AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JR NTR Birthday: ಜೂನಿಯರ್ ಎನ್​ಟಿಆರ್ ಜನ್ಮದಿನ; ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ಇದೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್​ ಅವರಿಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ ಇದೆ. ಜೂನಿಯರ್ ಎನ್​ಟಿಆರ್ ತಾಯಿ ಕುಂದಾಪುರದವರು. ಹೀಗಾಗಿ, ಅವರಿಗೆ ಕನ್ನಡದ ನಂಟಿದೆ.

JR NTR Birthday: ಜೂನಿಯರ್ ಎನ್​ಟಿಆರ್ ಜನ್ಮದಿನ; ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ಇದೆ ವಿಶೇಷ ಪ್ರೀತಿ
ಜೂನಿಯರ್ ಎನ್​ಟಿಆರ್​-ಪುನೀತ್
ರಾಜೇಶ್ ದುಗ್ಗುಮನೆ
|

Updated on: May 20, 2023 | 6:30 AM

Share

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು (ಮೇ 20) ಜನ್ಮದಿನದ ಸಂಭ್ರಮ. ಈ ವಿಶೇಷ ದಿನಕ್ಕೆ ಅಭಿಮಾನಿಗಳಿಂದ, ಸೆಲೆಬ್ರಿಟಿಗಳಿಂದ ಹಾಗೂ ಕುಟುಂಬದವರಿಂದ ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್ ಎನ್​ಟಿಆರ್ ಹೆಸರಲ್ಲಿ ಅನೇಕ ಸಾಮಾಜಿಕ ಕೆಲಸಗಳು ಆಗುತ್ತಿವೆ. ಎನ್​ಟಿಆರ್ ಅವರ 30ನೇ ಸಿನಿಮಾದ ಟೈಟಲ್ ರಿವೀಲ್ ಆಗಿದೆ. ಜೂನಿಯರ್ ಎನ್​ಟಿಆರ್ (Jr NTR) ಅವರ ನಟನೆಯ ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು (Naatu Naatu Song) ಆಸ್ಕರ್ ಗೆದ್ದ ಕಾರಣ ಅವರ ಬರ್ತ್​ಡೇ ಸಖತ್ ವಿಶೇಷ ಎನಿಸಿಕೊಂಡಿದೆ.

2001ರಲ್ಲಿ ರಿಲೀಸ್ ಆದ ‘ನಿನ್ನು ಚೂಡಾಲನಿ’ ಸಿನಿಮಾ ತೆರೆಗೆ ಬಂದು ಯಶಸ್ಸು ಕಂಡಿತು. ಅದೇ ವರ್ಷ ರಿಲೀಸ್ ಆದ ‘ಸ್ಟೂಡೆಂಟ್ ನಂಬರ್ 1’ ಚಿತ್ರ ಕೂಡ ಯಶಸ್ಸು ಕಂಡಿತು. ಇದರಿಂದ ಜೂನಿಯರ್ ಎನ್​ಟಿಆರ್ ಅವರು ಟಾಲಿವುಡ್​ನಲ್ಲಿ ಭದ್ರ ನೆಲೆ ಕಂಡುಕೊಂಡರು. ಬಳಿಕ ‘ಸಿಂಹಾದ್ರಿ’, ‘ಟೆಂಪರ್​’ ಸೇರಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಅವರ ನಟನೆಯ ‘ಆರ್​ಆರ್​ಆರ್’ ಸಿನಿಮಾ ಕೂಡ ಯಶಸ್ಸು ಕಂಡಿತು. ‘ನಾಟು ನಾಟು..’ ಹಾಡು ಮಾಡಿದ ಮೋಡಿ ತುಂಬಾನೇ ದೊಡ್ಡದು.

ಜೂನಿಯರ್ ಎನ್​ಟಿಆರ್​ ಅವರಿಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ ಇದೆ. ಜೂನಿಯರ್ ಎನ್​ಟಿಆರ್ ತಾಯಿ ಕುಂದಾಪುರದವರು. ಹೀಗಾಗಿ, ಅವರಿಗೆ ಕನ್ನಡದ ನಂಟಿದೆ. ‘ಆರ್​ಆರ್​ಆರ್’ ಚಿತ್ರಕ್ಕೆ ಅವರೇ ಡಬ್ ಮಾಡಿದ್ದರು ಅನ್ನೋದು ವಿಶೇಷ. ಅವರ ಕನ್ನಡ ಪ್ರೀತಿ ಇಲ್ಲಿಗೆ ಮುಗಿದಿಲ್ಲ. ತೆಲುಗು ರಿಯಾಲಿಟಿ ಶೋ ಬಿಗ್ ಬಾಸ್​ನಲ್ಲಿ ಕನ್ನಡ ಸ್ಪರ್ಧಿಗಳ ಆಗಮನ ಆಗಿತ್ತು. ಈ ವೇಳೆ ಅವರು ಕನ್ನಡದಲ್ಲೇ ಸಂವಹನ ಮಾಡಿದ್ದರು.

ಸ್ಪರ್ಧಿಗಳಿಬ್ಬರು ಕನ್ನಡದಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಮಾತನಾಡಿದ್ದ ಜೂನಿಯರ್ ಎನ್​ಟಿಆರ್ ಅವರು, ‘ನೀವು ಕನ್ನಡದಲ್ಲಿ ಚೆನ್ನಾಗಿ ಮಾತಾಡ್ತಾ ಇದ್ರಿ. ನಿಮ್ಮಲ್ಲಿ ಕನ್ನಡದವರು ಯಾರು’ ಎಂದು ಪ್ರಶ್ನೆ ಮಾಡಿದ್ದರು ಜೂನಿಯರ್ ಎನ್​ಟಿಆರ್​. ‘ನಾವಿಬ್ಬರೂ ಕನ್ನಡವರೇ’ ಎಂದಿದ್ದರು ಸ್ಪರ್ಧಿಗಳು. ‘ನನ್ನ ಅಮ್ಮ ಕೂಡ ಕನ್ನಡವರು, ಕುಂದಾಪುರದವರು’ ಎಂದು ಕನ್ನಡದಲ್ಲೇ ಜೂನಿಯರ್ ಎನ್​ಟಿಆರ್​ ಸಂವಹನ ಮಾಡಿದ್ದರು.

ಇದನ್ನೂ ಓದಿ: ರಾಜಮೌಳಿ-ಜೂ ಎನ್​ಟಿಆರ್ ಹಳೆ ಸಿನಿಮಾ ಮರು ಬಿಡುಗಡೆ, ಪ್ರೀ ರಿಲೀಸ್ ಇವೆಂಟ್​ ಆಯೋಜನೆ

ಜೂನಿಯರ್ ಎನ್​ಟಿಆರ್​ ಅವರಿಗೆ ಪುನೀತ್ ರಾಜ್​ಕುಮಾರ್ ಜೊತೆ ಒಳ್ಳೆಯ ಒಡನಾಟ ಇತ್ತು. ಪುನೀತ್ ನಟನೆಯ ‘ಚಕ್ರವ್ಯೂಹ’ ಸಿನಿಮಾದ ‘ಗೆಳೆಯಾ.. ಗೆಳೆಯಾ..’ ಹಾಡನ್ನು ಜೂನಿಯರ್ ಎನ್​ಟಿಆರ್ ಅವರು ಹಾಡಿದ್ದರು ಅನ್ನೋದು ವಿಶೇಷ. ಅವರು ಕರ್ನಾಟಕಕ್ಕೆ ಸಿನಿಮಾ ಪ್ರಮೋಷನ್​​ಗೆ ಬಂದ ಸಂದರ್ಭದಲ್ಲೂ ಸ್ವಚ್ಛ ಕನ್ನಡದಲ್ಲೇ ಮಾತನಾಡುತ್ತಾರೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​