AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shyam: ಜೂನಿಯರ್ ಎನ್​ಟಿಆರ್ ಕಟ್ಟಾಭಿಮಾನಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ಶ್ಯಾಮ್ ಅವರು ಜೂನಿಯರ್ ಎನ್​ಟಿಆರ್​ ಅವರನ್ನು ಆರಾಧಿಸುತ್ತಾ ಬೆಳೆದವರು. ಪೂರ್ವ ಗೋದಾವರಿ ಜಿಲ್ಲೆಯ ಕಾಲೇಜು ಒಂದರಲ್ಲಿ ಅವರು ಶಿಕ್ಷಣ ಪಡೆಯುತ್ತಿದ್ದರು.

Shyam: ಜೂನಿಯರ್ ಎನ್​ಟಿಆರ್ ಕಟ್ಟಾಭಿಮಾನಿ ಅನುಮಾನಾಸ್ಪದ ರೀತಿಯಲ್ಲಿ ಸಾವು
ಜೂನಿಯರ್ ಎನ್​ಟಿಆರ್-ಶ್ಯಾಮ್
ರಾಜೇಶ್ ದುಗ್ಗುಮನೆ
| Edited By: |

Updated on:Jun 27, 2023 | 4:15 PM

Share

ಜೂನಿಯರ್ ಎನ್​ಟಿಆರ್ (Jr Ntr) ಅವರ ಕಟ್ಟಾಭಿಮಾನಿಯಾಗಿ ಗುರುತಿಸಿಕೊಂಡಿದ್ದ ಶ್ಯಾಮ್ (Shyam) ಅವರು ಸೋಮವಾರ (ಜೂನ್ 26) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅವರ ಸಾವಿನ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಕೆಲವರು ಇದನ್ನು ಆತ್ಮಹತ್ಯೆ ಎಂದು ಕರೆದಿದ್ದಾರೆ. ಈ ಸಾವಿನಲ್ಲಿ ಕುಟುಂಬದವರು ಹಾಗೂ ಆಪ್ತರು ಅನುಮಾನ ವ್ಯಕ್ತಪಡಿಸಿರುವುದರಿಂದ ಪೊಲೀಸ್ ತನಿಖೆ ನಡೆಯಬೇಕು ಎಂದು ಅನೇಕರು ಆಗ್ರಹಿಸಿದ್ದಾರೆ.

ಶ್ಯಾಮ್ ಅವರು ಜೂನಿಯರ್ ಎನ್​ಟಿಆರ್​ ಅವರನ್ನು ಆರಾಧಿಸುತ್ತಾ ಬೆಳೆದವರು. ಪೂರ್ವ ಗೋದಾವರಿ ಜಿಲ್ಲೆಯ ಕಾಲೇಜು ಒಂದರಲ್ಲಿ ಅವರು ಶಿಕ್ಷಣ ಪಡೆಯುತ್ತಿದ್ದರು. ತಾವು ವಾಸವಾಗಿರುವ ಗ್ರಾಮದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ‘ಶ್ಯಾಮ್ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ. ಅವನಿಗೆ ಅಂಥ ಮನಸ್ಥಿತಿ ಇರಲಿಲ್ಲ’ ಎಂದು ಕುಟುಂಬದವರು ಹೇಳಿದ್ದಾರೆ. ಈ ಕಾರಣಕ್ಕೆ ತನಿಖೆಯ ಆಗ್ರಹ ಜೋರಾಗಿದೆ.

ಕೇವಲ ಜೂನಿಯರ್ ಎನ್​ಟಿಆರ್ ಅಭಿಮಾನಿಗಳು ಮಾತ್ರವಲ್ಲದೆ, ಜೂನಿಯರ್ ಎನ್​ಟಿಆರ್, ಪವನ್ ಕಲ್ಯಾಣ್, ರಾಮ್ ಚರಣ್ ಹಾಗೂ ಇತರ ಸ್ಟಾರ್​ಗಳ ಅಭಿಮಾನಿಗಳು ತನಿಖೆಗೆ ಆಗ್ರಹಿಸಿದ್ದಾರೆ. WeWantJusticeForShyamNTR ಎಂಬ ಹ್ಯಾಶ್ ಟ್ಯಾಗ್ ಅಡಿಯಲ್ಲಿ ಟ್ವೀಟ್​ಗಳನ್ನು ಮಾಡಲಾಗುತ್ತಿದೆ. ಈ ಸಾವಿನ ಹಿಂದೆ ಯಾವುದಾದರೂ ದ್ವೇಷ ಇದೆಯೇ ಎಂಬ ಅನುಮಾನ ಕೂಡ ಮೂಡಿದೆ.

ಜೂನಿಯರ್ ಎನ್​ಟಿಆರ್ ಅವರನ್ನು ಶ್ಯಾಮ್ ತುಂಬಾನೇ ಗೌರವಿಸುತ್ತಿದ್ದರು. ಅನೇಕ ಕಾರ್ಯಕ್ರಮಗಳಲ್ಲಿ ಜೂನಿಯರ್ ಎನ್​ಟಿಆರ್ ಅವರನ್ನು ಶ್ಯಾಮ್ ಭೇಟಿ ಮಾಡಿದ್ದರು. ವೇದಿಕೆ ಮೇಲೆ ಹಗ್ ಮಾಡಿಕೊಂಡು ಅವರು ಖುಷಿಪಟ್ಟಿದ್ದರು. ಈ ವಿಡಿಯೋಗಳನ್ನು ಫ್ಯಾನ್ಸ್ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ವಾರ್​ 2’ ಚಿತ್ರಕ್ಕಾಗಿ ಬಾಲಿವುಡ್ ಹೀರೋಗಳಿಗಿಂತಲೂ ಹೆಚ್ಚು ಸಂಭಾವನೆ ಪಡೆದ ಜೂನಿಯರ್ ಎನ್​ಟಿಆರ್

ಜೂನಿಯರ್ ಎನ್​ಟಿಆರ್ ಅವರು ಈ ವರೆಗೆ (ಜೂನ್ 27, ಮಧ್ಯಾಹ್ನ 2.30) ಯಾವುದೇ ಟ್ವೀಟ್ ಮಾಡಿಲ್ಲ. ಅವರು ಕೂಡ ಈ ಬಗ್ಗೆ ಧ್ವನಿ ಎತ್ತಬೇಕು ಎಂಬುದು ಅನೇಕರ ಕೋರಿಕೆ. ಈ ಪ್ರಕರಣ ಮುಂದೆ ಯಾವ ರೀತಿಯಲ್ಲಿ ಸಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:36 pm, Tue, 27 June 23

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ