AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಸುರಕ್ಷಿತವಾಗಿ ಮರಳಿದ್ದೇನೆ’; ಜಪಾನ್​ನಿಂದ ಹಿಂದಿರುಗಿ ಟ್ವೀಟ್ ಮಾಡಿದ ಜೂ. ಎನ್​ಟಿಆರ್

ಜೂನಿಯರ್​ ಎನ್​ಟಿಆರ್ ಅವರು ಕ್ರಿಸ್​​ಮಸ್ ಸಂದರ್ಭದಲ್ಲಿ ಜಪಾನ್​ಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿ ಭೂಕಂಪ ಸಂಭವಿಸಿದೆ. ಇದು ಜೂನಿಯರ್ ಎನ್​ಟಿಆರ್ ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿತ್ತು.

‘ನಾನು ಸುರಕ್ಷಿತವಾಗಿ ಮರಳಿದ್ದೇನೆ’; ಜಪಾನ್​ನಿಂದ ಹಿಂದಿರುಗಿ ಟ್ವೀಟ್ ಮಾಡಿದ ಜೂ. ಎನ್​ಟಿಆರ್
ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Jan 02, 2024 | 2:19 PM

Share

ಜೂನಿಯರ್​ ಎನ್​ಟಿಆರ್ (Jr NTR) ಅವರು ಸದ್ಯ ಕೊರಟಾಲ ಶಿವ ನಿರ್ದೇಶನದ ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ‘ಆರ್​ಆರ್​ಆರ್’ ಸಿನಿಮಾದ ಬಳಿಕ ಈ ಸಿನಿಮಾದಲ್ಲಿ ನಟಿಸುತ್ತಿರುವುದರಿಂದ ಭಾರೀ ನಿರೀಕ್ಷೆಗಳಿವೆ. ಈ ಚಿತ್ರದ ಬಗ್ಗೆ ನಿರ್ಮಾಪಕರು ಈಗಾಗಲೇ ಹಲವು ಅಪ್‌ಡೇಟ್‌ಗಳನ್ನು ನೀಡುತ್ತಿದ್ದಾರೆ. ಈ ಮಧ್ಯೆ ಜೂನಿಯರ್ ಎನ್​ಟಿಆರ್​ ಅವರು ಕುಟುಂಬದ ಜೊತೆ ಜಪಾನ್​ಗೆ ತೆರಳಿದ್ದರು. ಅಲ್ಲಿ ಭೂಕಂಪ ಆದ ಬಳಿಕ ಅವರು ಭಾರತಕ್ಕೆ ಮರಳಿದ್ದಾರೆ. ಈ ವಿಚಾರವನ್ನು ಅವರು ಹಂಚಿಕೊಂಡಿದ್ದಾರೆ.

ಜೂನಿಯರ್​ ಎನ್​ಟಿಆರ್ ಅವರು ಕ್ರಿಸ್​​ಮಸ್ ಸಂದರ್ಭದಲ್ಲಿ ಜಪಾನ್​ಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿ ಭೂಕಂಪ ಸಂಭವಿಸಿದೆ. ಇದು ಜೂನಿಯರ್ ಎನ್​ಟಿಆರ್ ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿತ್ತು. ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಬರೆದುಕೊಂಡಿದ್ದರು. ಸುರಕ್ಷಿತವಾಗಿ ಭಾರತಕ್ಕೆ ಮರಳಿರುವುದಾಗಿ ತಾರಕ್ ಹೇಳಿದ್ದಾರೆ. ಇದರಿಂದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

‘ನಾವು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದೇವೆ. ಜಪಾನ್​ನಲ್ಲಿ ಭೂಕಂಪ ಆಗಿದ್ದು ಶಾಕಿಂಗ್ ಆಗಿದೆ. ನಾನು ಒಂದು ವಾರ ಅಲ್ಲಿಯೇ ಕಳೆದಿದ್ದೇನೆ. ಭೂಕಂಪದಿಂದ ಹಾನಿಗೆ ಒಳಗಾದವರ ಬಗ್ಗೆ ದುಃಖ ಇದೆ. ಅಲ್ಲಿನ ಜನ ಬೇಗ ಚೇತರಿಸಿಕೊಳ್ಳಲಿ. ದೃಢವಾಗಿರಿ ಜಪಾನ್’ ಎಂದು ಜೂನಿಯರ್ ಎನ್​ಟಿಆರ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಭಾರಿ ಉತ್ಸಾಹದಲ್ಲಿ ಪೋಸ್ಟರ್​ ಬಿಡುಗಡೆ ಮಾಡಿ ಟ್ರೋಲ್​ ಆದ ‘ದೇವರ’ ಚಿತ್ರತಂಡ

‘ದೇವರ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ಸೈಫ್ ಅಲಿ ಖಾನ್ ವಿಲನ್ ಆಗಿ ನಟಿಸುತ್ತಿದ್ದಾರೆ. ಜೂನಿಯರ್​ ಎನ್​ಟಿಆರ್​ಗೆ ಜೊತೆಯಾಗಿ ಜಾನ್ವಿ ಕಪೂರ್ ‘ದೇವರ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸಮುದ್ರದ ಹಿನ್ನೆಲೆಯಲ್ಲಿ ಚಿತ್ರದ ಕಥೆ ಸಾಗುತ್ತದೆ. ಈ ಚಿತ್ರದ ಗ್ಲಿಂಪ್ಸ್ ಜನವರಿ 8ರಂದು ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!