AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮುಂಜಾನೆ ಎಷ್ಟು ಗಂಟೆಗೆ ‘ದೇವರ’ ಶೋ ಶುರು? ಎಲ್ಲವೂ ಹೌಸ್​ಫುಲ್

‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ ಅವರು ಹೀರೋ ಆಗಿ ನಟಿಸಿದರೆ, ಜಾನ್ವಿ ಕಪೂರ್ ನಾಯಕಿ ಪಾತ್ರ ಮಾಡಿದ್ದಾರೆ. ಸೈಫ್ ಅಲಿ ಖಾನ್ ಅವರದ್ದು ವಿಲನ್ ಪಾತ್ರ. ಈ ಚಿತ್ರವನ್ನು ಕೊರಟಾಲ ಶಿವ ಅವರು ನಿರ್ದೇಶನ ಮಾಡಿದ್ದಾರೆ. ಬೆಂಗಳೂರಲ್ಲಿ ಸಿನಿಮಾಗೆ ಭರ್ಜರಿ ಹೈಪ್ ಸೃಷ್ಟಿ ಆಗಿದೆ.

ಬೆಂಗಳೂರಲ್ಲಿ ಮುಂಜಾನೆ ಎಷ್ಟು ಗಂಟೆಗೆ ‘ದೇವರ’ ಶೋ ಶುರು? ಎಲ್ಲವೂ ಹೌಸ್​ಫುಲ್
ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Sep 24, 2024 | 7:24 AM

Share

‘ದೇವರ’ ಸಿನಿಮಾ ರಿಲೀಸ್​ಗೆ ಉಳಿದಿರೋದು ಇನ್ನು ಕೆಲವು ದಿನಗಳು ಮಾತ್ರ. ಸೆಪ್ಟೆಂಬರ್ 27ರಂದು ಈ ಚಿತ್ರ ರಿಲೀಸ್ ಆಗಲಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ರಿಲೀಸ್​ಗೂ ಮೊದಲೇ ಚಿತ್ರ ದಾಖಲೆ ಬರೆಯಲು ರೆಡಿ ಆಗಿದೆ. ಬೆಂಗಳೂರಲ್ಲಿ ಮುಂಜಾನೆಯಿಂದಲೇ ಶೋಗಳು ಆರಂಭ ಆಗಲಿವೆ. ಈ ಪೈಕಿ ಬಹುತೇಕ ಹೌಸ್​ಫುಲ್ ಆಗಿವೆ. ಆ ಬಗ್ಗೆ ಇಲ್ಲಿದೆ ವಿವರ.

‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ ಅವರು ಹೀರೋ ಆಗಿ ನಟಿಸಿದರೆ, ಜಾನ್ವಿ ಕಪೂರ್ ನಾಯಕಿ ಪಾತ್ರ ಮಾಡಿದ್ದಾರೆ. ಸೈಫ್ ಅಲಿ ಖಾನ್ ಅವರದ್ದು ವಿಲನ್ ಪಾತ್ರ. ಈ ಚಿತ್ರವನ್ನು ಕೊರಟಾಲ ಶಿವ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಭರ್ಜರಿ ಹೈಪ್ ಸೃಷ್ಟಿ ಆಗಿದೆ. ಈ ಹೈಪ್​ಗೆ ತಕ್ಕಂತೆ ಶೋಗಳನ್ನು ಇಡಲಾಗುತ್ತಿದೆ.

ಬೆಂಗಳೂರಲ್ಲಿ ಮುಂಜಾನೆ 4 ಗಂಟೆಯಿಂದ ಶೋ ಆಯೋಜನೆ ಮಾಡಲಾಗಿದೆ. ವಿಶೇಷ ಎಂದರೆ ಬೆಂಗಳೂರಿನ ಹೊರ ವಲಯದಲ್ಲಿರುವ ವಿಜಯಪುರದಲ್ಲಿ ಮುಂಜಾನೆ 3:30ಕ್ಕೆ ಶೋ ಪ್ರಾರಂಭ ಆಗುತ್ತಿದೆ. ಮುಂಜಾನೆಯ ಬಹುತೇಕ ಶೋಗಳು ಹೌಸ್​ಫುಲ್ ಆಗಿವೆ ಅನ್ನೋದು ವಿಶೇಷ. ಜೂನಿಯರ್ ಎನ್​ಟಿಆರ್ ಅಭಿಮಾನಿಗಳು ಮುಗಿಬಿದ್ದು ಟಿಕೆಟ್ ಬುಕ್ ಮಾಡುತ್ತಿದ್ದಾರೆ.

ಸದ್ಯ ಬೆಂಗಳೂರಲ್ಲಿ 350ಕ್ಕೂ ಹೆಚ್ಚು ಶೋಗಳನ್ನು ನೀಡಲಾಗಿದೆ. ಇವೆಲ್ಲವೂ ಸಿಂಗಲ್​ಸ್ಕ್ರೀನ್​ನ ಲೆಕ್ಕ. ಇನ್ನೂ ಪಿವಿಆರ್​-ಐನಾಕ್ಸ್​, ಗೋಪಾಲನ್ ಸಿನಿಮಾಸ್​ ಸೇರಿ ಇತರೆ ಮಲ್ಟಿಪ್ಲೆಕ್ಸ್​​ಗಳಲ್ಲಿ ಶೋ ಬಿಟ್ಟಿಲ್ಲ. ಅವುಗಳ ಲೆಕ್ಕವೂ ಸೇರಿದರೆ ಶೋಗಳ ಸಂಖ್ಯೆ ಸಾವಿರದ ಗಡಿ ತಲುಪಿದರೂ ಅಚ್ಚರಿ ಏನಿಲ್ಲ ಎಂದು ಹೇಳಲಾಗುತ್ತಿದೆ. ಈ ವಿಚಾರ ಕೇಳಿ ಜೂನಿಯರ್ ಎನ್​ಟಿಆರ್ ಫ್ಯಾನ್ಸ್ ಖುಷಿ ಆಗಿದೆ.

ಇದನ್ನೂ ಓದಿ: ಜೂನಿಯರ್ ಎನ್​ಟಿಆರ್-ಪುನೀತ್ ಗೆಳೆತನ ಎಂಥದ್ದು? ಇಲ್ಲಿದೆ ವಿವರ

2018ರಲ್ಲಿ ಜೂನಿಯರ್ ಎನ್​ಟಿಆರ್ ನಟನೆಯ ‘ಅರವಿಂದ ಸಮೇದ’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ಭರ್ಜರಿ ಹೈಪ್ ಸೃಷ್ಟಿ ಮಾಡಿತ್ತು. ಇದಾದ ಬಳಿಕ ಅವರು ನಟಿಸಿದ ಸಿನಿಮಾ ‘ಆರ್​ಆರ್​ಆರ್’. ಇದು ಮಲ್ಟಿ ಸ್ಟಾರರ್ ಚಿತ್ರ ಆಗಿತ್ತು. ಈಗ ‘ದೇವರ’ ಸಿನಿಮಾ ಬಿಡುಗಡೆ ಕಾಣುತ್ತಿದ್ದು, ಅವರು ಸೋಲೋ ಹೀರೋ ಆಗಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ