AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JR NTR Birthday: ಜೂನಿಯರ್ ಎನ್​ಟಿಆರ್ ಜನ್ಮದಿನ; ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ಇದೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್​ ಅವರಿಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ ಇದೆ. ಜೂನಿಯರ್ ಎನ್​ಟಿಆರ್ ತಾಯಿ ಕುಂದಾಪುರದವರು. ಹೀಗಾಗಿ, ಅವರಿಗೆ ಕನ್ನಡದ ನಂಟಿದೆ.

JR NTR Birthday: ಜೂನಿಯರ್ ಎನ್​ಟಿಆರ್ ಜನ್ಮದಿನ; ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ಇದೆ ವಿಶೇಷ ಪ್ರೀತಿ
ಜೂನಿಯರ್ ಎನ್​ಟಿಆರ್​-ಪುನೀತ್
ರಾಜೇಶ್ ದುಗ್ಗುಮನೆ
|

Updated on: May 20, 2023 | 6:30 AM

Share

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು (ಮೇ 20) ಜನ್ಮದಿನದ ಸಂಭ್ರಮ. ಈ ವಿಶೇಷ ದಿನಕ್ಕೆ ಅಭಿಮಾನಿಗಳಿಂದ, ಸೆಲೆಬ್ರಿಟಿಗಳಿಂದ ಹಾಗೂ ಕುಟುಂಬದವರಿಂದ ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್ ಎನ್​ಟಿಆರ್ ಹೆಸರಲ್ಲಿ ಅನೇಕ ಸಾಮಾಜಿಕ ಕೆಲಸಗಳು ಆಗುತ್ತಿವೆ. ಎನ್​ಟಿಆರ್ ಅವರ 30ನೇ ಸಿನಿಮಾದ ಟೈಟಲ್ ರಿವೀಲ್ ಆಗಿದೆ. ಜೂನಿಯರ್ ಎನ್​ಟಿಆರ್ (Jr NTR) ಅವರ ನಟನೆಯ ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು (Naatu Naatu Song) ಆಸ್ಕರ್ ಗೆದ್ದ ಕಾರಣ ಅವರ ಬರ್ತ್​ಡೇ ಸಖತ್ ವಿಶೇಷ ಎನಿಸಿಕೊಂಡಿದೆ.

2001ರಲ್ಲಿ ರಿಲೀಸ್ ಆದ ‘ನಿನ್ನು ಚೂಡಾಲನಿ’ ಸಿನಿಮಾ ತೆರೆಗೆ ಬಂದು ಯಶಸ್ಸು ಕಂಡಿತು. ಅದೇ ವರ್ಷ ರಿಲೀಸ್ ಆದ ‘ಸ್ಟೂಡೆಂಟ್ ನಂಬರ್ 1’ ಚಿತ್ರ ಕೂಡ ಯಶಸ್ಸು ಕಂಡಿತು. ಇದರಿಂದ ಜೂನಿಯರ್ ಎನ್​ಟಿಆರ್ ಅವರು ಟಾಲಿವುಡ್​ನಲ್ಲಿ ಭದ್ರ ನೆಲೆ ಕಂಡುಕೊಂಡರು. ಬಳಿಕ ‘ಸಿಂಹಾದ್ರಿ’, ‘ಟೆಂಪರ್​’ ಸೇರಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಅವರ ನಟನೆಯ ‘ಆರ್​ಆರ್​ಆರ್’ ಸಿನಿಮಾ ಕೂಡ ಯಶಸ್ಸು ಕಂಡಿತು. ‘ನಾಟು ನಾಟು..’ ಹಾಡು ಮಾಡಿದ ಮೋಡಿ ತುಂಬಾನೇ ದೊಡ್ಡದು.

ಜೂನಿಯರ್ ಎನ್​ಟಿಆರ್​ ಅವರಿಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ ಇದೆ. ಜೂನಿಯರ್ ಎನ್​ಟಿಆರ್ ತಾಯಿ ಕುಂದಾಪುರದವರು. ಹೀಗಾಗಿ, ಅವರಿಗೆ ಕನ್ನಡದ ನಂಟಿದೆ. ‘ಆರ್​ಆರ್​ಆರ್’ ಚಿತ್ರಕ್ಕೆ ಅವರೇ ಡಬ್ ಮಾಡಿದ್ದರು ಅನ್ನೋದು ವಿಶೇಷ. ಅವರ ಕನ್ನಡ ಪ್ರೀತಿ ಇಲ್ಲಿಗೆ ಮುಗಿದಿಲ್ಲ. ತೆಲುಗು ರಿಯಾಲಿಟಿ ಶೋ ಬಿಗ್ ಬಾಸ್​ನಲ್ಲಿ ಕನ್ನಡ ಸ್ಪರ್ಧಿಗಳ ಆಗಮನ ಆಗಿತ್ತು. ಈ ವೇಳೆ ಅವರು ಕನ್ನಡದಲ್ಲೇ ಸಂವಹನ ಮಾಡಿದ್ದರು.

ಸ್ಪರ್ಧಿಗಳಿಬ್ಬರು ಕನ್ನಡದಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಮಾತನಾಡಿದ್ದ ಜೂನಿಯರ್ ಎನ್​ಟಿಆರ್ ಅವರು, ‘ನೀವು ಕನ್ನಡದಲ್ಲಿ ಚೆನ್ನಾಗಿ ಮಾತಾಡ್ತಾ ಇದ್ರಿ. ನಿಮ್ಮಲ್ಲಿ ಕನ್ನಡದವರು ಯಾರು’ ಎಂದು ಪ್ರಶ್ನೆ ಮಾಡಿದ್ದರು ಜೂನಿಯರ್ ಎನ್​ಟಿಆರ್​. ‘ನಾವಿಬ್ಬರೂ ಕನ್ನಡವರೇ’ ಎಂದಿದ್ದರು ಸ್ಪರ್ಧಿಗಳು. ‘ನನ್ನ ಅಮ್ಮ ಕೂಡ ಕನ್ನಡವರು, ಕುಂದಾಪುರದವರು’ ಎಂದು ಕನ್ನಡದಲ್ಲೇ ಜೂನಿಯರ್ ಎನ್​ಟಿಆರ್​ ಸಂವಹನ ಮಾಡಿದ್ದರು.

ಇದನ್ನೂ ಓದಿ: ರಾಜಮೌಳಿ-ಜೂ ಎನ್​ಟಿಆರ್ ಹಳೆ ಸಿನಿಮಾ ಮರು ಬಿಡುಗಡೆ, ಪ್ರೀ ರಿಲೀಸ್ ಇವೆಂಟ್​ ಆಯೋಜನೆ

ಜೂನಿಯರ್ ಎನ್​ಟಿಆರ್​ ಅವರಿಗೆ ಪುನೀತ್ ರಾಜ್​ಕುಮಾರ್ ಜೊತೆ ಒಳ್ಳೆಯ ಒಡನಾಟ ಇತ್ತು. ಪುನೀತ್ ನಟನೆಯ ‘ಚಕ್ರವ್ಯೂಹ’ ಸಿನಿಮಾದ ‘ಗೆಳೆಯಾ.. ಗೆಳೆಯಾ..’ ಹಾಡನ್ನು ಜೂನಿಯರ್ ಎನ್​ಟಿಆರ್ ಅವರು ಹಾಡಿದ್ದರು ಅನ್ನೋದು ವಿಶೇಷ. ಅವರು ಕರ್ನಾಟಕಕ್ಕೆ ಸಿನಿಮಾ ಪ್ರಮೋಷನ್​​ಗೆ ಬಂದ ಸಂದರ್ಭದಲ್ಲೂ ಸ್ವಚ್ಛ ಕನ್ನಡದಲ್ಲೇ ಮಾತನಾಡುತ್ತಾರೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ