ದೇವಸ್ಥಾನ ನಿರ್ಮಾಣಕ್ಕೆ 12.5 ಲಕ್ಷ ರೂಪಾಯಿ ದೇಣಿಗೆ ನೀಡಿದ ಜೂ. ಎನ್​ಟಿಆರ್​

ಪ್ರತಿ ಸಿನಿಮಾಗೆ ಜೂನಿಯರ್​ ಎನ್​ಟಿಆರ್​ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಅದರಲ್ಲಿ ಒಂದಷ್ಟು ಹಣವನ್ನು ಅವರು ಸಮಾಜಮುಖಿ ಕೆಲಸಗಳಿಗೆ ನೀಡುತ್ತಾರೆ. ಈಗ ಆಂಧ್ರ ಪ್ರದೇಶದಲ್ಲಿ ದೇವಸ್ಥಾನವೊಂದರ ನಿರ್ಮಾಣಕ್ಕಾಗಿ ಜೂನಿಯರ್​ ಎನ್​ಟಿಆರ್​ ಅವರು 12.5 ಲಕ್ಷ ರೂಪಾಯಿ ದೇಣಿಗೆ ನೀಡಿರುವುದು ಗೊತ್ತಾಗಿದೆ.

ದೇವಸ್ಥಾನ ನಿರ್ಮಾಣಕ್ಕೆ 12.5 ಲಕ್ಷ ರೂಪಾಯಿ ದೇಣಿಗೆ ನೀಡಿದ ಜೂ. ಎನ್​ಟಿಆರ್​
ಜೂನಿಯರ್​ ಎನ್​ಟಿಆರ್​
Follow us
|

Updated on: May 16, 2024 | 5:51 PM

ಟಾಲಿವುಡ್​ನ ಸ್ಟಾರ್​ ನಟ ಜೂನಿಯರ್​ ಎನ್​ಟಿಆರ್​ (Jr NTR) ಅವರು ಸಿನಿಮಾಗಳಿಂದ ಮಾತ್ರವಲ್ಲದೇ ಸಮಾಜಮುಖಿ ಕಾರ್ಯಗಳಿಂದ ಜನರಿಗೆ ಆಪ್ತರಾಗಿದ್ದಾರೆ. ಈಗ ಅವರು ದೇವಸ್ಥಾನವೊಂದರ ನಿರ್ಮಾಣಕ್ಕಾಗಿ 12.5 ಲಕ್ಷ ರೂಪಾಯಿ ದೇಣಿಗೆ (Jr NTR Donation) ನೀಡಿ ಸುದ್ದಿ ಆಗಿದ್ದಾರೆ. ಆಂಧ್ರ ಪ್ರದೇಶದ ಚೆಯ್ಯೆರುನಲ್ಲಿರುವ ‘ಶ್ರೀ ಭದ್ರಕಾಳಿ ಸಮೇತ ವೀರಭದ್ರ ಸ್ವಾಮಿ’ ದೇವಸ್ಥಾನಕ್ಕೆ ಅವರು ಈ ಹಣವನ್ನು ನೀಡಿದ್ದಾರೆ. ತಮ್ಮ ಕುಟುಂಬದವರ ಹೆಸರಿನಲ್ಲಿ ಜೂನಿಯರ್​ ಎನ್​ಟಿಆರ್​ ಅವರು ದೇಣಿಗೆ ಕೊಟ್ಟಿದ್ದಾರೆ. ಅದರ ಫೋಟೋ ವೈರಲ್​ ಆಗಿದೆ.

ಮೇ 20ರಂದು ಜೂನಿಯರ್ ಎನ್​ಟಿಆರ್​ ಅವರು ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ. ಅದಕ್ಕೂ ಮುನ್ನ ಅವರು ಲಕ್ಷಾಂತರ ರೂಪಾಯಿ ದೇಣಿಗೆ ನೀಡಿದ್ದಾರೆ. ತಾಯಿ ಶಾಲಿನಿ, ಪತ್ನಿ ಲಕ್ಷ್ಮಿ ಪ್ರಣತಿ ಹಾಗೂ ಮಕ್ಕಳಾದ ಅಭಯ್​, ಭಾರ್ಗವ್​ ಹೆಸರಿನಲ್ಲಿ ಜೂನಿಯರ್​ ಎನ್​ಟಿಆರ್​ ಅವರು ದೇಣಿಗೆ ನೀಡಿದ್ದಾರೆ. ದೇವಸ್ಥಾನದ ಆವರಣದಲ್ಲಿ ಈ ದೇಣಿಗೆ ಬಗ್ಗೆ ಮಾಹಿತಿ ಇದೆ.

‘ದೇವಸ್ಥಾನಕ್ಕೆ ನೀಡಿದ ದೇಣಿಗೆಯ ಕುರಿತು ಪ್ರಚಾರ ಆಗುವುದು ಜೂನಿಯರ್​ ಎನ್​ಟಿಆರ್ ಅವರಿಗೆ ಇಷ್ಟ ಇಲ್ಲ. ಆದರೆ ಪೂರ್ವ ಗೋದಾವರಿ ಭಾಗದ ಅಭಿಮಾನಿಗಳು ಈ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡ ಬಳಿಕ ಇದು ಸುದ್ದಿ ಆಗಿದೆ’ ಎಂದು ಮೂಲಗಳು ಹೇಳಿರುವುದಾಗಿ ‘ಹಿಂದುಸ್ತಾನ್​ ಟೈಮ್ಸ್​’ ವರದಿ ಪ್ರಕಟಿಸಿದೆ.

ಅಂದಹಾಗೆ, ಜೂನಿಯರ್​ ಎನ್​ಟಿಆರ್​ ಅವರು ದೇಣಿಗೆ ನೀಡಿದ್ದು ಇದೇ ಮೊದಲೇನಲ್ಲ. ಪ್ರವಾಹ ಸಂತ್ರಸ್ತರಿಗೆ ಸಹಾಯವಾಗಲಿ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಪರಿಹಾರ ನಿಧಿಗೆ ಜೂನಿಯರ್​ ಎನ್​ಟಿಆರ್​ ಅವರು 25 ಲಕ್ಷ ರೂಪಾಯಿ ನೀಡಿದ್ದರು. ಚಿತ್ರರಂಗದಲ್ಲಿನ ದಿನಗೂಲಿ ನೌಕರರಿಗೆ ಅನುಕೂಲ ಆಗಲಿ ಎಂದು ಕೊರೊನಾ ಲಾಕ್​ಡೌನ್​ ಸಮಯದಲ್ಲಿ ಕೂಡ ಅವರು 25 ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು.

ಇದನ್ನೂ ಓದಿ: ಒಂದು ಕೋಟಿ ರೂಪಾಯಿ ದೇಣಿಗೆಯನ್ನು ಕಾರ್ತಿ ಕೈಗೆ ನೀಡಿದ ನಟ ಧನುಷ್​

ಸಿನಿಮಾಗಳ ವಿಚಾರಕ್ಕೆ ಬರುವುದಾದರೆ, ‘ವಾರ್​ 2’, ‘ದೇವರ’ ಚಿತ್ರಗಳಲ್ಲಿ ಜೂನಿಯರ್​ ಎನ್​ಟಿಆರ್​ ನಟಿಸುತ್ತಿದ್ದಾರೆ. ‘ದೇವರ’ ಸಿನಿಮಾದಲ್ಲಿ ಅವರಿಗೆ ಜಾನ್ವಿ ಕಪೂರ್​ ಜೋಡಿ ಆಗಿದ್ದಾರೆ. ‘ವಾರ್​ 2’ ಸಿನಿಮಾದಲ್ಲಿ ಹೃತಿಕ್​ ರೋಷನ್​ ಜೊತೆ ಜೂನಿಯರ್​ ಎನ್​ಟಿಆರ್​ ತೆರೆಹಂಚಿಕೊಳ್ಳುತ್ತಿದ್ದಾರೆ. ಮುಂಬೈನಲ್ಲಿ ಇದರ ಶೂಟಿಂಗ್​ ನಡೆಯುತ್ತಿದೆ.​

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ