AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Jr NTR: ಕೊಮರಾಮ್​ ಭೀಮ್​ ಅವತಾರದಲ್ಲಿ ಎದುರಾದ ಜ್ಯೂ. ಎನ್​ಟಿಆರ್

Komaram Bheem Poster: ಜ್ಯೂ. ಎನ್​ಟಿಆರ್​ ಬರ್ತ್​ಡೇ ಪ್ರಯುಕ್ತ, RRR ಸಿನಿಮಾದಲ್ಲಿ ಅವರು ನಿಭಾಯಿಸುತ್ತಿರುವ ಕೊಮರಾಮ್​ ಭೀಮ್​ ಪಾತ್ರದ ಝಲಕ್​ ಅನ್ನು ಅಭಿಮಾನಿಗಳಿಗೆ ತೋರಿಸಲಾಗಿದೆ. ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುವ ಮೂಲಕ ಫ್ಯಾನ್ಸ್​ ಸಂಭ್ರಮಿಸುತ್ತಿದ್ದಾರೆ.

Happy Birthday Jr NTR: ಕೊಮರಾಮ್​ ಭೀಮ್​ ಅವತಾರದಲ್ಲಿ ಎದುರಾದ ಜ್ಯೂ. ಎನ್​ಟಿಆರ್
ಕೊಮರಾಮ್ ಭೀಮ್ ಪಾತ್ರದಲ್ಲಿ ಜ್ಯೂ. ಎನ್​ಟಿಆರ್​
ಮದನ್​ ಕುಮಾರ್​
|

Updated on: May 20, 2021 | 10:20 AM

Share

ಟಾಲಿವುಟ್​ ಖ್ಯಾತ ನಟ ಜ್ಯೂ. ಎನ್​ಟಿಆರ್​ ಅವರಿಗೆ ಇಂದು (ಮೇ 20) ಜನ್ಮದಿನ. ಆದರೆ ಕೊರೊನಾ ವೈರಸ್​ ಹಾವಳಿ ಮಿತಿ ಮೀರಿರುವುದರಿಂದ ಈ ಬಾರಿ ಸಾರ್ವಜನಿಕವಾಗಿ ಸಂಭ್ರಮಾಚರಣೆ ಮಾಡಲಾಗುತ್ತಿಲ್ಲ. ಈ ವೇಳೆ ಕೇವಲ ಸೋಶಿಯಲ್​ ಮೀಡಿಯಾ ಮೂಲಕ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಲಾಗುತ್ತಿದೆ. ಈಗಾಗಲೇ ಅಭಿಮಾನಿಗಳು ಕಾಮನ್​ ಡಿಪಿ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಅದರ ಜೊತೆಗೆ ಜ್ಯೂ. ಎನ್​ಟಿಆರ್​ ಜನ್ಮದಿನದ ಖುಷಿ ಹೆಚ್ಚಿಸಲು ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಚಿತ್ರತಂಡ ಹೊಸ ಪೋಸ್ಟರ್​ ಬಿಡುಗಡೆ ಮಾಡಿದೆ. ಈ ಸಿನಿಮಾದಲ್ಲಿ ಕೊಮರಾಮ್​ ಭೀಮ್​ ಎಂಬ ಪಾತ್ರಕ್ಕೆ ಜ್ಯೂ. ಎನ್​ಟಿಆರ್​ ಬಣ್ಣ ಹಚ್ಚುತ್ತಿದ್ದಾರೆ.

ಬಾಹುಬಲಿ ಚಿತ್ರದ ಭಾರಿ ಯಶಸ್ಸಿನ ಬಳಿಕ ನಿರ್ದೇಶಕ ರಾಜಮೌಳಿ ಅವರು ‘ಆರ್​ಆರ್​ಆರ್​’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಹಾಗಾಗಿ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಮುಖ್ಯಭೂಮಿಕೆಯಲ್ಲಿ ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಅಭಿನಯಿಸುತ್ತಿದ್ದಾರೆ. ಬಾಲಿವುಡ್​ ಕಲಾವಿದರಾದ ಆಲಿಯಾ ಭಟ್​, ಅಜಯ್​ ದೇವಗನ್​ ಕೂಡ ನಟಿಸುತ್ತಿದ್ದಾರೆ. ಇಂದು ಜ್ಯೂ. ಎನ್​ಟಿಆರ್​ ಬರ್ತ್​ಡೇ ಪ್ರಯುಕ್ತ, ಅವರು ನಿಭಾಯಿಸುತ್ತಿರುವ ಕೊಮರಾಮ್​ ಭೀಮ್​ ಪಾತ್ರದ ಝಲಕ್​ ಅನ್ನು ಅಭಿಮಾನಿಗಳಿಗೆ ತೋರಿಸಲಾಗಿದೆ.

ಕೊರೊನಾ ವೈರಸ್​ ಕಾರಣದಿಂದ ಆರ್​ಆರ್​ಆರ್​ ಸಿನಿಮಾದ ಶೂಟಿಂಗ್​ಗೆ ಬ್ರೇಕ್​ ಹಾಕಲಾಗಿದೆ. ಮೇ 10ರಂದು ಜ್ಯೂ. ಎನ್​ಟಿಆರ್​ ಅವರಿಗೂ ಕೊರೊನಾ ವೈರಸ್​ ಪಾಸಿಟಿವ್​ ಆಗಿತ್ತು. ಆ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಆಗಾಗ ಅವರು ತಮ್ಮ ಆರೋಗ್ಯದ ಬಗ್ಗೆ ಅಪ್​ಡೇಟ್​ ನೀಡುತ್ತಿದ್ದಾರೆ. ಇನ್ನೂ ಅವರು ಕೊವಿಡ್​ನಿಂದ ಗುಣಮುಖರಾಗಿಲ್ಲ. ಅವರು ಮತ್ತು ಅವರ ಕುಟುಂಬದ ಸದಸ್ಯರು ಐಸೊಲೇಟ್​ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಪ್ರೀತಿಯ ಅಭಿಮಾನಿಗಳೇ, ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಮೆಸೇಜ್​, ವಿಡಿಯೋಗಳು ಹಾಗೂ ಶುಭ ಹಾರೈಕೆಗಳನ್ನು ನೋಡಿದ್ದೇನೆ. ನಿಮ್ಮ ಪ್ರೀತಿಗೆ ನಾನು ಋಣಿ ಆಗಿದ್ದೇನೆ. ಕೊವಿಡ್​ನಿಂದ ನಾನು ಚೇತರಿಸಿಕೊಳ್ಳುತ್ತಿದ್ದೇನೆ. ಆದಷ್ಟು ಬೇಗ ನೆಗೆಟಿವ್​ ರಿಪೋರ್ಟ್​ ಬರಲಿದೆ ಎಂಬ ನಂಬಿಕೆ ಇದೆ. ಪ್ರತಿವರ್ಷ ನೀವೆಲ್ಲ ನನ್ನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಮಾಡುತ್ತಿದ್ದಿರಿ. ಆದರೆ ಈ ಕಷ್ಟದ ಸಮಯದಲ್ಲಿ ನೀವೆಲ್ಲರೂ ಮನೆಯಲ್ಲಿ ಸುರಕ್ಷಿತವಾಗಿದ್ದರೆ ಅದೇ ನನಗೆ ಬಹುದೊಡ್ಡ ಉಡುಗೊರೆ’ ಎಂದು ಜ್ಯೂ. ಎನ್​ಟಿಆರ್​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ್ದ ಜೂ. ಎನ್​ಟಿಆರ್​ಗೆ ಕೊರೊನಾ ಸೋಂಕು ದೃಢ​

ಉಲ್ಟಾಪಲ್ಟಾ ಆಯ್ತು ರಾಜಮೌಳಿ ಲೆಕ್ಕಾಚಾರ; ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಬೇಸರ

(Jr NTR Birthday: Komaram Bheem New Poster released by Rajamouli directorial RRR film)

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ