AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಸುರಕ್ಷಿತವಾಗಿ ಮರಳಿದ್ದೇನೆ’; ಜಪಾನ್​ನಿಂದ ಹಿಂದಿರುಗಿ ಟ್ವೀಟ್ ಮಾಡಿದ ಜೂ. ಎನ್​ಟಿಆರ್

ಜೂನಿಯರ್​ ಎನ್​ಟಿಆರ್ ಅವರು ಕ್ರಿಸ್​​ಮಸ್ ಸಂದರ್ಭದಲ್ಲಿ ಜಪಾನ್​ಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿ ಭೂಕಂಪ ಸಂಭವಿಸಿದೆ. ಇದು ಜೂನಿಯರ್ ಎನ್​ಟಿಆರ್ ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿತ್ತು.

‘ನಾನು ಸುರಕ್ಷಿತವಾಗಿ ಮರಳಿದ್ದೇನೆ’; ಜಪಾನ್​ನಿಂದ ಹಿಂದಿರುಗಿ ಟ್ವೀಟ್ ಮಾಡಿದ ಜೂ. ಎನ್​ಟಿಆರ್
ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Jan 02, 2024 | 2:19 PM

Share

ಜೂನಿಯರ್​ ಎನ್​ಟಿಆರ್ (Jr NTR) ಅವರು ಸದ್ಯ ಕೊರಟಾಲ ಶಿವ ನಿರ್ದೇಶನದ ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ‘ಆರ್​ಆರ್​ಆರ್’ ಸಿನಿಮಾದ ಬಳಿಕ ಈ ಸಿನಿಮಾದಲ್ಲಿ ನಟಿಸುತ್ತಿರುವುದರಿಂದ ಭಾರೀ ನಿರೀಕ್ಷೆಗಳಿವೆ. ಈ ಚಿತ್ರದ ಬಗ್ಗೆ ನಿರ್ಮಾಪಕರು ಈಗಾಗಲೇ ಹಲವು ಅಪ್‌ಡೇಟ್‌ಗಳನ್ನು ನೀಡುತ್ತಿದ್ದಾರೆ. ಈ ಮಧ್ಯೆ ಜೂನಿಯರ್ ಎನ್​ಟಿಆರ್​ ಅವರು ಕುಟುಂಬದ ಜೊತೆ ಜಪಾನ್​ಗೆ ತೆರಳಿದ್ದರು. ಅಲ್ಲಿ ಭೂಕಂಪ ಆದ ಬಳಿಕ ಅವರು ಭಾರತಕ್ಕೆ ಮರಳಿದ್ದಾರೆ. ಈ ವಿಚಾರವನ್ನು ಅವರು ಹಂಚಿಕೊಂಡಿದ್ದಾರೆ.

ಜೂನಿಯರ್​ ಎನ್​ಟಿಆರ್ ಅವರು ಕ್ರಿಸ್​​ಮಸ್ ಸಂದರ್ಭದಲ್ಲಿ ಜಪಾನ್​ಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿ ಭೂಕಂಪ ಸಂಭವಿಸಿದೆ. ಇದು ಜೂನಿಯರ್ ಎನ್​ಟಿಆರ್ ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿತ್ತು. ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಬರೆದುಕೊಂಡಿದ್ದರು. ಸುರಕ್ಷಿತವಾಗಿ ಭಾರತಕ್ಕೆ ಮರಳಿರುವುದಾಗಿ ತಾರಕ್ ಹೇಳಿದ್ದಾರೆ. ಇದರಿಂದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

‘ನಾವು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದೇವೆ. ಜಪಾನ್​ನಲ್ಲಿ ಭೂಕಂಪ ಆಗಿದ್ದು ಶಾಕಿಂಗ್ ಆಗಿದೆ. ನಾನು ಒಂದು ವಾರ ಅಲ್ಲಿಯೇ ಕಳೆದಿದ್ದೇನೆ. ಭೂಕಂಪದಿಂದ ಹಾನಿಗೆ ಒಳಗಾದವರ ಬಗ್ಗೆ ದುಃಖ ಇದೆ. ಅಲ್ಲಿನ ಜನ ಬೇಗ ಚೇತರಿಸಿಕೊಳ್ಳಲಿ. ದೃಢವಾಗಿರಿ ಜಪಾನ್’ ಎಂದು ಜೂನಿಯರ್ ಎನ್​ಟಿಆರ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಭಾರಿ ಉತ್ಸಾಹದಲ್ಲಿ ಪೋಸ್ಟರ್​ ಬಿಡುಗಡೆ ಮಾಡಿ ಟ್ರೋಲ್​ ಆದ ‘ದೇವರ’ ಚಿತ್ರತಂಡ

‘ದೇವರ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ಸೈಫ್ ಅಲಿ ಖಾನ್ ವಿಲನ್ ಆಗಿ ನಟಿಸುತ್ತಿದ್ದಾರೆ. ಜೂನಿಯರ್​ ಎನ್​ಟಿಆರ್​ಗೆ ಜೊತೆಯಾಗಿ ಜಾನ್ವಿ ಕಪೂರ್ ‘ದೇವರ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸಮುದ್ರದ ಹಿನ್ನೆಲೆಯಲ್ಲಿ ಚಿತ್ರದ ಕಥೆ ಸಾಗುತ್ತದೆ. ಈ ಚಿತ್ರದ ಗ್ಲಿಂಪ್ಸ್ ಜನವರಿ 8ರಂದು ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ