AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ತೊರೆದು ರಾಜಕೀಯಕ್ಕೆ ಹೊರಳಲಿದ್ದಾರೆ ಜೂ.ಎನ್​ಟಿಆರ್​? ನಟನಿಗೆ ಬಂತು ಆಹ್ವಾನ

Jr. NTR: ಜೂ.ಎನ್​ಟಿಆರ್​ ಸೋದರ ಸಂಬಂಧಿ, ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರು ಜೂ.ಎನ್​ಟಿಆರ್​ ಚುನಾವಣೆಗೆ ಬರಬೇಕು ಎನ್ನುವ ಆಹ್ವಾನ ನೀಡಿದ್ದಾರೆ.

ಸಿನಿಮಾ ತೊರೆದು ರಾಜಕೀಯಕ್ಕೆ ಹೊರಳಲಿದ್ದಾರೆ ಜೂ.ಎನ್​ಟಿಆರ್​? ನಟನಿಗೆ ಬಂತು ಆಹ್ವಾನ
ಜೂ.ಎನ್​ಟಿಆರ್​
ರಾಜೇಶ್ ದುಗ್ಗುಮನೆ
|

Updated on:Feb 25, 2023 | 11:32 AM

Share

ರಾಜಕೀಯಕ್ಕೂ ಸಿನಿಮಾ ರಂಗಕ್ಕೂ ಎಲ್ಲಿಲ್ಲದ ನಂಟು. ಅನೇಕ ಹೀರೋಗಳು ಸಿನಿಮಾದಲ್ಲಿ ಖ್ಯಾತಿ ಪಡೆದ ನಂತರ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ. ಅದೇ ರೀತಿ ರಾಜಕಾರಣಿಗಳ ಮಕ್ಕಳು ಚಿತ್ರರಂಗದಲ್ಲಿ ತಮ್ಮ ಅದೃಷ್ಟಪರೀಕ್ಷೆಗೆ ಮುಂದಾಗುತ್ತಾರೆ. ಈಗ ಜೂ.ಎನ್​ಟಿಆರ್ (Jr. NTR) ಅವರು ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಳ್ಳಲಿದ್ದಾರೆಯೇ ಎನ್ನುವ ಪ್ರಶ್ನೆ ಮೂಡಿದೆ. ಅವರಿಗೆ ಹಲವು ರಾಜಕೀಯ ಮುಖಂಡರಿಂದ ಆಹ್ವಾನ ಬಂದಿರೋದು ಈ ಅನುಮಾನ ಹುಟ್ಟಿಕೊಳ್ಳಲು ಕಾರಣ. ಒಂದೊಮ್ಮೆ ಅವರು ಸಿನಿಮಾ ರಂಗ (Cinema Industry) ತೊರೆದರೆ ಸಿನಿಪ್ರಿಯರಿ​ಗೆ ಬೇಸರ ಆಗೋದು ಗ್ಯಾರಂಟಿ.

ಜೂ.ಎನ್​ಟಿಆರ್​ಗೂ ರಾಜಕೀಯಕ್ಕೂ ಮೊದಲಿನಿಂದಲೂ ನಂಟಿದೆ. 2009ರಲ್ಲಿ ಅವರು ರಾಜಕೀಯದ ಕಡೆ ಒಲವು ತೋರಿದ್ದರು. 2009ರ ಲೋಕಸಭೆ ಚುನಾವಣೆಯಲ್ಲಿ ಜೂ.ಎನ್​ಟಿಆರ್ ಆಂಧ್ರಪ್ರದೇಶದಲ್ಲಿ ಪ್ರಚಾರ ನಡೆಸಿದ್ದರು. ಈ ವೇಳೆ ಜೂ.ಎನ್​ಟಿಆರ್ ಅವರು ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಳ್ಳಬೇಕು ಎಂದು ಟಿಡಿಪಿ ಬೆಂಬಲಿಗರು ಹಾಗೂ ಫ್ಯಾನ್ಸ್ ಕೋರಿದ್ದರು. ಆದರೆ, ಅದು ಸಾಧ್ಯವಾಗಿಲ್ಲ. ಈಗ ಮತ್ತೆ ಈ ಕೂಗು ಜೋರಾಗಿದೆ.

ಜೂ.ಎನ್​ಟಿಆರ್​ ಸೋದರ ಸಂಬಂಧಿ, ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರು ಜೂ.ಎನ್​ಟಿಆರ್​ ಚುನಾವಣೆಗೆ ಬರಬೇಕು ಎನ್ನುವ ಆಹ್ವಾನ ನೀಡಿದ್ದಾರೆ. ತಿರುಪತಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಜೂ.ಎನ್​ಟಿಆರ್​ಗೆ ಆಹ್ವಾನ ನೀಡಿದ್ದಾರೆ.

ಇದನ್ನೂ ಓದಿ
Image
‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​
Image
ಪ್ರೀತಿ ಜಿಂಟಾ ಮುಂದೆ ಸೈಫ್​ ಅಲಿ ಖಾನ್​ ಸ್ಟಂಟ್​ ಎಡವಟ್ಟು​; ಸತ್ತು ಹೋಗ್ತಾರೆ ಅಂತ ಭಾವಿಸಿದ್ದ ನಟಿ
Image
ಗಣೇಶನಿಗೆ ಕೈ ಮುಗಿದ ಸೈಫ್​ ಅಲಿ ಖಾನ್​ ವಿರುದ್ಧ ಒಂದು ವರ್ಗದ ನೆಟ್ಟಿಗರು ಗರಂ; ಹಬ್ಬದ ನಡುವೆ ಟ್ರೋಲ್​​
Image
‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​

‘ಆಂಧ್ರಪ್ರದೇಶದ ರಾಜಕೀಯದಲ್ಲಿ ಬದಲಾವಣೆಯನ್ನು ನೋಡಲು ಬಯಸುವ ಹಾಗೂ ದೇಶದ ರಾಜಕೀಯದಲ್ಲಿ ನಮ್ಮ ರಾಜ್ಯವೇ ಪ್ರಮುಖವಾಗಬೇಕು ಎಂದು ಬಯಸುವ ಯಾರನ್ನಾದರೂ ನಾನು ನಮ್ಮ ಪಕ್ಷಕ್ಕೆ ಸ್ವಾಗತಿಸುತ್ತೇನೆ. ಜೂ. ಎನ್‌ಟಿಆರ್ ಅವರನ್ನು ಸಕ್ರಿಯ ರಾಜಕೀಯಕ್ಕೆ ಸ್ವಾಗತಿಸುತ್ತೇನೆ’ ಎಂದು ನಾರಾ ಲೋಕೇಶ್ ಹೇಳುತ್ತಿದ್ದಂತೆ ಜನರಿಂದ ಚಪ್ಪಾಳೆಗಳು ಬಂದವು.

ಇದನ್ನೂ ಓದಿ: ನಂದಮೂರಿ ಕುಟುಂಬದಲ್ಲಿ ಸೂತಕದ ಛಾಯೆ; ಆಸ್ಕರ್​ಗಾಗಿ ಜೂ.ಎನ್​ಟಿಆರ್​ ಅಮೆರಿಕಕ್ಕೆ ತೆರಳುವುದು ಮತ್ತಷ್ಟು ವಿಳಂಬ  

2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್​’ ಚಿತ್ರದ ಗೆಲುವಿನ ಖುಷಿ ಜೂ.ಎನ್​ಟಿಆರ್​ಗೆ ಇನ್ನೂ ಕಡಿಮೆ ಆಗಿಲ್ಲ. ಈ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್​ ರೇಸ್​ನಲ್ಲಿದೆ. ಇದಕ್ಕಾಗಿ ರಾಮ್ ಚರಣ್ ಹಾಗೂ ಎಸ್​.ಎಸ್​. ರಾಜಮೌಳಿ ಅವರು ಅಮೆರಿಕಕ್ಕೆ ತೆರಳಿದ್ದಾರೆ. ನಂದಮೂರಿ ತಾರಕ ರತ್ನ ನಿಧನ ಹಿನ್ನೆಲೆಯಲ್ಲಿ ಜೂ.ಎನ್​ಟಿಆರ್​ ಅವರು ಅಮೆರಿಕ ತೆರಳೋದು ವಿಳಂಬ ಆಗುತ್ತಿದೆ. ಜೂ.ಎನ್​ಟಿಆರ್ ಅವರ ಮುಂದಿನ ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಕೆಲಸಗಳು ಪೂರ್ಣಗೊಳ್ಳುತ್ತಿದ್ದಂತೆ ಜೂ.ಎನ್​ಟಿಆರ್ ಅವರು ಪ್ರಶಾಂತ್ ನೀಲ್ ಜೊತೆ ಕೈ ಜೋಡಿಸಲಿದ್ದಾರೆ. ಎರಡೂ ಚಿತ್ರಗಳ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:12 am, Sat, 25 February 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ