AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​ಟಿಆರ್ ಅಭಿಮಾನಿಗಳ ಹುಚ್ಚಾಟ, ‘ಸಿಹಾಂದ್ರಿ’ ರಿರಿಲೀಸ್​ ವೇಳೆ ಚಿತ್ರಮಂದಿರದೊಳಗೆ ಬೆಂಕಿ

Jr NTR Fans: ಜೂ ಎನ್​ಟಿಆರ್ ಅಭಿಮಾನಿಗಳು ಮತ್ತೊಮ್ಮೆ ಹುಚ್ಚಾಟ ಮೆರೆದಿದ್ದಾರೆ. ಸಿಂಹಾದ್ರಿ ಸಿನಿಮಾ ಪ್ರದರ್ಶನವಾಗುತ್ತಿದ್ದ ಚಿತ್ರಮಂದಿರದ ಒಳಗೆ ಬೆಂಕಿ ಹಚ್ಚಿದ್ದಾರೆ.

ಜೂ ಎನ್​ಟಿಆರ್ ಅಭಿಮಾನಿಗಳ ಹುಚ್ಚಾಟ, 'ಸಿಹಾಂದ್ರಿ' ರಿರಿಲೀಸ್​ ವೇಳೆ ಚಿತ್ರಮಂದಿರದೊಳಗೆ ಬೆಂಕಿ
ಜೂ ಎನ್​ಟಿಆರ್
ಮಂಜುನಾಥ ಸಿ.
|

Updated on: May 22, 2023 | 5:29 PM

Share

ತೆಲುಗು ಚಿತ್ರರಂಗದ (Telugu Movie Industry) ಸ್ಟಾರ್ ನಟರ ಅಭಿಮಾನಿಗಳ (Star Actor Fans) ಹುಚ್ಚಾಟ ದಿನೇ-ದಿನೇ ಮಿತಿ ಮೀರುತ್ತಿದೆ. ಈ ಹಿಂದೆ ಪವನ್ ಕಲ್ಯಾಣ್ (Pawan Kalyan) ಹಾಗೂ ಪ್ರಭಾಸ್ (Prabhas) ಅಭಿಮಾನಿಗಳು ಮೆಚ್ಚಿನ ನಟನ ಸಿನಿಮಾ ಬಿಡುಗಡೆ ವೇಳೆ ಚಿತ್ರಮಂದಿರಗಳಿಗೆ ಹಾನಿ ಮಾಡಿದ್ದರು. ಇದೀಗ ಜೂ ಎನ್​ಟಿಆರ್ (Jr NTR) ಅಭಿಮಾನಿಗಳು, ತಮ್ಮ ಮೆಚ್ಚಿನ ನಟನ ಹಳೆಯ ಹಿಟ್ ಸಿನಿಮಾ ರಿ ರಿಲೀಸ್ ವೇಳೆ ಚಿತ್ರಮಂದಿರದೊಳಗೆ ಪಟಾಕಿ ಹೊಡೆದು ಸೀಟುಗಳಿಗೆ ಬೆಂಕಿ ಹಚ್ಚಿದ್ದಾರೆ.

ಜೂ ಎನ್​ಟಿಆರ್​ರ ಹುಟ್ಟುಹಬ್ಬದ ವಿಶೇಷವಾಗಿ ಮೇ 20 ಜೂ ಎನ್​ಟಿಆರ್​ರ 2003 ರ ಸೂಪರ್ ಹಿಟ್ ಸಿನಿಮಾ ‘ಸಿಂಹಾದ್ರಿ’ ಮರು ಬಿಡುಗಡೆ ಮಾಡಲಾಗಿದೆ. ಈ ಮರುಬಿಡುಗಡೆಗಾಗಿ ವಿಶೇಷ ಪ್ರೀ ರಿಲೀಸ್ ಕಾರ್ಯಕ್ರಮವನ್ನೂ ಆಯೋಜಿಸಲಾಗಿತ್ತು. ನಿರೀಕ್ಷೆಯಂತೆಯೇ ಸಿಂಹಾದ್ರಿ ಪ್ರೀ ರಿಲೀಸ್​ಗೆ ಅದ್ಭುತ ಪ್ರತಿಕ್ರಿಯೆ ಅಭಿಮಾನಿಗಳಿಂದ ವ್ಯಕ್ತವಾಗಿದೆ. ಆದರೆ ಕೆಲವೆಡೆ ಜೂ ಎನ್​ಟಿಆರ್ ಅಭಿಮಾನಿಗಳು ಅತಿರೇಕದ ವರ್ತನೆ ತೋರಿದ್ದರಿಂದ ಚಿತ್ರಮಂದಿರಗಳಿಗೆ ಹಾನಿ ಆಗಿದೆ.

ವಿಜಯವಾಡದ ಅಪ್ಸರಾ ಚಿತ್ರಮಂದಿರದಲ್ಲಿ ಸಿಂಹಾದ್ರಿ ಸಿನಿಮಾ ರೀ ರಿಲೀಸ್​ ಆಗಿತ್ತು ಜೂ ಎನ್​ಟಿಆರ್ ಅಭಿಮಾನಿಗಳು ಕೂಗಾಡುತ್ತಾ ಕಿರುಚಾಡುತ್ತಾ ಅತ್ಯುತ್ಸಾಹಭರಿತವಾಗಿ ಸಿನಿಮಾ ನೋಡುವ ವೇಳೆ ಕೆಲವು ಅಭಿಮಾನಿಗಳು ಚಿತ್ರಮಂದಿರದ ಒಳಗೆ ಪಟಾಕಿ ಹಚ್ಚಿದ್ದಾರೆ. ಇದರಿಂದಾಗಿ ಚಿತ್ರಮಂದಿರದ ಒಳಗೆ ಬೆಂಕಿ ಹೊತ್ತುಕೊಂಡಿದೆ. ಚಿತ್ರಮಂದಿರದ ಹಲವು ಸೀಟುಗಳು ಬೆಂಕಿಗೆ ಆಹುತಿಯಾಗಿವೆ. ಈ ಕಾರಣದಿಂದ ಸಿನಿಮಾ ಪ್ರದರ್ಶನವನ್ನು ಸ್ಥಗಿತಗೊಳಿಸಿ ಪ್ರೇಕ್ಷಕರನ್ನು ಹೊರಗೆ ಕಳಿಸಲಾಗಿದೆ.

ಜೂ ಎನ್​ಟಿಆರ್ ಅಭಿಮಾನಿಗಳ ಈ ಉದ್ಧಟತನದ ವರ್ತನೆಯನ್ನು ಹಲವು ನೆಟ್ಟಿಗರು ಖಂಡಿಸಿದ್ದಾರೆ. ಇಂಥಹಾ ಅತಿರೇಕದ ವರ್ತನೆಯನ್ನು ಸಹಿಸಲಾಗದು, ಈ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ನಿಮ್ಮ ಅಭಿಮಾನಕ್ಕೆ, ಖುಷಿಗೆ ಚಿತ್ರಮಂದಿರದ ಮಾಲೀಕ ಬೆಲೆ ತೆರಬೇಕಾಗಿದೆ ಹೀಗೆ ಮಾಡಬೇಡಿ ಎಂದು ಕೆಲವು ಜೂ ಎನ್​ಟಿಆರ್ ಅಭಿಮಾನಿಗಳು ಅನುಕಂಪ ವ್ಯಕ್ತಪಡಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮಚಲಿಪಟ್ಟಣದಲ್ಲಿ ಸಹ ಜೂ ಎನ್​ಟಿಆರ್ ಅಭಿಮಾನಿಗಳು ಹುಚ್ವಾಟ ಪ್ರದರ್ಶಿಸಿದ್ದರು. ಜೂ ಎನ್​ಟಿಆರ್​ರ ಹೊಸ ಸಿನಿಮಾ ದೇವರ ಪೋಸ್ಟರ್​ ಅನ್ನು ದೊಡ್ಡದಾಗಿ ಪ್ರಿಂಟ್ ಹಾಕಿಸಿ ಅದರ ಮುಂದೆ ಮೇಕೆಯೊಂದನ್ನು ಬಹಿರಂಗವಾಗಿ ಕಡಿದು ಅದರ ರಕ್ತದಿಂದ ದೇವರ ಸಿನಿಮಾದ ಪೋಸ್ಟರ್​ಗೆ ಅಭಿಷೇಕ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಹಲವರು ಈ ಬಹಿರಂಗ ಹಿಂಸೆಯನ್ನು ಖಂಡಿಸಿದ್ದಾರೆ. ಮಾಂಸಕ್ಕಾಗಿ ಪ್ರಾಣಿಗಳನ್ನು ಕಡಿಯುವುದು ಸರಿ, ಆದರೆ ಪೋಸ್ಟರ್​ಗೆ ರಕ್ತದ ಅಭಿಷೇಕ ಮಾಡಲು ಅದೂ ಬಹಿರಂಗವಾಗಿ ಹೀಗೆ ಹಿಂಸೆ ಮೆರೆದಿರುವುದು ಸರಿಯಲ್ಲ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಜೂ ಎನ್​ಟಿಆರ್​ಗೆ ಟ್ವಿಟರ್​ನಲ್ಲಿ ಟ್ಯಾಗ್ ಮಾಡಿ ನಿಮ್ಮ ಅಭಿಮಾನಿಗಳಗೆ ತುಸು ಬುದ್ಧಿಹೇಳಿ ಎಂದು ಒತ್ತಾಯಿಸಿದ್ದಾರೆ. ಇನ್ನು ಕೆಲವರು ಇವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಜೂ ಎನ್​ಟಿಆರ್ ಅಭಿಮಾನಿಗಳ ಹುಚ್ಚಾಟ, ಬುದ್ಧಿ ಹೇಳಿ ಎಂದ ನೆಟ್ಟಿಗರು

ಜೂ ಎನ್​ಟಿಆರ್ ನಟಿಸಿ, ಎಸ್​ಎಸ್ ರಾಜಮೌಳಿ ನಿರ್ದೇಶನ ಮಾಡಿದ್ದ ‘ಸಿಂಹಾದ್ರಿ’ ಸಿನಿಮಾವು 2003 ರಲ್ಲಿ ಬಿಡುಗಡೆ ಆಗಿತ್ತು. ಭೂಮಿಕಾ, ಅಂಕಿತಾ, ಬ್ರಹ್ಮಾನಂದಂ, ನಾಸರ್ ಇನ್ನೂ ಹಲವರು ನಟಿಸಿದ್ದ ಈ ಸಿನಿಮಾ ಬಿಡುಗಡೆ ಆಗಿದ್ದ ಸಮಯದಲ್ಲಿ ದೊಡ್ಡ ಹಿಟ್ ಆಗಿತ್ತು. ಇದೀಗ ಅದೇ ಸಿನಿಮಾ 4ಕೆ ತಂತ್ರಜ್ಞಾನದೊಟ್ಟಿಗೆ ಮರು ಬಿಡುಗಡೆ ಆಗಿದೆ. ಜೂ ಎನ್​ಟಿಆರ್ ಅಭಿಮಾನಿಗಳು ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?