ಜೂ ಎನ್​ಟಿಆರ್ ಅಭಿಮಾನಿಗಳ ಹುಚ್ಚಾಟ, ‘ಸಿಹಾಂದ್ರಿ’ ರಿರಿಲೀಸ್​ ವೇಳೆ ಚಿತ್ರಮಂದಿರದೊಳಗೆ ಬೆಂಕಿ

Jr NTR Fans: ಜೂ ಎನ್​ಟಿಆರ್ ಅಭಿಮಾನಿಗಳು ಮತ್ತೊಮ್ಮೆ ಹುಚ್ಚಾಟ ಮೆರೆದಿದ್ದಾರೆ. ಸಿಂಹಾದ್ರಿ ಸಿನಿಮಾ ಪ್ರದರ್ಶನವಾಗುತ್ತಿದ್ದ ಚಿತ್ರಮಂದಿರದ ಒಳಗೆ ಬೆಂಕಿ ಹಚ್ಚಿದ್ದಾರೆ.

ಜೂ ಎನ್​ಟಿಆರ್ ಅಭಿಮಾನಿಗಳ ಹುಚ್ಚಾಟ, 'ಸಿಹಾಂದ್ರಿ' ರಿರಿಲೀಸ್​ ವೇಳೆ ಚಿತ್ರಮಂದಿರದೊಳಗೆ ಬೆಂಕಿ
ಜೂ ಎನ್​ಟಿಆರ್
Follow us
|

Updated on: May 22, 2023 | 5:29 PM

ತೆಲುಗು ಚಿತ್ರರಂಗದ (Telugu Movie Industry) ಸ್ಟಾರ್ ನಟರ ಅಭಿಮಾನಿಗಳ (Star Actor Fans) ಹುಚ್ಚಾಟ ದಿನೇ-ದಿನೇ ಮಿತಿ ಮೀರುತ್ತಿದೆ. ಈ ಹಿಂದೆ ಪವನ್ ಕಲ್ಯಾಣ್ (Pawan Kalyan) ಹಾಗೂ ಪ್ರಭಾಸ್ (Prabhas) ಅಭಿಮಾನಿಗಳು ಮೆಚ್ಚಿನ ನಟನ ಸಿನಿಮಾ ಬಿಡುಗಡೆ ವೇಳೆ ಚಿತ್ರಮಂದಿರಗಳಿಗೆ ಹಾನಿ ಮಾಡಿದ್ದರು. ಇದೀಗ ಜೂ ಎನ್​ಟಿಆರ್ (Jr NTR) ಅಭಿಮಾನಿಗಳು, ತಮ್ಮ ಮೆಚ್ಚಿನ ನಟನ ಹಳೆಯ ಹಿಟ್ ಸಿನಿಮಾ ರಿ ರಿಲೀಸ್ ವೇಳೆ ಚಿತ್ರಮಂದಿರದೊಳಗೆ ಪಟಾಕಿ ಹೊಡೆದು ಸೀಟುಗಳಿಗೆ ಬೆಂಕಿ ಹಚ್ಚಿದ್ದಾರೆ.

ಜೂ ಎನ್​ಟಿಆರ್​ರ ಹುಟ್ಟುಹಬ್ಬದ ವಿಶೇಷವಾಗಿ ಮೇ 20 ಜೂ ಎನ್​ಟಿಆರ್​ರ 2003 ರ ಸೂಪರ್ ಹಿಟ್ ಸಿನಿಮಾ ‘ಸಿಂಹಾದ್ರಿ’ ಮರು ಬಿಡುಗಡೆ ಮಾಡಲಾಗಿದೆ. ಈ ಮರುಬಿಡುಗಡೆಗಾಗಿ ವಿಶೇಷ ಪ್ರೀ ರಿಲೀಸ್ ಕಾರ್ಯಕ್ರಮವನ್ನೂ ಆಯೋಜಿಸಲಾಗಿತ್ತು. ನಿರೀಕ್ಷೆಯಂತೆಯೇ ಸಿಂಹಾದ್ರಿ ಪ್ರೀ ರಿಲೀಸ್​ಗೆ ಅದ್ಭುತ ಪ್ರತಿಕ್ರಿಯೆ ಅಭಿಮಾನಿಗಳಿಂದ ವ್ಯಕ್ತವಾಗಿದೆ. ಆದರೆ ಕೆಲವೆಡೆ ಜೂ ಎನ್​ಟಿಆರ್ ಅಭಿಮಾನಿಗಳು ಅತಿರೇಕದ ವರ್ತನೆ ತೋರಿದ್ದರಿಂದ ಚಿತ್ರಮಂದಿರಗಳಿಗೆ ಹಾನಿ ಆಗಿದೆ.

ವಿಜಯವಾಡದ ಅಪ್ಸರಾ ಚಿತ್ರಮಂದಿರದಲ್ಲಿ ಸಿಂಹಾದ್ರಿ ಸಿನಿಮಾ ರೀ ರಿಲೀಸ್​ ಆಗಿತ್ತು ಜೂ ಎನ್​ಟಿಆರ್ ಅಭಿಮಾನಿಗಳು ಕೂಗಾಡುತ್ತಾ ಕಿರುಚಾಡುತ್ತಾ ಅತ್ಯುತ್ಸಾಹಭರಿತವಾಗಿ ಸಿನಿಮಾ ನೋಡುವ ವೇಳೆ ಕೆಲವು ಅಭಿಮಾನಿಗಳು ಚಿತ್ರಮಂದಿರದ ಒಳಗೆ ಪಟಾಕಿ ಹಚ್ಚಿದ್ದಾರೆ. ಇದರಿಂದಾಗಿ ಚಿತ್ರಮಂದಿರದ ಒಳಗೆ ಬೆಂಕಿ ಹೊತ್ತುಕೊಂಡಿದೆ. ಚಿತ್ರಮಂದಿರದ ಹಲವು ಸೀಟುಗಳು ಬೆಂಕಿಗೆ ಆಹುತಿಯಾಗಿವೆ. ಈ ಕಾರಣದಿಂದ ಸಿನಿಮಾ ಪ್ರದರ್ಶನವನ್ನು ಸ್ಥಗಿತಗೊಳಿಸಿ ಪ್ರೇಕ್ಷಕರನ್ನು ಹೊರಗೆ ಕಳಿಸಲಾಗಿದೆ.

ಜೂ ಎನ್​ಟಿಆರ್ ಅಭಿಮಾನಿಗಳ ಈ ಉದ್ಧಟತನದ ವರ್ತನೆಯನ್ನು ಹಲವು ನೆಟ್ಟಿಗರು ಖಂಡಿಸಿದ್ದಾರೆ. ಇಂಥಹಾ ಅತಿರೇಕದ ವರ್ತನೆಯನ್ನು ಸಹಿಸಲಾಗದು, ಈ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ನಿಮ್ಮ ಅಭಿಮಾನಕ್ಕೆ, ಖುಷಿಗೆ ಚಿತ್ರಮಂದಿರದ ಮಾಲೀಕ ಬೆಲೆ ತೆರಬೇಕಾಗಿದೆ ಹೀಗೆ ಮಾಡಬೇಡಿ ಎಂದು ಕೆಲವು ಜೂ ಎನ್​ಟಿಆರ್ ಅಭಿಮಾನಿಗಳು ಅನುಕಂಪ ವ್ಯಕ್ತಪಡಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮಚಲಿಪಟ್ಟಣದಲ್ಲಿ ಸಹ ಜೂ ಎನ್​ಟಿಆರ್ ಅಭಿಮಾನಿಗಳು ಹುಚ್ವಾಟ ಪ್ರದರ್ಶಿಸಿದ್ದರು. ಜೂ ಎನ್​ಟಿಆರ್​ರ ಹೊಸ ಸಿನಿಮಾ ದೇವರ ಪೋಸ್ಟರ್​ ಅನ್ನು ದೊಡ್ಡದಾಗಿ ಪ್ರಿಂಟ್ ಹಾಕಿಸಿ ಅದರ ಮುಂದೆ ಮೇಕೆಯೊಂದನ್ನು ಬಹಿರಂಗವಾಗಿ ಕಡಿದು ಅದರ ರಕ್ತದಿಂದ ದೇವರ ಸಿನಿಮಾದ ಪೋಸ್ಟರ್​ಗೆ ಅಭಿಷೇಕ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಹಲವರು ಈ ಬಹಿರಂಗ ಹಿಂಸೆಯನ್ನು ಖಂಡಿಸಿದ್ದಾರೆ. ಮಾಂಸಕ್ಕಾಗಿ ಪ್ರಾಣಿಗಳನ್ನು ಕಡಿಯುವುದು ಸರಿ, ಆದರೆ ಪೋಸ್ಟರ್​ಗೆ ರಕ್ತದ ಅಭಿಷೇಕ ಮಾಡಲು ಅದೂ ಬಹಿರಂಗವಾಗಿ ಹೀಗೆ ಹಿಂಸೆ ಮೆರೆದಿರುವುದು ಸರಿಯಲ್ಲ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಜೂ ಎನ್​ಟಿಆರ್​ಗೆ ಟ್ವಿಟರ್​ನಲ್ಲಿ ಟ್ಯಾಗ್ ಮಾಡಿ ನಿಮ್ಮ ಅಭಿಮಾನಿಗಳಗೆ ತುಸು ಬುದ್ಧಿಹೇಳಿ ಎಂದು ಒತ್ತಾಯಿಸಿದ್ದಾರೆ. ಇನ್ನು ಕೆಲವರು ಇವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಜೂ ಎನ್​ಟಿಆರ್ ಅಭಿಮಾನಿಗಳ ಹುಚ್ಚಾಟ, ಬುದ್ಧಿ ಹೇಳಿ ಎಂದ ನೆಟ್ಟಿಗರು

ಜೂ ಎನ್​ಟಿಆರ್ ನಟಿಸಿ, ಎಸ್​ಎಸ್ ರಾಜಮೌಳಿ ನಿರ್ದೇಶನ ಮಾಡಿದ್ದ ‘ಸಿಂಹಾದ್ರಿ’ ಸಿನಿಮಾವು 2003 ರಲ್ಲಿ ಬಿಡುಗಡೆ ಆಗಿತ್ತು. ಭೂಮಿಕಾ, ಅಂಕಿತಾ, ಬ್ರಹ್ಮಾನಂದಂ, ನಾಸರ್ ಇನ್ನೂ ಹಲವರು ನಟಿಸಿದ್ದ ಈ ಸಿನಿಮಾ ಬಿಡುಗಡೆ ಆಗಿದ್ದ ಸಮಯದಲ್ಲಿ ದೊಡ್ಡ ಹಿಟ್ ಆಗಿತ್ತು. ಇದೀಗ ಅದೇ ಸಿನಿಮಾ 4ಕೆ ತಂತ್ರಜ್ಞಾನದೊಟ್ಟಿಗೆ ಮರು ಬಿಡುಗಡೆ ಆಗಿದೆ. ಜೂ ಎನ್​ಟಿಆರ್ ಅಭಿಮಾನಿಗಳು ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು