AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಸುರಕ್ಷಿತವಾಗಿ ಮರಳಿದ್ದೇನೆ’; ಜಪಾನ್​ನಿಂದ ಹಿಂದಿರುಗಿ ಟ್ವೀಟ್ ಮಾಡಿದ ಜೂ. ಎನ್​ಟಿಆರ್

ಜೂನಿಯರ್​ ಎನ್​ಟಿಆರ್ ಅವರು ಕ್ರಿಸ್​​ಮಸ್ ಸಂದರ್ಭದಲ್ಲಿ ಜಪಾನ್​ಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿ ಭೂಕಂಪ ಸಂಭವಿಸಿದೆ. ಇದು ಜೂನಿಯರ್ ಎನ್​ಟಿಆರ್ ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿತ್ತು.

‘ನಾನು ಸುರಕ್ಷಿತವಾಗಿ ಮರಳಿದ್ದೇನೆ’; ಜಪಾನ್​ನಿಂದ ಹಿಂದಿರುಗಿ ಟ್ವೀಟ್ ಮಾಡಿದ ಜೂ. ಎನ್​ಟಿಆರ್
ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Jan 02, 2024 | 2:19 PM

Share

ಜೂನಿಯರ್​ ಎನ್​ಟಿಆರ್ (Jr NTR) ಅವರು ಸದ್ಯ ಕೊರಟಾಲ ಶಿವ ನಿರ್ದೇಶನದ ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ‘ಆರ್​ಆರ್​ಆರ್’ ಸಿನಿಮಾದ ಬಳಿಕ ಈ ಸಿನಿಮಾದಲ್ಲಿ ನಟಿಸುತ್ತಿರುವುದರಿಂದ ಭಾರೀ ನಿರೀಕ್ಷೆಗಳಿವೆ. ಈ ಚಿತ್ರದ ಬಗ್ಗೆ ನಿರ್ಮಾಪಕರು ಈಗಾಗಲೇ ಹಲವು ಅಪ್‌ಡೇಟ್‌ಗಳನ್ನು ನೀಡುತ್ತಿದ್ದಾರೆ. ಈ ಮಧ್ಯೆ ಜೂನಿಯರ್ ಎನ್​ಟಿಆರ್​ ಅವರು ಕುಟುಂಬದ ಜೊತೆ ಜಪಾನ್​ಗೆ ತೆರಳಿದ್ದರು. ಅಲ್ಲಿ ಭೂಕಂಪ ಆದ ಬಳಿಕ ಅವರು ಭಾರತಕ್ಕೆ ಮರಳಿದ್ದಾರೆ. ಈ ವಿಚಾರವನ್ನು ಅವರು ಹಂಚಿಕೊಂಡಿದ್ದಾರೆ.

ಜೂನಿಯರ್​ ಎನ್​ಟಿಆರ್ ಅವರು ಕ್ರಿಸ್​​ಮಸ್ ಸಂದರ್ಭದಲ್ಲಿ ಜಪಾನ್​ಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿ ಭೂಕಂಪ ಸಂಭವಿಸಿದೆ. ಇದು ಜೂನಿಯರ್ ಎನ್​ಟಿಆರ್ ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿತ್ತು. ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಬರೆದುಕೊಂಡಿದ್ದರು. ಸುರಕ್ಷಿತವಾಗಿ ಭಾರತಕ್ಕೆ ಮರಳಿರುವುದಾಗಿ ತಾರಕ್ ಹೇಳಿದ್ದಾರೆ. ಇದರಿಂದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

‘ನಾವು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದೇವೆ. ಜಪಾನ್​ನಲ್ಲಿ ಭೂಕಂಪ ಆಗಿದ್ದು ಶಾಕಿಂಗ್ ಆಗಿದೆ. ನಾನು ಒಂದು ವಾರ ಅಲ್ಲಿಯೇ ಕಳೆದಿದ್ದೇನೆ. ಭೂಕಂಪದಿಂದ ಹಾನಿಗೆ ಒಳಗಾದವರ ಬಗ್ಗೆ ದುಃಖ ಇದೆ. ಅಲ್ಲಿನ ಜನ ಬೇಗ ಚೇತರಿಸಿಕೊಳ್ಳಲಿ. ದೃಢವಾಗಿರಿ ಜಪಾನ್’ ಎಂದು ಜೂನಿಯರ್ ಎನ್​ಟಿಆರ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಭಾರಿ ಉತ್ಸಾಹದಲ್ಲಿ ಪೋಸ್ಟರ್​ ಬಿಡುಗಡೆ ಮಾಡಿ ಟ್ರೋಲ್​ ಆದ ‘ದೇವರ’ ಚಿತ್ರತಂಡ

‘ದೇವರ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ಸೈಫ್ ಅಲಿ ಖಾನ್ ವಿಲನ್ ಆಗಿ ನಟಿಸುತ್ತಿದ್ದಾರೆ. ಜೂನಿಯರ್​ ಎನ್​ಟಿಆರ್​ಗೆ ಜೊತೆಯಾಗಿ ಜಾನ್ವಿ ಕಪೂರ್ ‘ದೇವರ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸಮುದ್ರದ ಹಿನ್ನೆಲೆಯಲ್ಲಿ ಚಿತ್ರದ ಕಥೆ ಸಾಗುತ್ತದೆ. ಈ ಚಿತ್ರದ ಗ್ಲಿಂಪ್ಸ್ ಜನವರಿ 8ರಂದು ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ