ಸಿನಿಮಾ ತೊರೆದು ರಾಜಕೀಯಕ್ಕೆ ಹೊರಳಲಿದ್ದಾರೆ ಜೂ.ಎನ್​ಟಿಆರ್​? ನಟನಿಗೆ ಬಂತು ಆಹ್ವಾನ

Jr. NTR: ಜೂ.ಎನ್​ಟಿಆರ್​ ಸೋದರ ಸಂಬಂಧಿ, ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರು ಜೂ.ಎನ್​ಟಿಆರ್​ ಚುನಾವಣೆಗೆ ಬರಬೇಕು ಎನ್ನುವ ಆಹ್ವಾನ ನೀಡಿದ್ದಾರೆ.

ಸಿನಿಮಾ ತೊರೆದು ರಾಜಕೀಯಕ್ಕೆ ಹೊರಳಲಿದ್ದಾರೆ ಜೂ.ಎನ್​ಟಿಆರ್​? ನಟನಿಗೆ ಬಂತು ಆಹ್ವಾನ
ಜೂ.ಎನ್​ಟಿಆರ್​
Follow us
|

Updated on:Feb 25, 2023 | 11:32 AM

ರಾಜಕೀಯಕ್ಕೂ ಸಿನಿಮಾ ರಂಗಕ್ಕೂ ಎಲ್ಲಿಲ್ಲದ ನಂಟು. ಅನೇಕ ಹೀರೋಗಳು ಸಿನಿಮಾದಲ್ಲಿ ಖ್ಯಾತಿ ಪಡೆದ ನಂತರ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ. ಅದೇ ರೀತಿ ರಾಜಕಾರಣಿಗಳ ಮಕ್ಕಳು ಚಿತ್ರರಂಗದಲ್ಲಿ ತಮ್ಮ ಅದೃಷ್ಟಪರೀಕ್ಷೆಗೆ ಮುಂದಾಗುತ್ತಾರೆ. ಈಗ ಜೂ.ಎನ್​ಟಿಆರ್ (Jr. NTR) ಅವರು ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಳ್ಳಲಿದ್ದಾರೆಯೇ ಎನ್ನುವ ಪ್ರಶ್ನೆ ಮೂಡಿದೆ. ಅವರಿಗೆ ಹಲವು ರಾಜಕೀಯ ಮುಖಂಡರಿಂದ ಆಹ್ವಾನ ಬಂದಿರೋದು ಈ ಅನುಮಾನ ಹುಟ್ಟಿಕೊಳ್ಳಲು ಕಾರಣ. ಒಂದೊಮ್ಮೆ ಅವರು ಸಿನಿಮಾ ರಂಗ (Cinema Industry) ತೊರೆದರೆ ಸಿನಿಪ್ರಿಯರಿ​ಗೆ ಬೇಸರ ಆಗೋದು ಗ್ಯಾರಂಟಿ.

ಜೂ.ಎನ್​ಟಿಆರ್​ಗೂ ರಾಜಕೀಯಕ್ಕೂ ಮೊದಲಿನಿಂದಲೂ ನಂಟಿದೆ. 2009ರಲ್ಲಿ ಅವರು ರಾಜಕೀಯದ ಕಡೆ ಒಲವು ತೋರಿದ್ದರು. 2009ರ ಲೋಕಸಭೆ ಚುನಾವಣೆಯಲ್ಲಿ ಜೂ.ಎನ್​ಟಿಆರ್ ಆಂಧ್ರಪ್ರದೇಶದಲ್ಲಿ ಪ್ರಚಾರ ನಡೆಸಿದ್ದರು. ಈ ವೇಳೆ ಜೂ.ಎನ್​ಟಿಆರ್ ಅವರು ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಳ್ಳಬೇಕು ಎಂದು ಟಿಡಿಪಿ ಬೆಂಬಲಿಗರು ಹಾಗೂ ಫ್ಯಾನ್ಸ್ ಕೋರಿದ್ದರು. ಆದರೆ, ಅದು ಸಾಧ್ಯವಾಗಿಲ್ಲ. ಈಗ ಮತ್ತೆ ಈ ಕೂಗು ಜೋರಾಗಿದೆ.

ಜೂ.ಎನ್​ಟಿಆರ್​ ಸೋದರ ಸಂಬಂಧಿ, ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರು ಜೂ.ಎನ್​ಟಿಆರ್​ ಚುನಾವಣೆಗೆ ಬರಬೇಕು ಎನ್ನುವ ಆಹ್ವಾನ ನೀಡಿದ್ದಾರೆ. ತಿರುಪತಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಜೂ.ಎನ್​ಟಿಆರ್​ಗೆ ಆಹ್ವಾನ ನೀಡಿದ್ದಾರೆ.

ಇದನ್ನೂ ಓದಿ
Image
‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​
Image
ಪ್ರೀತಿ ಜಿಂಟಾ ಮುಂದೆ ಸೈಫ್​ ಅಲಿ ಖಾನ್​ ಸ್ಟಂಟ್​ ಎಡವಟ್ಟು​; ಸತ್ತು ಹೋಗ್ತಾರೆ ಅಂತ ಭಾವಿಸಿದ್ದ ನಟಿ
Image
ಗಣೇಶನಿಗೆ ಕೈ ಮುಗಿದ ಸೈಫ್​ ಅಲಿ ಖಾನ್​ ವಿರುದ್ಧ ಒಂದು ವರ್ಗದ ನೆಟ್ಟಿಗರು ಗರಂ; ಹಬ್ಬದ ನಡುವೆ ಟ್ರೋಲ್​​
Image
‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​

‘ಆಂಧ್ರಪ್ರದೇಶದ ರಾಜಕೀಯದಲ್ಲಿ ಬದಲಾವಣೆಯನ್ನು ನೋಡಲು ಬಯಸುವ ಹಾಗೂ ದೇಶದ ರಾಜಕೀಯದಲ್ಲಿ ನಮ್ಮ ರಾಜ್ಯವೇ ಪ್ರಮುಖವಾಗಬೇಕು ಎಂದು ಬಯಸುವ ಯಾರನ್ನಾದರೂ ನಾನು ನಮ್ಮ ಪಕ್ಷಕ್ಕೆ ಸ್ವಾಗತಿಸುತ್ತೇನೆ. ಜೂ. ಎನ್‌ಟಿಆರ್ ಅವರನ್ನು ಸಕ್ರಿಯ ರಾಜಕೀಯಕ್ಕೆ ಸ್ವಾಗತಿಸುತ್ತೇನೆ’ ಎಂದು ನಾರಾ ಲೋಕೇಶ್ ಹೇಳುತ್ತಿದ್ದಂತೆ ಜನರಿಂದ ಚಪ್ಪಾಳೆಗಳು ಬಂದವು.

ಇದನ್ನೂ ಓದಿ: ನಂದಮೂರಿ ಕುಟುಂಬದಲ್ಲಿ ಸೂತಕದ ಛಾಯೆ; ಆಸ್ಕರ್​ಗಾಗಿ ಜೂ.ಎನ್​ಟಿಆರ್​ ಅಮೆರಿಕಕ್ಕೆ ತೆರಳುವುದು ಮತ್ತಷ್ಟು ವಿಳಂಬ  

2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್​’ ಚಿತ್ರದ ಗೆಲುವಿನ ಖುಷಿ ಜೂ.ಎನ್​ಟಿಆರ್​ಗೆ ಇನ್ನೂ ಕಡಿಮೆ ಆಗಿಲ್ಲ. ಈ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್​ ರೇಸ್​ನಲ್ಲಿದೆ. ಇದಕ್ಕಾಗಿ ರಾಮ್ ಚರಣ್ ಹಾಗೂ ಎಸ್​.ಎಸ್​. ರಾಜಮೌಳಿ ಅವರು ಅಮೆರಿಕಕ್ಕೆ ತೆರಳಿದ್ದಾರೆ. ನಂದಮೂರಿ ತಾರಕ ರತ್ನ ನಿಧನ ಹಿನ್ನೆಲೆಯಲ್ಲಿ ಜೂ.ಎನ್​ಟಿಆರ್​ ಅವರು ಅಮೆರಿಕ ತೆರಳೋದು ವಿಳಂಬ ಆಗುತ್ತಿದೆ. ಜೂ.ಎನ್​ಟಿಆರ್ ಅವರ ಮುಂದಿನ ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಕೆಲಸಗಳು ಪೂರ್ಣಗೊಳ್ಳುತ್ತಿದ್ದಂತೆ ಜೂ.ಎನ್​ಟಿಆರ್ ಅವರು ಪ್ರಶಾಂತ್ ನೀಲ್ ಜೊತೆ ಕೈ ಜೋಡಿಸಲಿದ್ದಾರೆ. ಎರಡೂ ಚಿತ್ರಗಳ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:12 am, Sat, 25 February 23

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ