AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯುವ ಮುಂಚೆ ‘ದೇವರ’ ನೋಡಬೇಕು: ಎನ್​ಟಿಆರ್ ಅಭಿಮಾನಿ ಕೊನೆ ಆಸೆ

Jr NTR: ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಜೂ ಎನ್​ಟಿಆರ್ ಅಭಿಮಾನಿಯೊಬ್ಬ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾಯುವ ಮುನ್ನ ‘ದೇವರ’ ಸಿನಿಮಾ ನೋಡುವ ಇಚ್ಛೆ ವ್ಯಕ್ತಪಡಿಸಿದ್ದಾನೆ.

ಸಾಯುವ ಮುಂಚೆ ‘ದೇವರ’ ನೋಡಬೇಕು: ಎನ್​ಟಿಆರ್ ಅಭಿಮಾನಿ ಕೊನೆ ಆಸೆ
ಮಂಜುನಾಥ ಸಿ.
|

Updated on: Sep 12, 2024 | 3:43 PM

Share

ಜೂ ಎನ್​ಟಿಆರ್​ ಎಂದರೆ ಜೀವ ಕೊಡುವ ಲಕ್ಷಾಂತರ ಅಭಿಮಾನಿಗಳಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಅತ್ಯಂತ ಹುಚ್ಚ ಅಭಿಮಾನಿ ಹೊಂದಿರುವ ಇಬ್ಬರು ನಟರೆಂದರೆ ಜೂ ಎನ್​ಟಿಆರ್ ಮತ್ತು ಪವನ್ ಕಲ್ಯಾಣ್. ಪ್ರಭಾಸ್​ಗೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರಾದರೂ ಅವರನ್ನು ತುಸು ಎ ಅಥವಾ ಬಿ ಕ್ಲಾಸ್ ಅಭಿಮಾನಿಗಳೆನ್ನಬಹುದು. ಆದರೆ ಅಪ್ಪಟ ದೇಸಿ ಅಭಿಮಾನಿಗಳಿರುವುದು ಪವನ್ ಹಾಗೂ ಜೂ ಎನ್​ಟಿಆರ್​ಗೆ ಮಾತ್ರ. ಇದೀಗ ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ನಡುವೆ ಹಾಸಿಗೆಯಲ್ಲಿ ಮಲಗಿ ಸಾವಿಗೆ ಎದುರು ನೋಡುತ್ತಿರುವ ಅಭಿಮಾನಿಯೊಬ್ಬ ತನ್ನ ಕೊನೆಯ ಆಸೆಯಾಗಿ ‘ದೇವರ’ ಸಿನಿಮಾ ನೋಡುವ ಆಸೆ ವ್ಯಕ್ತಪಡಿಸಿದ್ದಾನೆ.

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ರಕ್ತ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯುತ್ತಿರುವ ತಿರುಪತಿಯ ಕೌಶಿಕ್ ಹೆಸರಿನ ಜೂ ಎನ್​ಟಿಆರ್ ಅಭಿಮಾನಿ, ತಾನು ಸಾಯುವ ಮುನ್ನ ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ನೋಡುವ ಆಸೆ ವ್ಯಕ್ತಪಡಿಸಿದ್ದಾನೆ. ತನ್ನ ಪೋಷಕರ ಬಳಿ ಈ ಬಗ್ಗೆ ಹೇಳಿಕೊಂಡಿರುವ ಕೌಶಿಕ್, ‘ನಾನು ಆದಷ್ಟು ಬೇಗ ಸಾಯುತ್ತೇನೆ ನಾನು ಸಾಯುವ ಮುನ್ನ ‘ದೇವರ’ ಸಿನಿಮಾ ನೋಡಬೇಕು’ ಎಂದಿದ್ದಾನಂತೆ.

ಇದನ್ನೂ ಓದಿ:ಅಮೆರಿದಲ್ಲಿ ದೂಳೆಬ್ಬಿಸುತ್ತಿದೆ ಜೂ ಎನ್​ಟಿಆರ್ ‘ದೇವರ’

ತಿರುಪತಿಯಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಮನವಿ ಮಾಡಿಕೊಂಡಿರುವ ಕೌಶಿಕ್ ಪೋಷಕರು ‘ಜೂ ಎನ್​ಟಿಆರ್ ಹಾಗೂ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ನನ್ನ ಮಗನ ಮನವಿ ಆಲಿಸಬೇಕು ಎಂದಿದ್ದಾರೆ. ಪೋಷಕರು ಮಾತನಾಡಿರುವ ವಿಡಿಯೋ ಇದೀಗ ವೈರಲ್ ಆಗಿದ್ದು, ವಿಡಿಯೋ ಹಂಚಿಕೊಳ್ಳುತ್ತಿರುವ ನೆಟ್ಟಿಗರು, ಜೂ ಎನ್​ಟಿಆರ್ ತಮ್ಮ ಅಭಿಮಾನಿಯ ಮನವಿಗೆ ಸ್ಪಂದಿಸಬೇಕು ಎಂದಿದ್ದಾರೆ.

ಅಂದಹಾಗೆ ಜೂ ಎನ್​ಟಿಆರ್ ನಟಿಸಿರುವ ‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರಲಿದೆ. ನಿನ್ನೆಯಷ್ಟೆ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. ಟ್ರೈಲರ್​ನಲ್ಲಿ ಜೂ ಎನ್​ಟಿಆರ್ ಭರ್ಜರಿಯಾಗಿ ಅಬ್ಬರಿಸಿದ್ದಾರೆ. ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡಿದ್ದು, ನಾಯಕಿಯಾಗಿ ಜಾನ್ಹವಿ ಕಪೂರ್ ನಟಿಸಿದ್ದಾರೆ. ವಿಲನ್ ಆಗಿ ಸೈಫ್ ಅಲಿ ಖಾನ್ ನಟಿಸಿದ್ದಾರೆ. ಸಿನಿಮಾಕ್ಕೆ ಜೂ ಎನ್​ಟಿಆರ್ ಸಹೋದರ ಕಲ್ಯಾಣ್ ರಾಮ್ ಬಂಡವಾಳ ಹೂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!