AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​ಟಿಆರ್ ಹುಟ್ಟುಹಬ್ಬಕ್ಕೆ ಬಳ್ಳಾರಿಯಲ್ಲಿ ಅದ್ಧೂರಿ ಬೈಕ್ ರ್ಯಾಲಿ

ಜೂ ಎನ್​ಟಿಆರ್ ಮೇ 20ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಅಭಿಮಾನಿಗಳು ಒಂದು ದಿನ ಮುಂಚಿತವಾಗಿ ಅದ್ಧೂರಿ ಬೈಕ್ ರ್ಯಾಲಿ ನಡೆಸಿದ್ದಾರೆ. ಅದೂ ಬಳ್ಳಾರಿಯಲ್ಲಿ.

ಜೂ ಎನ್​ಟಿಆರ್ ಹುಟ್ಟುಹಬ್ಬಕ್ಕೆ ಬಳ್ಳಾರಿಯಲ್ಲಿ ಅದ್ಧೂರಿ ಬೈಕ್ ರ್ಯಾಲಿ
ಮಂಜುನಾಥ ಸಿ.
|

Updated on: May 19, 2024 | 10:25 PM

Share

ಟಾಲಿವುಡ್​ನ (Tollywood) ಸ್ಟಾರ್ ನಟ ಆಗಿದ್ದ ಜೂ ಎನ್​ಟಿಆರ್ (Jr NTR), ‘RRR’ ಸಿನಿಮಾದ ಬಳಿಕ ಭಾರತದ ಸೂಪರ್ ಸ್ಟಾರ್ ನಟರಲ್ಲಿ ಒಬ್ಬರಾಗಿದ್ದಾರೆ. ‘ಆರ್​ಆರ್​ಆರ್’ ಸಿನಿಮಾ ಜೂ ಎನ್​ಟಿಆರ್ ಅವರನ್ನು ಗ್ಲೋಬಲ್ ನಟನನ್ನಾಗಿ ಮಾಡಿದೆ. ಮೊದಲೇ ಜೂ ಎನ್​ಟಿಆರ್​ಗೆ ಭಾರಿ ಸಂಖ್ಯೆಯ ಅಭಿಮಾನಿಗಳಿದ್ದರು, ಈಗ ಅಭಿಮಾನಿಗಳ ಸಂಖ್ಯೆ ಎರಡು ಪಟ್ಟಾಗಿದೆ. ಜೂ ಎನ್​ಟಿಆರ್ ಅಭಿಮಾನಿಗಳು, ಅವರ ಸಿನಿಮಾಗಲ ಪಾತ್ರಗಳಂತೆ ರಫ್ ಆಂಟ್ ಟಫ್. ಮೇ 20 ರಂದು ಜೂ ಎನ್​ಟಿಆರ್ ಹುಟ್ಟುಹಬ್ಬವಿದ್ದು ಒಂದು ದಿನ ಮುಂಚಿತವಾಗಿಯೇ ಅಭಿಮಾನಿಗಳು ಸಂಭ್ರಮ ಶುರುವಿಟ್ಟುಕೊಂಡಿದ್ದಾರೆ. ಬಳ್ಳಾರಿಯಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು ಬೈಕ್ ರ್ಯಾಲಿ ಮಾಡಿದ್ದಾರೆ.

ಹಲವಾರು ಮಂದಿ ಯುವಕರು, ಜೂ ಎನ್​ಟಿಆರ್ ಚಿತ್ರ ಹೊಂದಿರುವ ಹಳದಿ ಬಣ್ಣದ ಬಾವುಟಗಳನ್ನು ಹಿಡಿದು ಬೈಕ್​ಗಳಲ್ಲಿ ಮೆರವಣಿಗೆ ಮಾಡಿದ್ದಾರೆ. ಮೆರವಣಿಗೆಯುದ್ದಕ್ಕೂ ‘ಜೈ ಎನ್​ಟಿಆರ್’ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಬಳ್ಳಾರಿ ಕರ್ನಾಟಕದ್ದೇ ಆದರು, ಅಲ್ಲಿ ತೆಲುಗಿನ ಪ್ರಭಾವ ಜೋರಾಗಿದೆ. ಹಾಗಾಗಿ ಅಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿದ್ದಾರೆ. ಎನ್​ಟಿಆರ್ ಅನ್ನು ಕಾಣಲು ಬಳ್ಳಾರಿಯಿಂದ ಹಲವು ಹಯುವಕರು ಹೈದರಾಬಾದ್​ಗೆ ಸಹ ತೆರಳಿದ್ದಾರಂತೆ.

ಇದು ಬಳ್ಳಾರಿಯ ಕತೆಯಾದರೆ ಜಪಾನ್​ನಲ್ಲಿಯೂ ಸಹ ಜೂ ಎನ್​ಟಿಆರ್ ಅಭಿಮಾನಿಗಳು ಒಂದು ದಿನ ಮುಂಚಿತವಾಗಿ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ಜೂ ಎನ್​ಟಿಆರ್​ರ ಬೇರೆ ಬೇರೆ ಸಿನಿಮಾಗಳ ಪಾತ್ರಗಳ ಪೋಸ್ಟರ್​ಗಳನ್ನು ಕಟ್ಟಿ, ಜೂ ಎನ್​ಟಿಆರ್​ ಅವರ ಪೋಸ್ಟರ್​ಗಳನ್ನು ಕಟ್ಟಿ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಇಂದು ನಡೆದ ಎಸ್​ಆರ್​​ಎಚ್ ಪಂದ್ಯದ ನಡುವೆ ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾದ ಹಾಡನ್ನು ಸಹ ಕೇಳಿಲಾಯ್ತು.

ಇದನ್ನೂ ಓದಿ:‘ದೇವರ’ ಹಾಡು ಬಿಡುಗಡೆ, ಭಯ ಹುಟ್ಟಿಸುತ್ತಿರುವ ಜೂ ಎನ್​ಟಿಆರ್

ಆಂಧ್ರ-ತೆಲಂಗಾಣಗಳಲ್ಲಂತೂ ಜೂ ಎನ್​ಟಿಆರ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಲು ತಯಾರಿ ನಡೆಸಿದ್ದಾರೆ. ರಕ್ತದಾನ ಶಿಬಿರಗಳು, ಅನ್ನದಾನಗಳು ಜೋರಾಗಿ ಆಯೋಜಿಸಲಾಗಿದೆ. ಜೂ ಎನ್​ಟಿಆರ್ ಹುಟ್ಟುಹಬ್ಬದ ಪ್ರಯುಕ್ತ ಈಗಾಗಲೇ ‘ದೇವರ’ ಸಿನಿಮಾದ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ಹೊಸ ಸಿನಿಮಾದ ಘೋಷಣೆ ಸಹ ಆಗುವ ಸಾಧ್ಯತೆ ಇದೆ. ಜೊತೆಗೆ ‘ವಾರ್ 2’ ಸಿನಿಮಾದ ಅಪ್​ಡೇಟ್ ಸಹ ಹೊರಬೀಳುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು