AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​ಟಿಆರ್ ಹುಟ್ಟುಹಬ್ಬಕ್ಕೆ ಬಳ್ಳಾರಿಯಲ್ಲಿ ಅದ್ಧೂರಿ ಬೈಕ್ ರ್ಯಾಲಿ

ಜೂ ಎನ್​ಟಿಆರ್ ಮೇ 20ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಅಭಿಮಾನಿಗಳು ಒಂದು ದಿನ ಮುಂಚಿತವಾಗಿ ಅದ್ಧೂರಿ ಬೈಕ್ ರ್ಯಾಲಿ ನಡೆಸಿದ್ದಾರೆ. ಅದೂ ಬಳ್ಳಾರಿಯಲ್ಲಿ.

ಜೂ ಎನ್​ಟಿಆರ್ ಹುಟ್ಟುಹಬ್ಬಕ್ಕೆ ಬಳ್ಳಾರಿಯಲ್ಲಿ ಅದ್ಧೂರಿ ಬೈಕ್ ರ್ಯಾಲಿ
ಮಂಜುನಾಥ ಸಿ.
|

Updated on: May 19, 2024 | 10:25 PM

Share

ಟಾಲಿವುಡ್​ನ (Tollywood) ಸ್ಟಾರ್ ನಟ ಆಗಿದ್ದ ಜೂ ಎನ್​ಟಿಆರ್ (Jr NTR), ‘RRR’ ಸಿನಿಮಾದ ಬಳಿಕ ಭಾರತದ ಸೂಪರ್ ಸ್ಟಾರ್ ನಟರಲ್ಲಿ ಒಬ್ಬರಾಗಿದ್ದಾರೆ. ‘ಆರ್​ಆರ್​ಆರ್’ ಸಿನಿಮಾ ಜೂ ಎನ್​ಟಿಆರ್ ಅವರನ್ನು ಗ್ಲೋಬಲ್ ನಟನನ್ನಾಗಿ ಮಾಡಿದೆ. ಮೊದಲೇ ಜೂ ಎನ್​ಟಿಆರ್​ಗೆ ಭಾರಿ ಸಂಖ್ಯೆಯ ಅಭಿಮಾನಿಗಳಿದ್ದರು, ಈಗ ಅಭಿಮಾನಿಗಳ ಸಂಖ್ಯೆ ಎರಡು ಪಟ್ಟಾಗಿದೆ. ಜೂ ಎನ್​ಟಿಆರ್ ಅಭಿಮಾನಿಗಳು, ಅವರ ಸಿನಿಮಾಗಲ ಪಾತ್ರಗಳಂತೆ ರಫ್ ಆಂಟ್ ಟಫ್. ಮೇ 20 ರಂದು ಜೂ ಎನ್​ಟಿಆರ್ ಹುಟ್ಟುಹಬ್ಬವಿದ್ದು ಒಂದು ದಿನ ಮುಂಚಿತವಾಗಿಯೇ ಅಭಿಮಾನಿಗಳು ಸಂಭ್ರಮ ಶುರುವಿಟ್ಟುಕೊಂಡಿದ್ದಾರೆ. ಬಳ್ಳಾರಿಯಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು ಬೈಕ್ ರ್ಯಾಲಿ ಮಾಡಿದ್ದಾರೆ.

ಹಲವಾರು ಮಂದಿ ಯುವಕರು, ಜೂ ಎನ್​ಟಿಆರ್ ಚಿತ್ರ ಹೊಂದಿರುವ ಹಳದಿ ಬಣ್ಣದ ಬಾವುಟಗಳನ್ನು ಹಿಡಿದು ಬೈಕ್​ಗಳಲ್ಲಿ ಮೆರವಣಿಗೆ ಮಾಡಿದ್ದಾರೆ. ಮೆರವಣಿಗೆಯುದ್ದಕ್ಕೂ ‘ಜೈ ಎನ್​ಟಿಆರ್’ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಬಳ್ಳಾರಿ ಕರ್ನಾಟಕದ್ದೇ ಆದರು, ಅಲ್ಲಿ ತೆಲುಗಿನ ಪ್ರಭಾವ ಜೋರಾಗಿದೆ. ಹಾಗಾಗಿ ಅಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿದ್ದಾರೆ. ಎನ್​ಟಿಆರ್ ಅನ್ನು ಕಾಣಲು ಬಳ್ಳಾರಿಯಿಂದ ಹಲವು ಹಯುವಕರು ಹೈದರಾಬಾದ್​ಗೆ ಸಹ ತೆರಳಿದ್ದಾರಂತೆ.

ಇದು ಬಳ್ಳಾರಿಯ ಕತೆಯಾದರೆ ಜಪಾನ್​ನಲ್ಲಿಯೂ ಸಹ ಜೂ ಎನ್​ಟಿಆರ್ ಅಭಿಮಾನಿಗಳು ಒಂದು ದಿನ ಮುಂಚಿತವಾಗಿ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ಜೂ ಎನ್​ಟಿಆರ್​ರ ಬೇರೆ ಬೇರೆ ಸಿನಿಮಾಗಳ ಪಾತ್ರಗಳ ಪೋಸ್ಟರ್​ಗಳನ್ನು ಕಟ್ಟಿ, ಜೂ ಎನ್​ಟಿಆರ್​ ಅವರ ಪೋಸ್ಟರ್​ಗಳನ್ನು ಕಟ್ಟಿ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಇಂದು ನಡೆದ ಎಸ್​ಆರ್​​ಎಚ್ ಪಂದ್ಯದ ನಡುವೆ ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾದ ಹಾಡನ್ನು ಸಹ ಕೇಳಿಲಾಯ್ತು.

ಇದನ್ನೂ ಓದಿ:‘ದೇವರ’ ಹಾಡು ಬಿಡುಗಡೆ, ಭಯ ಹುಟ್ಟಿಸುತ್ತಿರುವ ಜೂ ಎನ್​ಟಿಆರ್

ಆಂಧ್ರ-ತೆಲಂಗಾಣಗಳಲ್ಲಂತೂ ಜೂ ಎನ್​ಟಿಆರ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಲು ತಯಾರಿ ನಡೆಸಿದ್ದಾರೆ. ರಕ್ತದಾನ ಶಿಬಿರಗಳು, ಅನ್ನದಾನಗಳು ಜೋರಾಗಿ ಆಯೋಜಿಸಲಾಗಿದೆ. ಜೂ ಎನ್​ಟಿಆರ್ ಹುಟ್ಟುಹಬ್ಬದ ಪ್ರಯುಕ್ತ ಈಗಾಗಲೇ ‘ದೇವರ’ ಸಿನಿಮಾದ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ಹೊಸ ಸಿನಿಮಾದ ಘೋಷಣೆ ಸಹ ಆಗುವ ಸಾಧ್ಯತೆ ಇದೆ. ಜೊತೆಗೆ ‘ವಾರ್ 2’ ಸಿನಿಮಾದ ಅಪ್​ಡೇಟ್ ಸಹ ಹೊರಬೀಳುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!