AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shyam: ಜೂನಿಯರ್ ಎನ್​ಟಿಆರ್ ಕಟ್ಟಾಭಿಮಾನಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ಶ್ಯಾಮ್ ಅವರು ಜೂನಿಯರ್ ಎನ್​ಟಿಆರ್​ ಅವರನ್ನು ಆರಾಧಿಸುತ್ತಾ ಬೆಳೆದವರು. ಪೂರ್ವ ಗೋದಾವರಿ ಜಿಲ್ಲೆಯ ಕಾಲೇಜು ಒಂದರಲ್ಲಿ ಅವರು ಶಿಕ್ಷಣ ಪಡೆಯುತ್ತಿದ್ದರು.

Shyam: ಜೂನಿಯರ್ ಎನ್​ಟಿಆರ್ ಕಟ್ಟಾಭಿಮಾನಿ ಅನುಮಾನಾಸ್ಪದ ರೀತಿಯಲ್ಲಿ ಸಾವು
ಜೂನಿಯರ್ ಎನ್​ಟಿಆರ್-ಶ್ಯಾಮ್
ರಾಜೇಶ್ ದುಗ್ಗುಮನೆ
| Edited By: |

Updated on:Jun 27, 2023 | 4:15 PM

Share

ಜೂನಿಯರ್ ಎನ್​ಟಿಆರ್ (Jr Ntr) ಅವರ ಕಟ್ಟಾಭಿಮಾನಿಯಾಗಿ ಗುರುತಿಸಿಕೊಂಡಿದ್ದ ಶ್ಯಾಮ್ (Shyam) ಅವರು ಸೋಮವಾರ (ಜೂನ್ 26) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅವರ ಸಾವಿನ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಕೆಲವರು ಇದನ್ನು ಆತ್ಮಹತ್ಯೆ ಎಂದು ಕರೆದಿದ್ದಾರೆ. ಈ ಸಾವಿನಲ್ಲಿ ಕುಟುಂಬದವರು ಹಾಗೂ ಆಪ್ತರು ಅನುಮಾನ ವ್ಯಕ್ತಪಡಿಸಿರುವುದರಿಂದ ಪೊಲೀಸ್ ತನಿಖೆ ನಡೆಯಬೇಕು ಎಂದು ಅನೇಕರು ಆಗ್ರಹಿಸಿದ್ದಾರೆ.

ಶ್ಯಾಮ್ ಅವರು ಜೂನಿಯರ್ ಎನ್​ಟಿಆರ್​ ಅವರನ್ನು ಆರಾಧಿಸುತ್ತಾ ಬೆಳೆದವರು. ಪೂರ್ವ ಗೋದಾವರಿ ಜಿಲ್ಲೆಯ ಕಾಲೇಜು ಒಂದರಲ್ಲಿ ಅವರು ಶಿಕ್ಷಣ ಪಡೆಯುತ್ತಿದ್ದರು. ತಾವು ವಾಸವಾಗಿರುವ ಗ್ರಾಮದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ‘ಶ್ಯಾಮ್ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ. ಅವನಿಗೆ ಅಂಥ ಮನಸ್ಥಿತಿ ಇರಲಿಲ್ಲ’ ಎಂದು ಕುಟುಂಬದವರು ಹೇಳಿದ್ದಾರೆ. ಈ ಕಾರಣಕ್ಕೆ ತನಿಖೆಯ ಆಗ್ರಹ ಜೋರಾಗಿದೆ.

ಕೇವಲ ಜೂನಿಯರ್ ಎನ್​ಟಿಆರ್ ಅಭಿಮಾನಿಗಳು ಮಾತ್ರವಲ್ಲದೆ, ಜೂನಿಯರ್ ಎನ್​ಟಿಆರ್, ಪವನ್ ಕಲ್ಯಾಣ್, ರಾಮ್ ಚರಣ್ ಹಾಗೂ ಇತರ ಸ್ಟಾರ್​ಗಳ ಅಭಿಮಾನಿಗಳು ತನಿಖೆಗೆ ಆಗ್ರಹಿಸಿದ್ದಾರೆ. WeWantJusticeForShyamNTR ಎಂಬ ಹ್ಯಾಶ್ ಟ್ಯಾಗ್ ಅಡಿಯಲ್ಲಿ ಟ್ವೀಟ್​ಗಳನ್ನು ಮಾಡಲಾಗುತ್ತಿದೆ. ಈ ಸಾವಿನ ಹಿಂದೆ ಯಾವುದಾದರೂ ದ್ವೇಷ ಇದೆಯೇ ಎಂಬ ಅನುಮಾನ ಕೂಡ ಮೂಡಿದೆ.

ಜೂನಿಯರ್ ಎನ್​ಟಿಆರ್ ಅವರನ್ನು ಶ್ಯಾಮ್ ತುಂಬಾನೇ ಗೌರವಿಸುತ್ತಿದ್ದರು. ಅನೇಕ ಕಾರ್ಯಕ್ರಮಗಳಲ್ಲಿ ಜೂನಿಯರ್ ಎನ್​ಟಿಆರ್ ಅವರನ್ನು ಶ್ಯಾಮ್ ಭೇಟಿ ಮಾಡಿದ್ದರು. ವೇದಿಕೆ ಮೇಲೆ ಹಗ್ ಮಾಡಿಕೊಂಡು ಅವರು ಖುಷಿಪಟ್ಟಿದ್ದರು. ಈ ವಿಡಿಯೋಗಳನ್ನು ಫ್ಯಾನ್ಸ್ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ವಾರ್​ 2’ ಚಿತ್ರಕ್ಕಾಗಿ ಬಾಲಿವುಡ್ ಹೀರೋಗಳಿಗಿಂತಲೂ ಹೆಚ್ಚು ಸಂಭಾವನೆ ಪಡೆದ ಜೂನಿಯರ್ ಎನ್​ಟಿಆರ್

ಜೂನಿಯರ್ ಎನ್​ಟಿಆರ್ ಅವರು ಈ ವರೆಗೆ (ಜೂನ್ 27, ಮಧ್ಯಾಹ್ನ 2.30) ಯಾವುದೇ ಟ್ವೀಟ್ ಮಾಡಿಲ್ಲ. ಅವರು ಕೂಡ ಈ ಬಗ್ಗೆ ಧ್ವನಿ ಎತ್ತಬೇಕು ಎಂಬುದು ಅನೇಕರ ಕೋರಿಕೆ. ಈ ಪ್ರಕರಣ ಮುಂದೆ ಯಾವ ರೀತಿಯಲ್ಲಿ ಸಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:36 pm, Tue, 27 June 23

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'