Shyam: ಜೂನಿಯರ್ ಎನ್​ಟಿಆರ್ ಕಟ್ಟಾಭಿಮಾನಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ಶ್ಯಾಮ್ ಅವರು ಜೂನಿಯರ್ ಎನ್​ಟಿಆರ್​ ಅವರನ್ನು ಆರಾಧಿಸುತ್ತಾ ಬೆಳೆದವರು. ಪೂರ್ವ ಗೋದಾವರಿ ಜಿಲ್ಲೆಯ ಕಾಲೇಜು ಒಂದರಲ್ಲಿ ಅವರು ಶಿಕ್ಷಣ ಪಡೆಯುತ್ತಿದ್ದರು.

Shyam: ಜೂನಿಯರ್ ಎನ್​ಟಿಆರ್ ಕಟ್ಟಾಭಿಮಾನಿ ಅನುಮಾನಾಸ್ಪದ ರೀತಿಯಲ್ಲಿ ಸಾವು
ಜೂನಿಯರ್ ಎನ್​ಟಿಆರ್-ಶ್ಯಾಮ್
Edited By:

Updated on: Jun 27, 2023 | 4:15 PM

ಜೂನಿಯರ್ ಎನ್​ಟಿಆರ್ (Jr Ntr) ಅವರ ಕಟ್ಟಾಭಿಮಾನಿಯಾಗಿ ಗುರುತಿಸಿಕೊಂಡಿದ್ದ ಶ್ಯಾಮ್ (Shyam) ಅವರು ಸೋಮವಾರ (ಜೂನ್ 26) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅವರ ಸಾವಿನ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಕೆಲವರು ಇದನ್ನು ಆತ್ಮಹತ್ಯೆ ಎಂದು ಕರೆದಿದ್ದಾರೆ. ಈ ಸಾವಿನಲ್ಲಿ ಕುಟುಂಬದವರು ಹಾಗೂ ಆಪ್ತರು ಅನುಮಾನ ವ್ಯಕ್ತಪಡಿಸಿರುವುದರಿಂದ ಪೊಲೀಸ್ ತನಿಖೆ ನಡೆಯಬೇಕು ಎಂದು ಅನೇಕರು ಆಗ್ರಹಿಸಿದ್ದಾರೆ.

ಶ್ಯಾಮ್ ಅವರು ಜೂನಿಯರ್ ಎನ್​ಟಿಆರ್​ ಅವರನ್ನು ಆರಾಧಿಸುತ್ತಾ ಬೆಳೆದವರು. ಪೂರ್ವ ಗೋದಾವರಿ ಜಿಲ್ಲೆಯ ಕಾಲೇಜು ಒಂದರಲ್ಲಿ ಅವರು ಶಿಕ್ಷಣ ಪಡೆಯುತ್ತಿದ್ದರು. ತಾವು ವಾಸವಾಗಿರುವ ಗ್ರಾಮದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ‘ಶ್ಯಾಮ್ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ. ಅವನಿಗೆ ಅಂಥ ಮನಸ್ಥಿತಿ ಇರಲಿಲ್ಲ’ ಎಂದು ಕುಟುಂಬದವರು ಹೇಳಿದ್ದಾರೆ. ಈ ಕಾರಣಕ್ಕೆ ತನಿಖೆಯ ಆಗ್ರಹ ಜೋರಾಗಿದೆ.

ಕೇವಲ ಜೂನಿಯರ್ ಎನ್​ಟಿಆರ್ ಅಭಿಮಾನಿಗಳು ಮಾತ್ರವಲ್ಲದೆ, ಜೂನಿಯರ್ ಎನ್​ಟಿಆರ್, ಪವನ್ ಕಲ್ಯಾಣ್, ರಾಮ್ ಚರಣ್ ಹಾಗೂ ಇತರ ಸ್ಟಾರ್​ಗಳ ಅಭಿಮಾನಿಗಳು ತನಿಖೆಗೆ ಆಗ್ರಹಿಸಿದ್ದಾರೆ. WeWantJusticeForShyamNTR ಎಂಬ ಹ್ಯಾಶ್ ಟ್ಯಾಗ್ ಅಡಿಯಲ್ಲಿ ಟ್ವೀಟ್​ಗಳನ್ನು ಮಾಡಲಾಗುತ್ತಿದೆ. ಈ ಸಾವಿನ ಹಿಂದೆ ಯಾವುದಾದರೂ ದ್ವೇಷ ಇದೆಯೇ ಎಂಬ ಅನುಮಾನ ಕೂಡ ಮೂಡಿದೆ.

ಜೂನಿಯರ್ ಎನ್​ಟಿಆರ್ ಅವರನ್ನು ಶ್ಯಾಮ್ ತುಂಬಾನೇ ಗೌರವಿಸುತ್ತಿದ್ದರು. ಅನೇಕ ಕಾರ್ಯಕ್ರಮಗಳಲ್ಲಿ ಜೂನಿಯರ್ ಎನ್​ಟಿಆರ್ ಅವರನ್ನು ಶ್ಯಾಮ್ ಭೇಟಿ ಮಾಡಿದ್ದರು. ವೇದಿಕೆ ಮೇಲೆ ಹಗ್ ಮಾಡಿಕೊಂಡು ಅವರು ಖುಷಿಪಟ್ಟಿದ್ದರು. ಈ ವಿಡಿಯೋಗಳನ್ನು ಫ್ಯಾನ್ಸ್ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ವಾರ್​ 2’ ಚಿತ್ರಕ್ಕಾಗಿ ಬಾಲಿವುಡ್ ಹೀರೋಗಳಿಗಿಂತಲೂ ಹೆಚ್ಚು ಸಂಭಾವನೆ ಪಡೆದ ಜೂನಿಯರ್ ಎನ್​ಟಿಆರ್

ಜೂನಿಯರ್ ಎನ್​ಟಿಆರ್ ಅವರು ಈ ವರೆಗೆ (ಜೂನ್ 27, ಮಧ್ಯಾಹ್ನ 2.30) ಯಾವುದೇ ಟ್ವೀಟ್ ಮಾಡಿಲ್ಲ. ಅವರು ಕೂಡ ಈ ಬಗ್ಗೆ ಧ್ವನಿ ಎತ್ತಬೇಕು ಎಂಬುದು ಅನೇಕರ ಕೋರಿಕೆ. ಈ ಪ್ರಕರಣ ಮುಂದೆ ಯಾವ ರೀತಿಯಲ್ಲಿ ಸಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:36 pm, Tue, 27 June 23

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us