ಬರ್ತ್​ಡೇ ಪ್ರಯುಕ್ತ ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಈ ಮೂಲಕ ಕೊರಟಾಲ ಶಿವ ಅಭಿಮಾನಿಗಳಿಗೆ ಗಿಫ್ಟ್ ನೀಡಿದ್ದಾರೆ.

Jr NTR Birthday: ಜ್ಯೂ.ಎನ್​ಟಿಆರ್​ ಜನ್ಮದಿನ; ಈ ನಟನ ಬಗ್ಗೆ ನಿಮಗೆ ಗೊತ್ತಿರದ ಐದು ಅಪರೂಪದ ವಿಚಾರಗಳು
ಜ್ಯೂ.ಎನ್​ಟಿಆರ್
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 20, 2022 | 6:00 AM

Share

ಜ್ಯೂ.ಎನ್​ಟಿಆರ್ ಅವರು (JR. NTR) ಇಂದು (ಮೇ 20) 39ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಈ ನಟನಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಕಳೆದ ಎರಡು ವರ್ಷ ಕೊವಿಡ್ ಕಾರಣದಿಂದ ಜ್ಯೂ.ಎನ್​ಟಿಆರ್ ಬರ್ತ್​ಡೇ (JR. NTR Birthday) ಆಚರಿಸಿಕೊಂಡಿರಲಿಲ್ಲ. ಈ ಬಾರಿ ಕೊವಿಡ್ ಇಲ್ಲ. ಹೀಗಾಗಿ, ಅಭಿಮಾನಿಗಳ ಸಂಭ್ರಮ ಜೋರಾಗಿದೆ. ಸಾಕಷ್ಟು ಕಡೆಗಳಲ್ಲಿ ಸಾಮಾಜಿಕ ಕಾರ್ಯಗಳು ನಡೆಯುತ್ತಿವೆ.

ಜ್ಯೂ.ಎನ್​ಟಿಆರ್ ಹಾಗೂ ಕೊರಟಾಲ ಶಿವ ಮುಂದಿನ ಚಿತ್ರಕ್ಕಾಗಿ ಒಂದಾಗಿದ್ದಾರೆ. ಬರ್ತ್​ಡೇ ಪ್ರಯುಕ್ತ ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಈ ಮೂಲಕ ಕೊರಟಾಲ ಶಿವ ಅಭಿಮಾನಿಗಳಿಗೆ ಗಿಫ್ಟ್ ನೀಡಿದ್ದಾರೆ. ಈ ಚಿತ್ರಕ್ಕೆ ಯಾವ ಟೈಟಲ್ ಇಡಲಾಗುತ್ತದೆ ಅನ್ನೋದು ಸದ್ಯದ ಕುತೂಹಲ. ಇದು ಪ್ಯಾನ್​ ಇಂಡಿಯಾ ಸಿನಿಮಾ ಆಗಿದೆ. ಜ್ಯೂ.ಎನ್​ಟಿಆರ್​ ಬರ್ತ್​ಡೇ ಪ್ರಯುಕ್ತ ‘ಆರ್​ಆರ್​ಆರ್​’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಜ್ಯೂ.ಎನ್​ಟಿಆರ್ ಓರ್ವ ಅದ್ಭುತ ನಟ. ‘ಆರ್​ಆರ್​ಆರ್’ ಸಿನಿಮಾದಿಂದ ಅವರ ಖ್ಯಾತಿ ಹೆಚ್ಚಿದೆ. ತಾವು ಅದ್ಭುತ ನಟ ಎಂಬುದನ್ನು ಅವರು ಅನೇಕ ಬಾರಿ ಸಾಬೀತು ಮಾಡಿದ್ದಾರೆ. ಅವರ ಬಗ್ಗೆ ಗೊತ್ತಿಲ್ಲದ ಅನೇಕ ವಿಚಾರಗಳಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

  • ಕೂಚಿಪುಡಿ ಡ್ಯಾನ್ಸರ್​: ಕೂಚಿಪುಡಿ ನೃತ್ಯದ ಬಗ್ಗೆ ಎಲ್ಲರೂ ಕೇಳಿರುತ್ತೀರಿ. ಜ್ಯೂ.ಎನ್​ಟಿಆರ್​ ಈ ನೃತ್ಯವನ್ನು ಕಲಿತಿದ್ದಾರೆ. ಟಾಲಿವುಡ್​ನ ಓರ್ವ ಅದ್ಭುತ ಡ್ಯಾನ್ಸರ್​ ಅವರು ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ. ‘ಆರ್​ಆರ್​ಆರ್​’ ಸಿನಿಮಾದ ‘ಹಳ್ಳಿ ನಾಟು..’ ಹಾಡಿನಲ್ಲಿ ಅವರು ಅದ್ಭುತವಾಗಿ ಹೆಜ್ಜೆ ಹಾಕಿದ್ದಾರೆ. ಅವರ ಡ್ಯಾನ್ಸ್ ನೋಡಿ ಎಲ್ಲರೂ ಫಿದಾ ಆಗಿದ್ದಾರೆ.
  • ರಾಜಮೌಳಿ-ಜ್ಯೂ.ಎನ್​ಟಿಆರ್​ ಕಾಂಬಿನೇಷನ್​: 2001ರಲ್ಲಿ ತೆರೆಗೆ ಬಂದ ‘ಸ್ಟೂಡೆಂಟ್ ನಂಬರ್​ 1’ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು ರಾಜಮೌಳಿ. ‘ಸಿಂಹಾದ್ರಿ’ ಸಿನಿಮಾದಲ್ಲಿ ರಾಜಮೌಳಿ ಹಾಗೂ ಜ್ಯೂ.ಎನ್​ಟಿಆರ್ ಒಟ್ಟಾಗಿ ಕೆಲಸ ಮಾಡಿದರು. ಇದು ಕೂಡ ಹಿಟ್ ಆಯಿತು. ಇತ್ತೀಚೆಗೆ ತೆರೆಗೆ ಬಂದ ‘ಆರ್​ಆರ್​ಆರ್’ ಸಿನಿಮಾ ದೊಡ್ಡ ಯಶಸ್ಸು ಕಂಡಿದೆ. ಈ ಸಿನಿಮಾಗೆ ರಾಜಮೌಳಿ ನಿರ್ದೇಶನ ಇದೆ.
  • ಆಡಿಯೋ ರಿಲೀಸ್​ಗೆ 10 ಲಕ್ಷ ಮಂದಿ: ಜ್ಯೂ.ಎನ್​ಟಿಆರ್​ ನಟನೆಯ ‘ಆಂಧ್ರವಾಲಾ’ ಚಿತ್ರ 2004ರಲ್ಲಿ ತೆರೆಗೆ ಬಂತು. ಈ ಸಿನಿಮಾದ ಆಡಿಯೋ ರಿಲೀಸ್ ಕಾರ್ಯಕ್ರಮಕ್ಕೆ 10 ಲಕ್ಷ ಜನರು ಸೇರಿದ್ದರು. ಭಾರತೀಯ ರೈಲ್ವೇ ಈ ಕಾರ್ಯಕ್ರಮಕ್ಕೆ ಹತ್ತು ವಿಶೇಷ ರೈಲುಗಳನ್ನು ಬಿಟ್ಟಿತ್ತು. ಇದು ಒಂದು ವಿಶಿಷ್ಠ ದಾಖಲೆ ಆಗಿ ಉಳಿದುಕೊಂಡಿದೆ.
  • ಲಕ್ಕಿ ಸಂಖ್ಯೆ: ಜ್ಯೂ.ಎನ್​ಟಿಆರ್​ ಅವರ ಲಕ್ಕಿ ಸಂಖ್ಯೆ 9. ಅವರ ಬೈಕ್​, ಕಾರ್​ ಹಾಗೂ ಇತರ ವಾಹನಗಳ ನಂಬರ್​ ಪ್ಲೇಟ್​ಗೆ ಇದೇ ಸಂಖ್ಯೆ ಇದೆ ಅನ್ನೋದು ವಿಶೇಷ.
  • ಕನ್ನಡದ ಬಗ್ಗೆ ಗೌರವ: ಜ್ಯೂ.ಎನ್​ಟಿಆರ್ ಅವರಿಗೆ ಕನ್ನಡದ ಬಗ್ಗೆ ವಿಶೇಷ ಗೌರವ ಇದೆ. ಅವರು ಸಮಯ ಸಿಕ್ಕಾಗಲೆಲ್ಲ ಕನ್ನಡದಲ್ಲಿ ಮಾತನಾಡುತ್ತಾರೆ. ಈ ಕಾರಣಕ್ಕೆ ಅವರಿಗೆ ಕರ್ನಾಟಕದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು