AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ನೀಲ್ ನಿರ್ಧಾರದಿಂದ ಬೇಸರಗೊಂಡ ಜೂ.ಎನ್​ಟಿಆರ್ ಅಭಿಮಾನಿಗಳು

Prashanth Neel: ಪ್ರಶಾಂತ್ ನೀಲ್ ಅವರು ‘ಸಲಾರ್: ಸೀಸ್​ಫೈರ್’ ಚಿತ್ರದ ಕೆಲಸಗಳನ್ನು ಪೂರ್ಣಗೊಳಿಸಿದ್ದಾರೆ. ಇದಾದ ಬಳಿಕ ಅವರು ‘ಸಲಾರ್ 2’ ಕೈಗೆತ್ತಿಕೊಳ್ಳುತ್ತಾರಾ ಅಥವಾ ‘NTR31’ ಸಿನಿಮಾ ಮಾಡುತ್ತಾರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ಪ್ರಶಾಂತ್ ನೀಲ್ ನಿರ್ಧಾರದಿಂದ ಬೇಸರಗೊಂಡ ಜೂ.ಎನ್​ಟಿಆರ್ ಅಭಿಮಾನಿಗಳು
ಪ್ರಶಾಂತ್ ನೀಲ್-ಜೂನಿಯರ್ ಎನ್​ಟಿಆರ್​
ರಾಜೇಶ್ ದುಗ್ಗುಮನೆ
|

Updated on: Jul 10, 2023 | 7:10 AM

Share

ಪ್ರಶಾಂತ್ ನೀಲ್ (Prashanth Neel) ಅವರ ನಿರ್ದೇಶನದ, ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಟೀಸರ್ ಇತ್ತೀಚೆಗಷ್ಟೇ ರಿಲೀಸ್ ಆಗಿ ಸದ್ದು ಮಾಡಿತ್ತು. ಈ ಟೀಸರ್​ನಲ್ಲಿ ‘ಸಲಾರ್ 2’ ಬರುವ ವಿಚಾರವನ್ನು ರಿವೀಲ್ ಮಾಡಲಾಯಿತು. ಸದ್ಯ ಈ ವಿಚಾರ ಜೂನಿಯರ್ ಎನ್​ಟಿಆರ್​ ಅಭಿಮಾನಿಗಳ ಚಿಂತೆಗೆ ಕಾರಣ ಆಗಿದೆ. ಇದಕ್ಕೂ ಕಾರಣ ಇದೆ. ಪ್ರಶಾಂತ್ ನೀಲ್ ಹಾಗೂ ಜೂನಿಯರ್​ ಎನ್​ಟಿಆರ್ (Jr NTR) ಸಿನಿಮಾ ಅನೌನ್ಸ್ ಆಗಿ ಈಗಾಗಲೇ ಬಹಳ ಸಮಯ ಕಳೆದಿದೆ. ಇವರ ಕಾಂಬಿನೇಷನ್​ನ ಸಿನಿಮಾ ನೋಡಲು ಕಾದಿರುವ ಫ್ಯಾನ್ಸ್​ಗೆ ‘ಸಲಾರ್ 2’ ನಿರ್ಧಾರ ಕೊಂಚ ಆಂತಕ ಮೂಡಿಸಿದೆ.

ಜೂನಿಯರ್ ಎನ್​ಟಿಆರ್ ಅವರು ‘ಆರ್​ಆರ್​ಆರ್’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಕಂಡಿದ್ದಾರೆ. ರಾಜಮೌಳಿ ಜೊತೆ ಕೆಲಸ ಮಾಡಿದ ಬಳಿಕ ಒಂದು ಸೋಲು ಖಚಿತ ಎನ್ನುವ ನಂಬಿಕೆ ಅನೇಕರಲ್ಲಿದೆ. ಈ ಕಾರಣಕ್ಕೆ ‘ದೇವರ’ ಸಿನಿಮಾ ಸೋಲಬಹುದೇ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿದೆ. ಒಂದೊಮ್ಮೆ ಹಾಗಾದರೆ ‘NTR31’ ಸಿನಿಮಾ ಬಗ್ಗೆ ಅವರು ಹೆಚ್ಚು ಗಮನ ಹರಿಸಬೇಕಾಗುತ್ತದೆ.

ಸದ್ಯ ಪ್ರಶಾಂತ್ ನೀಲ್ ಅವರು ‘ಸಲಾರ್: ಸೀಸ್​ಫೈರ್’ ಚಿತ್ರದ ಕೆಲಸಗಳನ್ನು ಪೂರ್ಣಗೊಳಿಸಿದ್ದಾರೆ. ಇದಾದ ಬಳಿಕ ಅವರು ‘ಸಲಾರ್ 2’ ಕೈಗೆತ್ತಿಕೊಳ್ಳುತ್ತಾರಾ ಅಥವಾ ‘NTR31’ ಸಿನಿಮಾ ಮಾಡುತ್ತಾರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ಇನ್ನು, ಜೂನಿಯರ್ ಎನ್​ಟಿಆರ್​ ಕೂಡ ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ‘ದೇವರ’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಇದರ ಜೊತೆಗೆ ‘ವಾರ್ 2’ ಚಿತ್ರ ಕೂಡ ಒಪ್ಪಿಕೊಂಡಿದ್ದು, ಹೃತಿಕ್ ರೋಷನ್​ಗೆ ಜೊತೆಯಾಗಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ.

ಇದನ್ನೂ ಓದಿ: ‘ಸಲಾರ್’ ಟೀಸರ್​ನಿಂದ ‘ಕೆಜಿಎಫ್ 2’ ಚಿತ್ರಕ್ಕೆ ಲಿಂಕ್ ಕೊಟ್ಟ ಪ್ರಶಾಂತ್ ನೀಲ್; ಇವುಗಳನ್ನು ಗಮನಿಸಿದ್ರಾ?

ಇತ್ತೀಚೆಗೆ ವರದಿ ಆದ ಪ್ರಕಾರ ‘ದೇವರ’ ಸಿನಿಮಾ ಕೆಲಸ ಪೂರ್ಣಗೊಂಡ ಬಳಿಕ ಜೂನಿಯರ್ ಎನ್​ಟಿಆರ್ ಅವರು ‘ವಾರ್ 2’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗಿದೆ. ಹಾಗಾದಲ್ಲಿ ಪ್ರಶಾಂತ್ ನೀಲ್ ಅವರು ‘ಸಲಾರ್ 2’ ಅಥವಾ ‘ಕೆಜಿಎಫ್ 3’ ಕೆಲಸ ಶುರು ಮಾಡಬೇಕಾಗುತ್ತದೆ.

ಯಶ್ ಹೊಸ ಸಿನಿಮಾ ಇನ್ನಷ್ಟೇ ಘೋಷಣೆ ಆಗಬೇಕಿದೆ. ‘ಸಲಾರ್​’ ಸಿನಿಮಾ ರಿಲೀಸ್ ಆದ ಬಳಿಕ ಪ್ರಭಾಸ್ ಇತರ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ