AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮುಂಜಾನೆ ಎಷ್ಟು ಗಂಟೆಗೆ ‘ದೇವರ’ ಶೋ ಶುರು? ಎಲ್ಲವೂ ಹೌಸ್​ಫುಲ್

‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ ಅವರು ಹೀರೋ ಆಗಿ ನಟಿಸಿದರೆ, ಜಾನ್ವಿ ಕಪೂರ್ ನಾಯಕಿ ಪಾತ್ರ ಮಾಡಿದ್ದಾರೆ. ಸೈಫ್ ಅಲಿ ಖಾನ್ ಅವರದ್ದು ವಿಲನ್ ಪಾತ್ರ. ಈ ಚಿತ್ರವನ್ನು ಕೊರಟಾಲ ಶಿವ ಅವರು ನಿರ್ದೇಶನ ಮಾಡಿದ್ದಾರೆ. ಬೆಂಗಳೂರಲ್ಲಿ ಸಿನಿಮಾಗೆ ಭರ್ಜರಿ ಹೈಪ್ ಸೃಷ್ಟಿ ಆಗಿದೆ.

ಬೆಂಗಳೂರಲ್ಲಿ ಮುಂಜಾನೆ ಎಷ್ಟು ಗಂಟೆಗೆ ‘ದೇವರ’ ಶೋ ಶುರು? ಎಲ್ಲವೂ ಹೌಸ್​ಫುಲ್
ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Sep 24, 2024 | 7:24 AM

Share

‘ದೇವರ’ ಸಿನಿಮಾ ರಿಲೀಸ್​ಗೆ ಉಳಿದಿರೋದು ಇನ್ನು ಕೆಲವು ದಿನಗಳು ಮಾತ್ರ. ಸೆಪ್ಟೆಂಬರ್ 27ರಂದು ಈ ಚಿತ್ರ ರಿಲೀಸ್ ಆಗಲಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ರಿಲೀಸ್​ಗೂ ಮೊದಲೇ ಚಿತ್ರ ದಾಖಲೆ ಬರೆಯಲು ರೆಡಿ ಆಗಿದೆ. ಬೆಂಗಳೂರಲ್ಲಿ ಮುಂಜಾನೆಯಿಂದಲೇ ಶೋಗಳು ಆರಂಭ ಆಗಲಿವೆ. ಈ ಪೈಕಿ ಬಹುತೇಕ ಹೌಸ್​ಫುಲ್ ಆಗಿವೆ. ಆ ಬಗ್ಗೆ ಇಲ್ಲಿದೆ ವಿವರ.

‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ ಅವರು ಹೀರೋ ಆಗಿ ನಟಿಸಿದರೆ, ಜಾನ್ವಿ ಕಪೂರ್ ನಾಯಕಿ ಪಾತ್ರ ಮಾಡಿದ್ದಾರೆ. ಸೈಫ್ ಅಲಿ ಖಾನ್ ಅವರದ್ದು ವಿಲನ್ ಪಾತ್ರ. ಈ ಚಿತ್ರವನ್ನು ಕೊರಟಾಲ ಶಿವ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಭರ್ಜರಿ ಹೈಪ್ ಸೃಷ್ಟಿ ಆಗಿದೆ. ಈ ಹೈಪ್​ಗೆ ತಕ್ಕಂತೆ ಶೋಗಳನ್ನು ಇಡಲಾಗುತ್ತಿದೆ.

ಬೆಂಗಳೂರಲ್ಲಿ ಮುಂಜಾನೆ 4 ಗಂಟೆಯಿಂದ ಶೋ ಆಯೋಜನೆ ಮಾಡಲಾಗಿದೆ. ವಿಶೇಷ ಎಂದರೆ ಬೆಂಗಳೂರಿನ ಹೊರ ವಲಯದಲ್ಲಿರುವ ವಿಜಯಪುರದಲ್ಲಿ ಮುಂಜಾನೆ 3:30ಕ್ಕೆ ಶೋ ಪ್ರಾರಂಭ ಆಗುತ್ತಿದೆ. ಮುಂಜಾನೆಯ ಬಹುತೇಕ ಶೋಗಳು ಹೌಸ್​ಫುಲ್ ಆಗಿವೆ ಅನ್ನೋದು ವಿಶೇಷ. ಜೂನಿಯರ್ ಎನ್​ಟಿಆರ್ ಅಭಿಮಾನಿಗಳು ಮುಗಿಬಿದ್ದು ಟಿಕೆಟ್ ಬುಕ್ ಮಾಡುತ್ತಿದ್ದಾರೆ.

ಸದ್ಯ ಬೆಂಗಳೂರಲ್ಲಿ 350ಕ್ಕೂ ಹೆಚ್ಚು ಶೋಗಳನ್ನು ನೀಡಲಾಗಿದೆ. ಇವೆಲ್ಲವೂ ಸಿಂಗಲ್​ಸ್ಕ್ರೀನ್​ನ ಲೆಕ್ಕ. ಇನ್ನೂ ಪಿವಿಆರ್​-ಐನಾಕ್ಸ್​, ಗೋಪಾಲನ್ ಸಿನಿಮಾಸ್​ ಸೇರಿ ಇತರೆ ಮಲ್ಟಿಪ್ಲೆಕ್ಸ್​​ಗಳಲ್ಲಿ ಶೋ ಬಿಟ್ಟಿಲ್ಲ. ಅವುಗಳ ಲೆಕ್ಕವೂ ಸೇರಿದರೆ ಶೋಗಳ ಸಂಖ್ಯೆ ಸಾವಿರದ ಗಡಿ ತಲುಪಿದರೂ ಅಚ್ಚರಿ ಏನಿಲ್ಲ ಎಂದು ಹೇಳಲಾಗುತ್ತಿದೆ. ಈ ವಿಚಾರ ಕೇಳಿ ಜೂನಿಯರ್ ಎನ್​ಟಿಆರ್ ಫ್ಯಾನ್ಸ್ ಖುಷಿ ಆಗಿದೆ.

ಇದನ್ನೂ ಓದಿ: ಜೂನಿಯರ್ ಎನ್​ಟಿಆರ್-ಪುನೀತ್ ಗೆಳೆತನ ಎಂಥದ್ದು? ಇಲ್ಲಿದೆ ವಿವರ

2018ರಲ್ಲಿ ಜೂನಿಯರ್ ಎನ್​ಟಿಆರ್ ನಟನೆಯ ‘ಅರವಿಂದ ಸಮೇದ’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ಭರ್ಜರಿ ಹೈಪ್ ಸೃಷ್ಟಿ ಮಾಡಿತ್ತು. ಇದಾದ ಬಳಿಕ ಅವರು ನಟಿಸಿದ ಸಿನಿಮಾ ‘ಆರ್​ಆರ್​ಆರ್’. ಇದು ಮಲ್ಟಿ ಸ್ಟಾರರ್ ಚಿತ್ರ ಆಗಿತ್ತು. ಈಗ ‘ದೇವರ’ ಸಿನಿಮಾ ಬಿಡುಗಡೆ ಕಾಣುತ್ತಿದ್ದು, ಅವರು ಸೋಲೋ ಹೀರೋ ಆಗಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ