AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shyam: ಜೂನಿಯರ್ ಎನ್​ಟಿಆರ್ ಕಟ್ಟಾಭಿಮಾನಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ಶ್ಯಾಮ್ ಅವರು ಜೂನಿಯರ್ ಎನ್​ಟಿಆರ್​ ಅವರನ್ನು ಆರಾಧಿಸುತ್ತಾ ಬೆಳೆದವರು. ಪೂರ್ವ ಗೋದಾವರಿ ಜಿಲ್ಲೆಯ ಕಾಲೇಜು ಒಂದರಲ್ಲಿ ಅವರು ಶಿಕ್ಷಣ ಪಡೆಯುತ್ತಿದ್ದರು.

Shyam: ಜೂನಿಯರ್ ಎನ್​ಟಿಆರ್ ಕಟ್ಟಾಭಿಮಾನಿ ಅನುಮಾನಾಸ್ಪದ ರೀತಿಯಲ್ಲಿ ಸಾವು
ಜೂನಿಯರ್ ಎನ್​ಟಿಆರ್-ಶ್ಯಾಮ್
ರಾಜೇಶ್ ದುಗ್ಗುಮನೆ
| Edited By: |

Updated on:Jun 27, 2023 | 4:15 PM

Share

ಜೂನಿಯರ್ ಎನ್​ಟಿಆರ್ (Jr Ntr) ಅವರ ಕಟ್ಟಾಭಿಮಾನಿಯಾಗಿ ಗುರುತಿಸಿಕೊಂಡಿದ್ದ ಶ್ಯಾಮ್ (Shyam) ಅವರು ಸೋಮವಾರ (ಜೂನ್ 26) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅವರ ಸಾವಿನ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಕೆಲವರು ಇದನ್ನು ಆತ್ಮಹತ್ಯೆ ಎಂದು ಕರೆದಿದ್ದಾರೆ. ಈ ಸಾವಿನಲ್ಲಿ ಕುಟುಂಬದವರು ಹಾಗೂ ಆಪ್ತರು ಅನುಮಾನ ವ್ಯಕ್ತಪಡಿಸಿರುವುದರಿಂದ ಪೊಲೀಸ್ ತನಿಖೆ ನಡೆಯಬೇಕು ಎಂದು ಅನೇಕರು ಆಗ್ರಹಿಸಿದ್ದಾರೆ.

ಶ್ಯಾಮ್ ಅವರು ಜೂನಿಯರ್ ಎನ್​ಟಿಆರ್​ ಅವರನ್ನು ಆರಾಧಿಸುತ್ತಾ ಬೆಳೆದವರು. ಪೂರ್ವ ಗೋದಾವರಿ ಜಿಲ್ಲೆಯ ಕಾಲೇಜು ಒಂದರಲ್ಲಿ ಅವರು ಶಿಕ್ಷಣ ಪಡೆಯುತ್ತಿದ್ದರು. ತಾವು ವಾಸವಾಗಿರುವ ಗ್ರಾಮದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ‘ಶ್ಯಾಮ್ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ. ಅವನಿಗೆ ಅಂಥ ಮನಸ್ಥಿತಿ ಇರಲಿಲ್ಲ’ ಎಂದು ಕುಟುಂಬದವರು ಹೇಳಿದ್ದಾರೆ. ಈ ಕಾರಣಕ್ಕೆ ತನಿಖೆಯ ಆಗ್ರಹ ಜೋರಾಗಿದೆ.

ಕೇವಲ ಜೂನಿಯರ್ ಎನ್​ಟಿಆರ್ ಅಭಿಮಾನಿಗಳು ಮಾತ್ರವಲ್ಲದೆ, ಜೂನಿಯರ್ ಎನ್​ಟಿಆರ್, ಪವನ್ ಕಲ್ಯಾಣ್, ರಾಮ್ ಚರಣ್ ಹಾಗೂ ಇತರ ಸ್ಟಾರ್​ಗಳ ಅಭಿಮಾನಿಗಳು ತನಿಖೆಗೆ ಆಗ್ರಹಿಸಿದ್ದಾರೆ. WeWantJusticeForShyamNTR ಎಂಬ ಹ್ಯಾಶ್ ಟ್ಯಾಗ್ ಅಡಿಯಲ್ಲಿ ಟ್ವೀಟ್​ಗಳನ್ನು ಮಾಡಲಾಗುತ್ತಿದೆ. ಈ ಸಾವಿನ ಹಿಂದೆ ಯಾವುದಾದರೂ ದ್ವೇಷ ಇದೆಯೇ ಎಂಬ ಅನುಮಾನ ಕೂಡ ಮೂಡಿದೆ.

ಜೂನಿಯರ್ ಎನ್​ಟಿಆರ್ ಅವರನ್ನು ಶ್ಯಾಮ್ ತುಂಬಾನೇ ಗೌರವಿಸುತ್ತಿದ್ದರು. ಅನೇಕ ಕಾರ್ಯಕ್ರಮಗಳಲ್ಲಿ ಜೂನಿಯರ್ ಎನ್​ಟಿಆರ್ ಅವರನ್ನು ಶ್ಯಾಮ್ ಭೇಟಿ ಮಾಡಿದ್ದರು. ವೇದಿಕೆ ಮೇಲೆ ಹಗ್ ಮಾಡಿಕೊಂಡು ಅವರು ಖುಷಿಪಟ್ಟಿದ್ದರು. ಈ ವಿಡಿಯೋಗಳನ್ನು ಫ್ಯಾನ್ಸ್ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ವಾರ್​ 2’ ಚಿತ್ರಕ್ಕಾಗಿ ಬಾಲಿವುಡ್ ಹೀರೋಗಳಿಗಿಂತಲೂ ಹೆಚ್ಚು ಸಂಭಾವನೆ ಪಡೆದ ಜೂನಿಯರ್ ಎನ್​ಟಿಆರ್

ಜೂನಿಯರ್ ಎನ್​ಟಿಆರ್ ಅವರು ಈ ವರೆಗೆ (ಜೂನ್ 27, ಮಧ್ಯಾಹ್ನ 2.30) ಯಾವುದೇ ಟ್ವೀಟ್ ಮಾಡಿಲ್ಲ. ಅವರು ಕೂಡ ಈ ಬಗ್ಗೆ ಧ್ವನಿ ಎತ್ತಬೇಕು ಎಂಬುದು ಅನೇಕರ ಕೋರಿಕೆ. ಈ ಪ್ರಕರಣ ಮುಂದೆ ಯಾವ ರೀತಿಯಲ್ಲಿ ಸಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:36 pm, Tue, 27 June 23

Follow Us
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ