Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಸುರಕ್ಷಿತವಾಗಿ ಮರಳಿದ್ದೇನೆ’; ಜಪಾನ್​ನಿಂದ ಹಿಂದಿರುಗಿ ಟ್ವೀಟ್ ಮಾಡಿದ ಜೂ. ಎನ್​ಟಿಆರ್

ಜೂನಿಯರ್​ ಎನ್​ಟಿಆರ್ ಅವರು ಕ್ರಿಸ್​​ಮಸ್ ಸಂದರ್ಭದಲ್ಲಿ ಜಪಾನ್​ಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿ ಭೂಕಂಪ ಸಂಭವಿಸಿದೆ. ಇದು ಜೂನಿಯರ್ ಎನ್​ಟಿಆರ್ ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿತ್ತು.

‘ನಾನು ಸುರಕ್ಷಿತವಾಗಿ ಮರಳಿದ್ದೇನೆ’; ಜಪಾನ್​ನಿಂದ ಹಿಂದಿರುಗಿ ಟ್ವೀಟ್ ಮಾಡಿದ ಜೂ. ಎನ್​ಟಿಆರ್
ಜೂನಿಯರ್ ಎನ್​ಟಿಆರ್
Follow us
ರಾಜೇಶ್ ದುಗ್ಗುಮನೆ
|

Updated on: Jan 02, 2024 | 2:19 PM

ಜೂನಿಯರ್​ ಎನ್​ಟಿಆರ್ (Jr NTR) ಅವರು ಸದ್ಯ ಕೊರಟಾಲ ಶಿವ ನಿರ್ದೇಶನದ ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ‘ಆರ್​ಆರ್​ಆರ್’ ಸಿನಿಮಾದ ಬಳಿಕ ಈ ಸಿನಿಮಾದಲ್ಲಿ ನಟಿಸುತ್ತಿರುವುದರಿಂದ ಭಾರೀ ನಿರೀಕ್ಷೆಗಳಿವೆ. ಈ ಚಿತ್ರದ ಬಗ್ಗೆ ನಿರ್ಮಾಪಕರು ಈಗಾಗಲೇ ಹಲವು ಅಪ್‌ಡೇಟ್‌ಗಳನ್ನು ನೀಡುತ್ತಿದ್ದಾರೆ. ಈ ಮಧ್ಯೆ ಜೂನಿಯರ್ ಎನ್​ಟಿಆರ್​ ಅವರು ಕುಟುಂಬದ ಜೊತೆ ಜಪಾನ್​ಗೆ ತೆರಳಿದ್ದರು. ಅಲ್ಲಿ ಭೂಕಂಪ ಆದ ಬಳಿಕ ಅವರು ಭಾರತಕ್ಕೆ ಮರಳಿದ್ದಾರೆ. ಈ ವಿಚಾರವನ್ನು ಅವರು ಹಂಚಿಕೊಂಡಿದ್ದಾರೆ.

ಜೂನಿಯರ್​ ಎನ್​ಟಿಆರ್ ಅವರು ಕ್ರಿಸ್​​ಮಸ್ ಸಂದರ್ಭದಲ್ಲಿ ಜಪಾನ್​ಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿ ಭೂಕಂಪ ಸಂಭವಿಸಿದೆ. ಇದು ಜೂನಿಯರ್ ಎನ್​ಟಿಆರ್ ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿತ್ತು. ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಬರೆದುಕೊಂಡಿದ್ದರು. ಸುರಕ್ಷಿತವಾಗಿ ಭಾರತಕ್ಕೆ ಮರಳಿರುವುದಾಗಿ ತಾರಕ್ ಹೇಳಿದ್ದಾರೆ. ಇದರಿಂದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

‘ನಾವು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದೇವೆ. ಜಪಾನ್​ನಲ್ಲಿ ಭೂಕಂಪ ಆಗಿದ್ದು ಶಾಕಿಂಗ್ ಆಗಿದೆ. ನಾನು ಒಂದು ವಾರ ಅಲ್ಲಿಯೇ ಕಳೆದಿದ್ದೇನೆ. ಭೂಕಂಪದಿಂದ ಹಾನಿಗೆ ಒಳಗಾದವರ ಬಗ್ಗೆ ದುಃಖ ಇದೆ. ಅಲ್ಲಿನ ಜನ ಬೇಗ ಚೇತರಿಸಿಕೊಳ್ಳಲಿ. ದೃಢವಾಗಿರಿ ಜಪಾನ್’ ಎಂದು ಜೂನಿಯರ್ ಎನ್​ಟಿಆರ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಭಾರಿ ಉತ್ಸಾಹದಲ್ಲಿ ಪೋಸ್ಟರ್​ ಬಿಡುಗಡೆ ಮಾಡಿ ಟ್ರೋಲ್​ ಆದ ‘ದೇವರ’ ಚಿತ್ರತಂಡ

‘ದೇವರ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ಸೈಫ್ ಅಲಿ ಖಾನ್ ವಿಲನ್ ಆಗಿ ನಟಿಸುತ್ತಿದ್ದಾರೆ. ಜೂನಿಯರ್​ ಎನ್​ಟಿಆರ್​ಗೆ ಜೊತೆಯಾಗಿ ಜಾನ್ವಿ ಕಪೂರ್ ‘ದೇವರ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸಮುದ್ರದ ಹಿನ್ನೆಲೆಯಲ್ಲಿ ಚಿತ್ರದ ಕಥೆ ಸಾಗುತ್ತದೆ. ಈ ಚಿತ್ರದ ಗ್ಲಿಂಪ್ಸ್ ಜನವರಿ 8ರಂದು ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ