AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Jr NTR: ಕೊಮರಾಮ್​ ಭೀಮ್​ ಅವತಾರದಲ್ಲಿ ಎದುರಾದ ಜ್ಯೂ. ಎನ್​ಟಿಆರ್

Komaram Bheem Poster: ಜ್ಯೂ. ಎನ್​ಟಿಆರ್​ ಬರ್ತ್​ಡೇ ಪ್ರಯುಕ್ತ, RRR ಸಿನಿಮಾದಲ್ಲಿ ಅವರು ನಿಭಾಯಿಸುತ್ತಿರುವ ಕೊಮರಾಮ್​ ಭೀಮ್​ ಪಾತ್ರದ ಝಲಕ್​ ಅನ್ನು ಅಭಿಮಾನಿಗಳಿಗೆ ತೋರಿಸಲಾಗಿದೆ. ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುವ ಮೂಲಕ ಫ್ಯಾನ್ಸ್​ ಸಂಭ್ರಮಿಸುತ್ತಿದ್ದಾರೆ.

Happy Birthday Jr NTR: ಕೊಮರಾಮ್​ ಭೀಮ್​ ಅವತಾರದಲ್ಲಿ ಎದುರಾದ ಜ್ಯೂ. ಎನ್​ಟಿಆರ್
ಕೊಮರಾಮ್ ಭೀಮ್ ಪಾತ್ರದಲ್ಲಿ ಜ್ಯೂ. ಎನ್​ಟಿಆರ್​
ಮದನ್​ ಕುಮಾರ್​
|

Updated on: May 20, 2021 | 10:20 AM

Share

ಟಾಲಿವುಟ್​ ಖ್ಯಾತ ನಟ ಜ್ಯೂ. ಎನ್​ಟಿಆರ್​ ಅವರಿಗೆ ಇಂದು (ಮೇ 20) ಜನ್ಮದಿನ. ಆದರೆ ಕೊರೊನಾ ವೈರಸ್​ ಹಾವಳಿ ಮಿತಿ ಮೀರಿರುವುದರಿಂದ ಈ ಬಾರಿ ಸಾರ್ವಜನಿಕವಾಗಿ ಸಂಭ್ರಮಾಚರಣೆ ಮಾಡಲಾಗುತ್ತಿಲ್ಲ. ಈ ವೇಳೆ ಕೇವಲ ಸೋಶಿಯಲ್​ ಮೀಡಿಯಾ ಮೂಲಕ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಲಾಗುತ್ತಿದೆ. ಈಗಾಗಲೇ ಅಭಿಮಾನಿಗಳು ಕಾಮನ್​ ಡಿಪಿ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಅದರ ಜೊತೆಗೆ ಜ್ಯೂ. ಎನ್​ಟಿಆರ್​ ಜನ್ಮದಿನದ ಖುಷಿ ಹೆಚ್ಚಿಸಲು ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಚಿತ್ರತಂಡ ಹೊಸ ಪೋಸ್ಟರ್​ ಬಿಡುಗಡೆ ಮಾಡಿದೆ. ಈ ಸಿನಿಮಾದಲ್ಲಿ ಕೊಮರಾಮ್​ ಭೀಮ್​ ಎಂಬ ಪಾತ್ರಕ್ಕೆ ಜ್ಯೂ. ಎನ್​ಟಿಆರ್​ ಬಣ್ಣ ಹಚ್ಚುತ್ತಿದ್ದಾರೆ.

ಬಾಹುಬಲಿ ಚಿತ್ರದ ಭಾರಿ ಯಶಸ್ಸಿನ ಬಳಿಕ ನಿರ್ದೇಶಕ ರಾಜಮೌಳಿ ಅವರು ‘ಆರ್​ಆರ್​ಆರ್​’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಹಾಗಾಗಿ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಮುಖ್ಯಭೂಮಿಕೆಯಲ್ಲಿ ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಅಭಿನಯಿಸುತ್ತಿದ್ದಾರೆ. ಬಾಲಿವುಡ್​ ಕಲಾವಿದರಾದ ಆಲಿಯಾ ಭಟ್​, ಅಜಯ್​ ದೇವಗನ್​ ಕೂಡ ನಟಿಸುತ್ತಿದ್ದಾರೆ. ಇಂದು ಜ್ಯೂ. ಎನ್​ಟಿಆರ್​ ಬರ್ತ್​ಡೇ ಪ್ರಯುಕ್ತ, ಅವರು ನಿಭಾಯಿಸುತ್ತಿರುವ ಕೊಮರಾಮ್​ ಭೀಮ್​ ಪಾತ್ರದ ಝಲಕ್​ ಅನ್ನು ಅಭಿಮಾನಿಗಳಿಗೆ ತೋರಿಸಲಾಗಿದೆ.

ಕೊರೊನಾ ವೈರಸ್​ ಕಾರಣದಿಂದ ಆರ್​ಆರ್​ಆರ್​ ಸಿನಿಮಾದ ಶೂಟಿಂಗ್​ಗೆ ಬ್ರೇಕ್​ ಹಾಕಲಾಗಿದೆ. ಮೇ 10ರಂದು ಜ್ಯೂ. ಎನ್​ಟಿಆರ್​ ಅವರಿಗೂ ಕೊರೊನಾ ವೈರಸ್​ ಪಾಸಿಟಿವ್​ ಆಗಿತ್ತು. ಆ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಆಗಾಗ ಅವರು ತಮ್ಮ ಆರೋಗ್ಯದ ಬಗ್ಗೆ ಅಪ್​ಡೇಟ್​ ನೀಡುತ್ತಿದ್ದಾರೆ. ಇನ್ನೂ ಅವರು ಕೊವಿಡ್​ನಿಂದ ಗುಣಮುಖರಾಗಿಲ್ಲ. ಅವರು ಮತ್ತು ಅವರ ಕುಟುಂಬದ ಸದಸ್ಯರು ಐಸೊಲೇಟ್​ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಪ್ರೀತಿಯ ಅಭಿಮಾನಿಗಳೇ, ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಮೆಸೇಜ್​, ವಿಡಿಯೋಗಳು ಹಾಗೂ ಶುಭ ಹಾರೈಕೆಗಳನ್ನು ನೋಡಿದ್ದೇನೆ. ನಿಮ್ಮ ಪ್ರೀತಿಗೆ ನಾನು ಋಣಿ ಆಗಿದ್ದೇನೆ. ಕೊವಿಡ್​ನಿಂದ ನಾನು ಚೇತರಿಸಿಕೊಳ್ಳುತ್ತಿದ್ದೇನೆ. ಆದಷ್ಟು ಬೇಗ ನೆಗೆಟಿವ್​ ರಿಪೋರ್ಟ್​ ಬರಲಿದೆ ಎಂಬ ನಂಬಿಕೆ ಇದೆ. ಪ್ರತಿವರ್ಷ ನೀವೆಲ್ಲ ನನ್ನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಮಾಡುತ್ತಿದ್ದಿರಿ. ಆದರೆ ಈ ಕಷ್ಟದ ಸಮಯದಲ್ಲಿ ನೀವೆಲ್ಲರೂ ಮನೆಯಲ್ಲಿ ಸುರಕ್ಷಿತವಾಗಿದ್ದರೆ ಅದೇ ನನಗೆ ಬಹುದೊಡ್ಡ ಉಡುಗೊರೆ’ ಎಂದು ಜ್ಯೂ. ಎನ್​ಟಿಆರ್​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ್ದ ಜೂ. ಎನ್​ಟಿಆರ್​ಗೆ ಕೊರೊನಾ ಸೋಂಕು ದೃಢ​

ಉಲ್ಟಾಪಲ್ಟಾ ಆಯ್ತು ರಾಜಮೌಳಿ ಲೆಕ್ಕಾಚಾರ; ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಬೇಸರ

(Jr NTR Birthday: Komaram Bheem New Poster released by Rajamouli directorial RRR film)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್