AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಸುರಕ್ಷಿತವಾಗಿ ಮರಳಿದ್ದೇನೆ’; ಜಪಾನ್​ನಿಂದ ಹಿಂದಿರುಗಿ ಟ್ವೀಟ್ ಮಾಡಿದ ಜೂ. ಎನ್​ಟಿಆರ್

ಜೂನಿಯರ್​ ಎನ್​ಟಿಆರ್ ಅವರು ಕ್ರಿಸ್​​ಮಸ್ ಸಂದರ್ಭದಲ್ಲಿ ಜಪಾನ್​ಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿ ಭೂಕಂಪ ಸಂಭವಿಸಿದೆ. ಇದು ಜೂನಿಯರ್ ಎನ್​ಟಿಆರ್ ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿತ್ತು.

‘ನಾನು ಸುರಕ್ಷಿತವಾಗಿ ಮರಳಿದ್ದೇನೆ’; ಜಪಾನ್​ನಿಂದ ಹಿಂದಿರುಗಿ ಟ್ವೀಟ್ ಮಾಡಿದ ಜೂ. ಎನ್​ಟಿಆರ್
ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Jan 02, 2024 | 2:19 PM

Share

ಜೂನಿಯರ್​ ಎನ್​ಟಿಆರ್ (Jr NTR) ಅವರು ಸದ್ಯ ಕೊರಟಾಲ ಶಿವ ನಿರ್ದೇಶನದ ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ‘ಆರ್​ಆರ್​ಆರ್’ ಸಿನಿಮಾದ ಬಳಿಕ ಈ ಸಿನಿಮಾದಲ್ಲಿ ನಟಿಸುತ್ತಿರುವುದರಿಂದ ಭಾರೀ ನಿರೀಕ್ಷೆಗಳಿವೆ. ಈ ಚಿತ್ರದ ಬಗ್ಗೆ ನಿರ್ಮಾಪಕರು ಈಗಾಗಲೇ ಹಲವು ಅಪ್‌ಡೇಟ್‌ಗಳನ್ನು ನೀಡುತ್ತಿದ್ದಾರೆ. ಈ ಮಧ್ಯೆ ಜೂನಿಯರ್ ಎನ್​ಟಿಆರ್​ ಅವರು ಕುಟುಂಬದ ಜೊತೆ ಜಪಾನ್​ಗೆ ತೆರಳಿದ್ದರು. ಅಲ್ಲಿ ಭೂಕಂಪ ಆದ ಬಳಿಕ ಅವರು ಭಾರತಕ್ಕೆ ಮರಳಿದ್ದಾರೆ. ಈ ವಿಚಾರವನ್ನು ಅವರು ಹಂಚಿಕೊಂಡಿದ್ದಾರೆ.

ಜೂನಿಯರ್​ ಎನ್​ಟಿಆರ್ ಅವರು ಕ್ರಿಸ್​​ಮಸ್ ಸಂದರ್ಭದಲ್ಲಿ ಜಪಾನ್​ಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿ ಭೂಕಂಪ ಸಂಭವಿಸಿದೆ. ಇದು ಜೂನಿಯರ್ ಎನ್​ಟಿಆರ್ ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿತ್ತು. ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಬರೆದುಕೊಂಡಿದ್ದರು. ಸುರಕ್ಷಿತವಾಗಿ ಭಾರತಕ್ಕೆ ಮರಳಿರುವುದಾಗಿ ತಾರಕ್ ಹೇಳಿದ್ದಾರೆ. ಇದರಿಂದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

‘ನಾವು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದೇವೆ. ಜಪಾನ್​ನಲ್ಲಿ ಭೂಕಂಪ ಆಗಿದ್ದು ಶಾಕಿಂಗ್ ಆಗಿದೆ. ನಾನು ಒಂದು ವಾರ ಅಲ್ಲಿಯೇ ಕಳೆದಿದ್ದೇನೆ. ಭೂಕಂಪದಿಂದ ಹಾನಿಗೆ ಒಳಗಾದವರ ಬಗ್ಗೆ ದುಃಖ ಇದೆ. ಅಲ್ಲಿನ ಜನ ಬೇಗ ಚೇತರಿಸಿಕೊಳ್ಳಲಿ. ದೃಢವಾಗಿರಿ ಜಪಾನ್’ ಎಂದು ಜೂನಿಯರ್ ಎನ್​ಟಿಆರ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಭಾರಿ ಉತ್ಸಾಹದಲ್ಲಿ ಪೋಸ್ಟರ್​ ಬಿಡುಗಡೆ ಮಾಡಿ ಟ್ರೋಲ್​ ಆದ ‘ದೇವರ’ ಚಿತ್ರತಂಡ

‘ದೇವರ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ಸೈಫ್ ಅಲಿ ಖಾನ್ ವಿಲನ್ ಆಗಿ ನಟಿಸುತ್ತಿದ್ದಾರೆ. ಜೂನಿಯರ್​ ಎನ್​ಟಿಆರ್​ಗೆ ಜೊತೆಯಾಗಿ ಜಾನ್ವಿ ಕಪೂರ್ ‘ದೇವರ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸಮುದ್ರದ ಹಿನ್ನೆಲೆಯಲ್ಲಿ ಚಿತ್ರದ ಕಥೆ ಸಾಗುತ್ತದೆ. ಈ ಚಿತ್ರದ ಗ್ಲಿಂಪ್ಸ್ ಜನವರಿ 8ರಂದು ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ