AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳು ತಳ್ಳಲು ಬಂದ ಬೌನ್ಸರ್​​ಗೆ ಸರಿಯಾಗಿ ಕ್ಲಾಸ್​ ತೆಗೆದುಕೊಂಡ ಜೂ.ಎನ್​ಟಿಆರ್

ಜೂನಿಯರ್ ಎನ್​​ಟಿಆರ್ ಹುಟ್ಟುಹಬ್ಬದಂದು ಅಭಿಮಾನಿಗಳೊಂದಿಗೆ ಭದ್ರತಾ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿದ್ದು, ಇದಕ್ಕೆ ತಾರಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಭಿಮಾನಿಗಳ ಪರ ನಿಂತು ದುರ್ವರ್ತನೆ ತೋರಿದ ಭದ್ರತಾ ಸಿಬ್ಬಂದಿಗೆ ಎಲ್ಲರೆದುರೇ ಕ್ಲಾಸ್ ತೆಗೆದುಕೊಂಡ ವಿಡಿಯೋ ವೈರಲ್ ಆಗಿದೆ. ಎನ್​​ಟಿಆರ್ ಬಗ್ಗೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ.

ಅಭಿಮಾನಿಗಳು ತಳ್ಳಲು ಬಂದ ಬೌನ್ಸರ್​​ಗೆ ಸರಿಯಾಗಿ ಕ್ಲಾಸ್​ ತೆಗೆದುಕೊಂಡ ಜೂ.ಎನ್​ಟಿಆರ್
ಎನ್​​ಟಿಆರ್​
ರಾಜೇಶ್ ದುಗ್ಗುಮನೆ
|

Updated on: May 20, 2026 | 1:07 PM

Share

ನೆಚ್ಚಿನ ಸ್ಟಾರ್ ನಟನನ್ನು ಕಣ್ತುಂಬಿಕೊಳ್ಳಲು ನೂರಾರು ಕಿಲೋಮೀಟರ್ ದೂರದಿಂದ ಬರುವ ಅಭಿಮಾನಿಗಳ ಮೇಲೆ ನಟರಿಗೆ ಸಾಕಷ್ಟು ಪ್ರೀತಿ ಇರುತ್ತದೆ. ಆದರೆ, ಅವರ ಭದ್ರತಾ ಸಿಬ್ಬಂದಿ ಮಾತ್ರ ಉದ್ಧಟತನ ತೋರುತ್ತಿರುತ್ತಾರೆ. ಸಾರ್ವಜನಿಕವಾಗಿ ಅಭಿಮಾನಿಗಳನ್ನು ದೂಡುವುದು, ಮುಗಿಬೀಳುವುದು ಬೌನ್ಸರ್‌ಗಳಿಗೆ ಸಾಮಾನ್ಯ ಎಂಬಂತಾಗಿದೆ. ಜೂನಿಯರ್ ಎನ್​​ಟಿಆರ್ (JR NTR) ಬೌನ್ಸರ್ ಕೂಡ ಇದೇ ರೀತಿ ನಡೆದುಕೊಂಡರು. ಆದರೆ, ಈ ಸಂದರ್ಭದಲ್ಲಿ ಅವರು ತಮ್ಮ ಅಭಿಮಾನಿಗಳ ಪರವಾಗಿ ನಿಂತು, ದುರ್ವರ್ತನೆ ತೋರಿದ ಭದ್ರತಾ ಸಿಬ್ಬಂದಿಗೆ ಎಲ್ಲರೆದುರೇ ಕ್ಲಾಸ್ ತಗೊಂಡಿದ್ದಾರೆ.

ಜೂನಿಯರ್ ಎನ್​​ಟಿಆರ್ ಅವರ ಜನ್ಮದಿನದ ಪ್ರಯುಕ್ತ ಮಂಗಳವಾರ ತಡರಾತ್ರಿಯೇ ಹೈದರಾಬಾದ್‌ನ ಅವರ ನಿವಾಸದ ಮುಂದೆ ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ತಮ್ಮ ನೆಚ್ಚಿನ ನಟನನ್ನು ನೋಡಬೇಕು ಎಂದು ಗಂಟೆಗಟ್ಟಲೆ ಕಾಯುತ್ತಿದ್ದ ಅಭಿಮಾನಿಗಳನ್ನು ತಾರಕ್ ನಿರಾಸೆಗೊಳಿಸಲಿಲ್ಲ. ಮಧ್ಯರಾತ್ರಿ ನಿವಾಸದಿಂದ ಹೊರಬಂದು ಸ್ಟೀಲ್ ಬ್ಯಾರಿಕೇಡ್ ಹಿಂಭಾಗದಿಂದಲೇ ಕೈಬೀಸಿ ಶುಭಾಶಯ ಸ್ವೀಕರಿಸಿದರು.

ಇದೇ ವೇಳೆ ತಾರಕ್ ಅವರನ್ನು ಹತ್ತಿರದಿಂದ ನೋಡಲು ಕೆಲವು ಅಭಿಮಾನಿಗಳು ಮುಂದೆ ಬರಲು ಯತ್ನಿಸಿದಾಗ, ಅವರ ಸುತ್ತ ನಿಂತಿದ್ದ ಸೆಕ್ಯೂರಿಟಿ ತಂಡ ಅಭಿಮಾನಿಗಳ ಮೇಲೆ ಮುಗಿಬಿದ್ದು ಅತ್ಯಂತ ಜೋರಾಗಿ ದೂಡಲು ಹಾಗೂ ರೇಗಾಡಲು ಪ್ರಯತ್ನಿಸಿತು. ಭದ್ರತಾ ಸಿಬ್ಬಂದಿಯ ಈ ಉದ್ಧಟತನ ತಾರಕ್ ಅವರ ಕಣ್ಣಿಗೆ ಬಿದ್ದ ತಕ್ಷಣವೇ ಅವರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಭದ್ರತಾ ಸಿಬ್ಬಂದಿ ಅಭಿಮಾನಿಗಳ ಜೊತೆ ಅಸಭ್ಯವಾಗಿ ನಡೆದುಕೊಳ್ಳುತ್ತಿರುವುದನ್ನು ನೋಡಿದ ಜೂನಿಯರ್ ಎನ್​​ಟಿಆರ್, ಅಲ್ಲೇ ಇದ್ದ ಮುಖ್ಯ ಭದ್ರತಾ ಅಧಿಕಾರಿಯನ್ನು ಕರೆದು ಸಾರ್ವಜನಿಕವಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ‘ಇಲ್ಲಿ ಇಷ್ಟೊಂದು ಗೊಂದಲ ಮತ್ತು ಗಲಾಟೆ ಸೃಷ್ಟಿಯಾಗಲು ನಿಮ್ಮ ವರ್ತನೆಯೇ ಕಾರಣ’ ಎಂದು ಸಿಬ್ಬಂದಿಗೆ ಖಡಕ್ ಆಗಿ ಬುದ್ಧಿ ಕಲಿಸಿದ್ದಾರೆ. ನಟನೇ ನೇರವಾಗಿ ಅಭಿಮಾನಿಗಳ ಪರವಾಗಿ ನಿಂತು ಸೆಕ್ಯೂರಿಟಿ ಟೀಮ್‌ಗೆ ಕ್ಲಾಸ್ ತೆಗೆದುಕೊಂಡ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಫ್ಯಾನ್ಸ್ ಹೊಗಳಿದ್ದಾರೆ.

ಇದನ್ನೂ ಓದಿ: ಜೂ ಎನ್​​ಟಿಆರ್​​ಗೆ ಏನಾಗಿದೆ? ಕಾಡುತ್ತಿದ್ದೆಯೇ ಅನಾರೋಗ್ಯ?

ಮತ್ತೊಂದೆಡೆ ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಸಿನಿಮಾದ ಮೊದಲ ಗ್ಲಿಂಪ್ಸ್ ಸೌಂಡ್ ಮಾಡುತ್ತಿದೆ. ಈ ಚಿತ್ರದಲ್ಲಿ ಜೂನಿಯರ್ ಎನ್​​ಟಿಆರ್ ಅವರು ಅಫೀಮು ದಂಧೆಯ ಕರಾಳ ಜಗತ್ತನ್ನು ಆಳುವ ಕ್ರೂರ ಹಂತಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗ್ಲಿಂಪ್ಸ್‌ನಲ್ಲಿ ತಾರಕ್ ಹೆಣಗಳ ರಾಶಿಯ ಮೇಲೆ ನಿಂತು ಶತ್ರುಗಳನ್ನು ಸಂಹರಿಸುವ ದೃಶ್ಯಗಳು ಕೆಜಿಎಫ್ ಹಾಗೂ ಸಲಾರ್ ಸಿನಿಮಾಗಳ ಕಲ್ಲಿದ್ದಲು ಗಣಿಯ ರಗಡ್ ಶೇಡ್ ಅನ್ನು ನೆನಪಿಸುವಂತಿದೆ. ಈ ಬಿಗ್ ಬಜೆಟ್ ಸಿನಿಮಾ ಜೂನ್ 11, 2027 ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು