AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JR NTR Birthday: ಜೂನಿಯರ್ ಎನ್​ಟಿಆರ್ ಜನ್ಮದಿನ; ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ಇದೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್​ ಅವರಿಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ ಇದೆ. ಜೂನಿಯರ್ ಎನ್​ಟಿಆರ್ ತಾಯಿ ಕುಂದಾಪುರದವರು. ಹೀಗಾಗಿ, ಅವರಿಗೆ ಕನ್ನಡದ ನಂಟಿದೆ.

JR NTR Birthday: ಜೂನಿಯರ್ ಎನ್​ಟಿಆರ್ ಜನ್ಮದಿನ; ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ಇದೆ ವಿಶೇಷ ಪ್ರೀತಿ
ಜೂನಿಯರ್ ಎನ್​ಟಿಆರ್​-ಪುನೀತ್
ರಾಜೇಶ್ ದುಗ್ಗುಮನೆ
|

Updated on: May 20, 2023 | 6:30 AM

Share

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು (ಮೇ 20) ಜನ್ಮದಿನದ ಸಂಭ್ರಮ. ಈ ವಿಶೇಷ ದಿನಕ್ಕೆ ಅಭಿಮಾನಿಗಳಿಂದ, ಸೆಲೆಬ್ರಿಟಿಗಳಿಂದ ಹಾಗೂ ಕುಟುಂಬದವರಿಂದ ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್ ಎನ್​ಟಿಆರ್ ಹೆಸರಲ್ಲಿ ಅನೇಕ ಸಾಮಾಜಿಕ ಕೆಲಸಗಳು ಆಗುತ್ತಿವೆ. ಎನ್​ಟಿಆರ್ ಅವರ 30ನೇ ಸಿನಿಮಾದ ಟೈಟಲ್ ರಿವೀಲ್ ಆಗಿದೆ. ಜೂನಿಯರ್ ಎನ್​ಟಿಆರ್ (Jr NTR) ಅವರ ನಟನೆಯ ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು (Naatu Naatu Song) ಆಸ್ಕರ್ ಗೆದ್ದ ಕಾರಣ ಅವರ ಬರ್ತ್​ಡೇ ಸಖತ್ ವಿಶೇಷ ಎನಿಸಿಕೊಂಡಿದೆ.

2001ರಲ್ಲಿ ರಿಲೀಸ್ ಆದ ‘ನಿನ್ನು ಚೂಡಾಲನಿ’ ಸಿನಿಮಾ ತೆರೆಗೆ ಬಂದು ಯಶಸ್ಸು ಕಂಡಿತು. ಅದೇ ವರ್ಷ ರಿಲೀಸ್ ಆದ ‘ಸ್ಟೂಡೆಂಟ್ ನಂಬರ್ 1’ ಚಿತ್ರ ಕೂಡ ಯಶಸ್ಸು ಕಂಡಿತು. ಇದರಿಂದ ಜೂನಿಯರ್ ಎನ್​ಟಿಆರ್ ಅವರು ಟಾಲಿವುಡ್​ನಲ್ಲಿ ಭದ್ರ ನೆಲೆ ಕಂಡುಕೊಂಡರು. ಬಳಿಕ ‘ಸಿಂಹಾದ್ರಿ’, ‘ಟೆಂಪರ್​’ ಸೇರಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಅವರ ನಟನೆಯ ‘ಆರ್​ಆರ್​ಆರ್’ ಸಿನಿಮಾ ಕೂಡ ಯಶಸ್ಸು ಕಂಡಿತು. ‘ನಾಟು ನಾಟು..’ ಹಾಡು ಮಾಡಿದ ಮೋಡಿ ತುಂಬಾನೇ ದೊಡ್ಡದು.

ಜೂನಿಯರ್ ಎನ್​ಟಿಆರ್​ ಅವರಿಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ ಇದೆ. ಜೂನಿಯರ್ ಎನ್​ಟಿಆರ್ ತಾಯಿ ಕುಂದಾಪುರದವರು. ಹೀಗಾಗಿ, ಅವರಿಗೆ ಕನ್ನಡದ ನಂಟಿದೆ. ‘ಆರ್​ಆರ್​ಆರ್’ ಚಿತ್ರಕ್ಕೆ ಅವರೇ ಡಬ್ ಮಾಡಿದ್ದರು ಅನ್ನೋದು ವಿಶೇಷ. ಅವರ ಕನ್ನಡ ಪ್ರೀತಿ ಇಲ್ಲಿಗೆ ಮುಗಿದಿಲ್ಲ. ತೆಲುಗು ರಿಯಾಲಿಟಿ ಶೋ ಬಿಗ್ ಬಾಸ್​ನಲ್ಲಿ ಕನ್ನಡ ಸ್ಪರ್ಧಿಗಳ ಆಗಮನ ಆಗಿತ್ತು. ಈ ವೇಳೆ ಅವರು ಕನ್ನಡದಲ್ಲೇ ಸಂವಹನ ಮಾಡಿದ್ದರು.

ಸ್ಪರ್ಧಿಗಳಿಬ್ಬರು ಕನ್ನಡದಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಮಾತನಾಡಿದ್ದ ಜೂನಿಯರ್ ಎನ್​ಟಿಆರ್ ಅವರು, ‘ನೀವು ಕನ್ನಡದಲ್ಲಿ ಚೆನ್ನಾಗಿ ಮಾತಾಡ್ತಾ ಇದ್ರಿ. ನಿಮ್ಮಲ್ಲಿ ಕನ್ನಡದವರು ಯಾರು’ ಎಂದು ಪ್ರಶ್ನೆ ಮಾಡಿದ್ದರು ಜೂನಿಯರ್ ಎನ್​ಟಿಆರ್​. ‘ನಾವಿಬ್ಬರೂ ಕನ್ನಡವರೇ’ ಎಂದಿದ್ದರು ಸ್ಪರ್ಧಿಗಳು. ‘ನನ್ನ ಅಮ್ಮ ಕೂಡ ಕನ್ನಡವರು, ಕುಂದಾಪುರದವರು’ ಎಂದು ಕನ್ನಡದಲ್ಲೇ ಜೂನಿಯರ್ ಎನ್​ಟಿಆರ್​ ಸಂವಹನ ಮಾಡಿದ್ದರು.

ಇದನ್ನೂ ಓದಿ: ರಾಜಮೌಳಿ-ಜೂ ಎನ್​ಟಿಆರ್ ಹಳೆ ಸಿನಿಮಾ ಮರು ಬಿಡುಗಡೆ, ಪ್ರೀ ರಿಲೀಸ್ ಇವೆಂಟ್​ ಆಯೋಜನೆ

ಜೂನಿಯರ್ ಎನ್​ಟಿಆರ್​ ಅವರಿಗೆ ಪುನೀತ್ ರಾಜ್​ಕುಮಾರ್ ಜೊತೆ ಒಳ್ಳೆಯ ಒಡನಾಟ ಇತ್ತು. ಪುನೀತ್ ನಟನೆಯ ‘ಚಕ್ರವ್ಯೂಹ’ ಸಿನಿಮಾದ ‘ಗೆಳೆಯಾ.. ಗೆಳೆಯಾ..’ ಹಾಡನ್ನು ಜೂನಿಯರ್ ಎನ್​ಟಿಆರ್ ಅವರು ಹಾಡಿದ್ದರು ಅನ್ನೋದು ವಿಶೇಷ. ಅವರು ಕರ್ನಾಟಕಕ್ಕೆ ಸಿನಿಮಾ ಪ್ರಮೋಷನ್​​ಗೆ ಬಂದ ಸಂದರ್ಭದಲ್ಲೂ ಸ್ವಚ್ಛ ಕನ್ನಡದಲ್ಲೇ ಮಾತನಾಡುತ್ತಾರೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ