AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಸುರಕ್ಷಿತವಾಗಿ ಮರಳಿದ್ದೇನೆ’; ಜಪಾನ್​ನಿಂದ ಹಿಂದಿರುಗಿ ಟ್ವೀಟ್ ಮಾಡಿದ ಜೂ. ಎನ್​ಟಿಆರ್

ಜೂನಿಯರ್​ ಎನ್​ಟಿಆರ್ ಅವರು ಕ್ರಿಸ್​​ಮಸ್ ಸಂದರ್ಭದಲ್ಲಿ ಜಪಾನ್​ಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿ ಭೂಕಂಪ ಸಂಭವಿಸಿದೆ. ಇದು ಜೂನಿಯರ್ ಎನ್​ಟಿಆರ್ ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿತ್ತು.

‘ನಾನು ಸುರಕ್ಷಿತವಾಗಿ ಮರಳಿದ್ದೇನೆ’; ಜಪಾನ್​ನಿಂದ ಹಿಂದಿರುಗಿ ಟ್ವೀಟ್ ಮಾಡಿದ ಜೂ. ಎನ್​ಟಿಆರ್
ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Jan 02, 2024 | 2:19 PM

Share

ಜೂನಿಯರ್​ ಎನ್​ಟಿಆರ್ (Jr NTR) ಅವರು ಸದ್ಯ ಕೊರಟಾಲ ಶಿವ ನಿರ್ದೇಶನದ ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ‘ಆರ್​ಆರ್​ಆರ್’ ಸಿನಿಮಾದ ಬಳಿಕ ಈ ಸಿನಿಮಾದಲ್ಲಿ ನಟಿಸುತ್ತಿರುವುದರಿಂದ ಭಾರೀ ನಿರೀಕ್ಷೆಗಳಿವೆ. ಈ ಚಿತ್ರದ ಬಗ್ಗೆ ನಿರ್ಮಾಪಕರು ಈಗಾಗಲೇ ಹಲವು ಅಪ್‌ಡೇಟ್‌ಗಳನ್ನು ನೀಡುತ್ತಿದ್ದಾರೆ. ಈ ಮಧ್ಯೆ ಜೂನಿಯರ್ ಎನ್​ಟಿಆರ್​ ಅವರು ಕುಟುಂಬದ ಜೊತೆ ಜಪಾನ್​ಗೆ ತೆರಳಿದ್ದರು. ಅಲ್ಲಿ ಭೂಕಂಪ ಆದ ಬಳಿಕ ಅವರು ಭಾರತಕ್ಕೆ ಮರಳಿದ್ದಾರೆ. ಈ ವಿಚಾರವನ್ನು ಅವರು ಹಂಚಿಕೊಂಡಿದ್ದಾರೆ.

ಜೂನಿಯರ್​ ಎನ್​ಟಿಆರ್ ಅವರು ಕ್ರಿಸ್​​ಮಸ್ ಸಂದರ್ಭದಲ್ಲಿ ಜಪಾನ್​ಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿ ಭೂಕಂಪ ಸಂಭವಿಸಿದೆ. ಇದು ಜೂನಿಯರ್ ಎನ್​ಟಿಆರ್ ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿತ್ತು. ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಬರೆದುಕೊಂಡಿದ್ದರು. ಸುರಕ್ಷಿತವಾಗಿ ಭಾರತಕ್ಕೆ ಮರಳಿರುವುದಾಗಿ ತಾರಕ್ ಹೇಳಿದ್ದಾರೆ. ಇದರಿಂದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

‘ನಾವು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದೇವೆ. ಜಪಾನ್​ನಲ್ಲಿ ಭೂಕಂಪ ಆಗಿದ್ದು ಶಾಕಿಂಗ್ ಆಗಿದೆ. ನಾನು ಒಂದು ವಾರ ಅಲ್ಲಿಯೇ ಕಳೆದಿದ್ದೇನೆ. ಭೂಕಂಪದಿಂದ ಹಾನಿಗೆ ಒಳಗಾದವರ ಬಗ್ಗೆ ದುಃಖ ಇದೆ. ಅಲ್ಲಿನ ಜನ ಬೇಗ ಚೇತರಿಸಿಕೊಳ್ಳಲಿ. ದೃಢವಾಗಿರಿ ಜಪಾನ್’ ಎಂದು ಜೂನಿಯರ್ ಎನ್​ಟಿಆರ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಭಾರಿ ಉತ್ಸಾಹದಲ್ಲಿ ಪೋಸ್ಟರ್​ ಬಿಡುಗಡೆ ಮಾಡಿ ಟ್ರೋಲ್​ ಆದ ‘ದೇವರ’ ಚಿತ್ರತಂಡ

‘ದೇವರ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ಸೈಫ್ ಅಲಿ ಖಾನ್ ವಿಲನ್ ಆಗಿ ನಟಿಸುತ್ತಿದ್ದಾರೆ. ಜೂನಿಯರ್​ ಎನ್​ಟಿಆರ್​ಗೆ ಜೊತೆಯಾಗಿ ಜಾನ್ವಿ ಕಪೂರ್ ‘ದೇವರ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸಮುದ್ರದ ಹಿನ್ನೆಲೆಯಲ್ಲಿ ಚಿತ್ರದ ಕಥೆ ಸಾಗುತ್ತದೆ. ಈ ಚಿತ್ರದ ಗ್ಲಿಂಪ್ಸ್ ಜನವರಿ 8ರಂದು ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ