AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ತೊರೆದು ರಾಜಕೀಯಕ್ಕೆ ಹೊರಳಲಿದ್ದಾರೆ ಜೂ.ಎನ್​ಟಿಆರ್​? ನಟನಿಗೆ ಬಂತು ಆಹ್ವಾನ

Jr. NTR: ಜೂ.ಎನ್​ಟಿಆರ್​ ಸೋದರ ಸಂಬಂಧಿ, ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರು ಜೂ.ಎನ್​ಟಿಆರ್​ ಚುನಾವಣೆಗೆ ಬರಬೇಕು ಎನ್ನುವ ಆಹ್ವಾನ ನೀಡಿದ್ದಾರೆ.

ಸಿನಿಮಾ ತೊರೆದು ರಾಜಕೀಯಕ್ಕೆ ಹೊರಳಲಿದ್ದಾರೆ ಜೂ.ಎನ್​ಟಿಆರ್​? ನಟನಿಗೆ ಬಂತು ಆಹ್ವಾನ
ಜೂ.ಎನ್​ಟಿಆರ್​
Follow us
ರಾಜೇಶ್ ದುಗ್ಗುಮನೆ
|

Updated on:Feb 25, 2023 | 11:32 AM

ರಾಜಕೀಯಕ್ಕೂ ಸಿನಿಮಾ ರಂಗಕ್ಕೂ ಎಲ್ಲಿಲ್ಲದ ನಂಟು. ಅನೇಕ ಹೀರೋಗಳು ಸಿನಿಮಾದಲ್ಲಿ ಖ್ಯಾತಿ ಪಡೆದ ನಂತರ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ. ಅದೇ ರೀತಿ ರಾಜಕಾರಣಿಗಳ ಮಕ್ಕಳು ಚಿತ್ರರಂಗದಲ್ಲಿ ತಮ್ಮ ಅದೃಷ್ಟಪರೀಕ್ಷೆಗೆ ಮುಂದಾಗುತ್ತಾರೆ. ಈಗ ಜೂ.ಎನ್​ಟಿಆರ್ (Jr. NTR) ಅವರು ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಳ್ಳಲಿದ್ದಾರೆಯೇ ಎನ್ನುವ ಪ್ರಶ್ನೆ ಮೂಡಿದೆ. ಅವರಿಗೆ ಹಲವು ರಾಜಕೀಯ ಮುಖಂಡರಿಂದ ಆಹ್ವಾನ ಬಂದಿರೋದು ಈ ಅನುಮಾನ ಹುಟ್ಟಿಕೊಳ್ಳಲು ಕಾರಣ. ಒಂದೊಮ್ಮೆ ಅವರು ಸಿನಿಮಾ ರಂಗ (Cinema Industry) ತೊರೆದರೆ ಸಿನಿಪ್ರಿಯರಿ​ಗೆ ಬೇಸರ ಆಗೋದು ಗ್ಯಾರಂಟಿ.

ಜೂ.ಎನ್​ಟಿಆರ್​ಗೂ ರಾಜಕೀಯಕ್ಕೂ ಮೊದಲಿನಿಂದಲೂ ನಂಟಿದೆ. 2009ರಲ್ಲಿ ಅವರು ರಾಜಕೀಯದ ಕಡೆ ಒಲವು ತೋರಿದ್ದರು. 2009ರ ಲೋಕಸಭೆ ಚುನಾವಣೆಯಲ್ಲಿ ಜೂ.ಎನ್​ಟಿಆರ್ ಆಂಧ್ರಪ್ರದೇಶದಲ್ಲಿ ಪ್ರಚಾರ ನಡೆಸಿದ್ದರು. ಈ ವೇಳೆ ಜೂ.ಎನ್​ಟಿಆರ್ ಅವರು ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಳ್ಳಬೇಕು ಎಂದು ಟಿಡಿಪಿ ಬೆಂಬಲಿಗರು ಹಾಗೂ ಫ್ಯಾನ್ಸ್ ಕೋರಿದ್ದರು. ಆದರೆ, ಅದು ಸಾಧ್ಯವಾಗಿಲ್ಲ. ಈಗ ಮತ್ತೆ ಈ ಕೂಗು ಜೋರಾಗಿದೆ.

ಜೂ.ಎನ್​ಟಿಆರ್​ ಸೋದರ ಸಂಬಂಧಿ, ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರು ಜೂ.ಎನ್​ಟಿಆರ್​ ಚುನಾವಣೆಗೆ ಬರಬೇಕು ಎನ್ನುವ ಆಹ್ವಾನ ನೀಡಿದ್ದಾರೆ. ತಿರುಪತಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಜೂ.ಎನ್​ಟಿಆರ್​ಗೆ ಆಹ್ವಾನ ನೀಡಿದ್ದಾರೆ.

ಇದನ್ನೂ ಓದಿ
Image
‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​
Image
ಪ್ರೀತಿ ಜಿಂಟಾ ಮುಂದೆ ಸೈಫ್​ ಅಲಿ ಖಾನ್​ ಸ್ಟಂಟ್​ ಎಡವಟ್ಟು​; ಸತ್ತು ಹೋಗ್ತಾರೆ ಅಂತ ಭಾವಿಸಿದ್ದ ನಟಿ
Image
ಗಣೇಶನಿಗೆ ಕೈ ಮುಗಿದ ಸೈಫ್​ ಅಲಿ ಖಾನ್​ ವಿರುದ್ಧ ಒಂದು ವರ್ಗದ ನೆಟ್ಟಿಗರು ಗರಂ; ಹಬ್ಬದ ನಡುವೆ ಟ್ರೋಲ್​​
Image
‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​

‘ಆಂಧ್ರಪ್ರದೇಶದ ರಾಜಕೀಯದಲ್ಲಿ ಬದಲಾವಣೆಯನ್ನು ನೋಡಲು ಬಯಸುವ ಹಾಗೂ ದೇಶದ ರಾಜಕೀಯದಲ್ಲಿ ನಮ್ಮ ರಾಜ್ಯವೇ ಪ್ರಮುಖವಾಗಬೇಕು ಎಂದು ಬಯಸುವ ಯಾರನ್ನಾದರೂ ನಾನು ನಮ್ಮ ಪಕ್ಷಕ್ಕೆ ಸ್ವಾಗತಿಸುತ್ತೇನೆ. ಜೂ. ಎನ್‌ಟಿಆರ್ ಅವರನ್ನು ಸಕ್ರಿಯ ರಾಜಕೀಯಕ್ಕೆ ಸ್ವಾಗತಿಸುತ್ತೇನೆ’ ಎಂದು ನಾರಾ ಲೋಕೇಶ್ ಹೇಳುತ್ತಿದ್ದಂತೆ ಜನರಿಂದ ಚಪ್ಪಾಳೆಗಳು ಬಂದವು.

ಇದನ್ನೂ ಓದಿ: ನಂದಮೂರಿ ಕುಟುಂಬದಲ್ಲಿ ಸೂತಕದ ಛಾಯೆ; ಆಸ್ಕರ್​ಗಾಗಿ ಜೂ.ಎನ್​ಟಿಆರ್​ ಅಮೆರಿಕಕ್ಕೆ ತೆರಳುವುದು ಮತ್ತಷ್ಟು ವಿಳಂಬ  

2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್​’ ಚಿತ್ರದ ಗೆಲುವಿನ ಖುಷಿ ಜೂ.ಎನ್​ಟಿಆರ್​ಗೆ ಇನ್ನೂ ಕಡಿಮೆ ಆಗಿಲ್ಲ. ಈ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್​ ರೇಸ್​ನಲ್ಲಿದೆ. ಇದಕ್ಕಾಗಿ ರಾಮ್ ಚರಣ್ ಹಾಗೂ ಎಸ್​.ಎಸ್​. ರಾಜಮೌಳಿ ಅವರು ಅಮೆರಿಕಕ್ಕೆ ತೆರಳಿದ್ದಾರೆ. ನಂದಮೂರಿ ತಾರಕ ರತ್ನ ನಿಧನ ಹಿನ್ನೆಲೆಯಲ್ಲಿ ಜೂ.ಎನ್​ಟಿಆರ್​ ಅವರು ಅಮೆರಿಕ ತೆರಳೋದು ವಿಳಂಬ ಆಗುತ್ತಿದೆ. ಜೂ.ಎನ್​ಟಿಆರ್ ಅವರ ಮುಂದಿನ ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಕೆಲಸಗಳು ಪೂರ್ಣಗೊಳ್ಳುತ್ತಿದ್ದಂತೆ ಜೂ.ಎನ್​ಟಿಆರ್ ಅವರು ಪ್ರಶಾಂತ್ ನೀಲ್ ಜೊತೆ ಕೈ ಜೋಡಿಸಲಿದ್ದಾರೆ. ಎರಡೂ ಚಿತ್ರಗಳ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:12 am, Sat, 25 February 23

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?