AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​ಟಿಆರ್ ಹುಟ್ಟುಹಬ್ಬಕ್ಕೆ ಬಳ್ಳಾರಿಯಲ್ಲಿ ಅದ್ಧೂರಿ ಬೈಕ್ ರ್ಯಾಲಿ

ಜೂ ಎನ್​ಟಿಆರ್ ಮೇ 20ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಅಭಿಮಾನಿಗಳು ಒಂದು ದಿನ ಮುಂಚಿತವಾಗಿ ಅದ್ಧೂರಿ ಬೈಕ್ ರ್ಯಾಲಿ ನಡೆಸಿದ್ದಾರೆ. ಅದೂ ಬಳ್ಳಾರಿಯಲ್ಲಿ.

ಜೂ ಎನ್​ಟಿಆರ್ ಹುಟ್ಟುಹಬ್ಬಕ್ಕೆ ಬಳ್ಳಾರಿಯಲ್ಲಿ ಅದ್ಧೂರಿ ಬೈಕ್ ರ್ಯಾಲಿ
ಮಂಜುನಾಥ ಸಿ.
|

Updated on: May 19, 2024 | 10:25 PM

Share

ಟಾಲಿವುಡ್​ನ (Tollywood) ಸ್ಟಾರ್ ನಟ ಆಗಿದ್ದ ಜೂ ಎನ್​ಟಿಆರ್ (Jr NTR), ‘RRR’ ಸಿನಿಮಾದ ಬಳಿಕ ಭಾರತದ ಸೂಪರ್ ಸ್ಟಾರ್ ನಟರಲ್ಲಿ ಒಬ್ಬರಾಗಿದ್ದಾರೆ. ‘ಆರ್​ಆರ್​ಆರ್’ ಸಿನಿಮಾ ಜೂ ಎನ್​ಟಿಆರ್ ಅವರನ್ನು ಗ್ಲೋಬಲ್ ನಟನನ್ನಾಗಿ ಮಾಡಿದೆ. ಮೊದಲೇ ಜೂ ಎನ್​ಟಿಆರ್​ಗೆ ಭಾರಿ ಸಂಖ್ಯೆಯ ಅಭಿಮಾನಿಗಳಿದ್ದರು, ಈಗ ಅಭಿಮಾನಿಗಳ ಸಂಖ್ಯೆ ಎರಡು ಪಟ್ಟಾಗಿದೆ. ಜೂ ಎನ್​ಟಿಆರ್ ಅಭಿಮಾನಿಗಳು, ಅವರ ಸಿನಿಮಾಗಲ ಪಾತ್ರಗಳಂತೆ ರಫ್ ಆಂಟ್ ಟಫ್. ಮೇ 20 ರಂದು ಜೂ ಎನ್​ಟಿಆರ್ ಹುಟ್ಟುಹಬ್ಬವಿದ್ದು ಒಂದು ದಿನ ಮುಂಚಿತವಾಗಿಯೇ ಅಭಿಮಾನಿಗಳು ಸಂಭ್ರಮ ಶುರುವಿಟ್ಟುಕೊಂಡಿದ್ದಾರೆ. ಬಳ್ಳಾರಿಯಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು ಬೈಕ್ ರ್ಯಾಲಿ ಮಾಡಿದ್ದಾರೆ.

ಹಲವಾರು ಮಂದಿ ಯುವಕರು, ಜೂ ಎನ್​ಟಿಆರ್ ಚಿತ್ರ ಹೊಂದಿರುವ ಹಳದಿ ಬಣ್ಣದ ಬಾವುಟಗಳನ್ನು ಹಿಡಿದು ಬೈಕ್​ಗಳಲ್ಲಿ ಮೆರವಣಿಗೆ ಮಾಡಿದ್ದಾರೆ. ಮೆರವಣಿಗೆಯುದ್ದಕ್ಕೂ ‘ಜೈ ಎನ್​ಟಿಆರ್’ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಬಳ್ಳಾರಿ ಕರ್ನಾಟಕದ್ದೇ ಆದರು, ಅಲ್ಲಿ ತೆಲುಗಿನ ಪ್ರಭಾವ ಜೋರಾಗಿದೆ. ಹಾಗಾಗಿ ಅಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿದ್ದಾರೆ. ಎನ್​ಟಿಆರ್ ಅನ್ನು ಕಾಣಲು ಬಳ್ಳಾರಿಯಿಂದ ಹಲವು ಹಯುವಕರು ಹೈದರಾಬಾದ್​ಗೆ ಸಹ ತೆರಳಿದ್ದಾರಂತೆ.

ಇದು ಬಳ್ಳಾರಿಯ ಕತೆಯಾದರೆ ಜಪಾನ್​ನಲ್ಲಿಯೂ ಸಹ ಜೂ ಎನ್​ಟಿಆರ್ ಅಭಿಮಾನಿಗಳು ಒಂದು ದಿನ ಮುಂಚಿತವಾಗಿ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ಜೂ ಎನ್​ಟಿಆರ್​ರ ಬೇರೆ ಬೇರೆ ಸಿನಿಮಾಗಳ ಪಾತ್ರಗಳ ಪೋಸ್ಟರ್​ಗಳನ್ನು ಕಟ್ಟಿ, ಜೂ ಎನ್​ಟಿಆರ್​ ಅವರ ಪೋಸ್ಟರ್​ಗಳನ್ನು ಕಟ್ಟಿ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಇಂದು ನಡೆದ ಎಸ್​ಆರ್​​ಎಚ್ ಪಂದ್ಯದ ನಡುವೆ ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾದ ಹಾಡನ್ನು ಸಹ ಕೇಳಿಲಾಯ್ತು.

ಇದನ್ನೂ ಓದಿ:‘ದೇವರ’ ಹಾಡು ಬಿಡುಗಡೆ, ಭಯ ಹುಟ್ಟಿಸುತ್ತಿರುವ ಜೂ ಎನ್​ಟಿಆರ್

ಆಂಧ್ರ-ತೆಲಂಗಾಣಗಳಲ್ಲಂತೂ ಜೂ ಎನ್​ಟಿಆರ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಲು ತಯಾರಿ ನಡೆಸಿದ್ದಾರೆ. ರಕ್ತದಾನ ಶಿಬಿರಗಳು, ಅನ್ನದಾನಗಳು ಜೋರಾಗಿ ಆಯೋಜಿಸಲಾಗಿದೆ. ಜೂ ಎನ್​ಟಿಆರ್ ಹುಟ್ಟುಹಬ್ಬದ ಪ್ರಯುಕ್ತ ಈಗಾಗಲೇ ‘ದೇವರ’ ಸಿನಿಮಾದ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ಹೊಸ ಸಿನಿಮಾದ ಘೋಷಣೆ ಸಹ ಆಗುವ ಸಾಧ್ಯತೆ ಇದೆ. ಜೊತೆಗೆ ‘ವಾರ್ 2’ ಸಿನಿಮಾದ ಅಪ್​ಡೇಟ್ ಸಹ ಹೊರಬೀಳುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ